Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiradi Ghat: ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತ, ಆದರೆ ಷರತ್ತುಗಳು ಅನ್ವಯ; ವಿವರ ಓದಿರಿ

ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Shiradi Ghat: ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತ, ಆದರೆ ಷರತ್ತುಗಳು ಅನ್ವಯ; ವಿವರ ಓದಿರಿ
ಘಾಟ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ganapathi bhat

Updated on: Jul 24, 2021 | 3:23 PM

ಹಾಸನ: ಇಲ್ಲಿನ ಸಕಲೇಶಪುರದ ದೋಣಿಗಲ್ ಎಂಬಲ್ಲಿ ರಸ್ತೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಿತ್ತು. ಶಿರಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿತ್ತು. ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆ ಕಾರಣದಿಂದ ವಾಹನ ಸವಾರರು ಚಾರ್ಮಾಡಿ ಘಾಟ್ ಮೂಲಕ ಸಂಚಾರ ನಡೆಸುವ ಸನ್ನಿವೇಶ ಎದುರಾಗಿತ್ತು. ಆದರೆ, ನಿನ್ನೆ (ಜುಲೈ 23) ಚಾರ್ಮಾಡಿ ಘಾಟ್​ನಲ್ಲೂ ರಾತ್ರಿ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ, ಘನ ವಾಹನಗಳ ಪ್ರಯಾಣ ನಿರ್ಬಂಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಪರದಾಟ ಮತ್ತಷ್ಟು ಹೆಚ್ಚಾಗಿತ್ತು. ಬದಲಿ ಮಾರ್ಗವಾಗಿ ರಾತ್ರಿ ಪ್ರಯಾಣ ಮಾಡುವವರು ಮಡಿಕೇರಿ ಮೂಲಕವೇ ಸಂಚಾರ ನಡೆಸಬೇಕಿತ್ತು. ಈ ಕಾರಣದಿಂದ ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ತೆರೆದುಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕೊಳ್ಳುವ ಅತಿ ಅಗತ್ಯವಿತ್ತು. ಇದೀಗ, ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಆದರೆ, ಕೆಲವು ನಿಯಮಗಳನ್ನು ತಿಳಿಸಲಾಗಿದೆ.

ಅದರಂತೆ, ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ, ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದೆ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Charmady Ghat: ಪ್ರಯಾಣಿಕರೇ ಗಮನಿಸಿ: ರಾತ್ರಿ ಸಂಚಾರಕ್ಕೆ ಚಾರ್ಮಾಡಿ ಘಾಟ್ ಬಂದ್: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ

ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್​ನಲ್ಲಿ ಧುಮ್ಮಿಕ್ಕುತ್ತಿವೆ ಹಳ್ಳ, ತೊರೆಗಳು

(Shiradi Ghat opens for Light Vehicles on Certain Conditions says R Ashok details here)