AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

ಮಂಗಳೂರು-ಬೆಂಗಳೂರು ನಡುವೆ ಪ್ರಯಾಣದ ಅವಧಿ ಕಡಿಮೆ ಮಾಡಿ, ಸುಲಭವಾಗಿ ಸಂಪರ್ಕ ಸಾಧಿಸುವ 23.6 ಕಿ.ಮೀ. ಉದ್ದದ ಸುರಂಗ ಮಾರ್ಗ ಯೋಜನೆಯ ವಿಸ್ತೃತ ವರದಿ ತಯಾರಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
TV9 Web
| Edited By: |

Updated on:Apr 06, 2022 | 11:24 PM

Share

ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಪ್ರಯಾಣದ ಅವಧಿ ಕಡಿಮೆ ಮಾಡಿ, ಸುಲಭವಾಗಿ ಸಂಪರ್ಕ ಸಾಧಿಸುವ ಸುರಂಗ ಮಾರ್ಗ ಯೋಜನೆಯ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು (ಭಾನುವಾರ) ಸೂಚನೆ ನೀಡಿದ್ದಾರೆ. 23.6 ಕಿ.ಮೀ. ಉದ್ದದ ಸುರಂಗ ಮಾರ್ಗ ಯೋಜನೆಯ ವಿಸ್ತೃತ ವರದಿ ತಯಾರಿದೆ ಎಂದು ಹೇಳಿದ್ದಾರೆ.

ಮಂಗಳೂರು ಕೂಳೂರಿನ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗಲಿರುವ, ₹ 69 ಕೋಟಿ ಮೊತ್ತದ ಎರಡು ಏಕಮುಖ ಸಂಚಾರ (ಒನ್ ವೇ) ಸೇತುವೆಗಳ ಕಾಮಗಾರಿಗೆ ವರ್ಚುವಲ್ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ನಿತಿನ್ ಗಡ್ಕರಿ ಮಾತನಾಡಿದರು.

ಜೊತೆಗೆ, ರಾಜ್ಯದ ಇತರ 32 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯೋಜನೆಗಳಿಗೂ ಅವರು ಶುಭಾರಂಭ ತಿಳಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದರು.

10 ಸಾವಿರ ಕೋಟಿ ಮೊತ್ತದ ಮಂಗಳೂರು-ಬೆಂಗಳೂರು ನಡುವಿನ ಶಿರಾಡಿ ಸುರಂಗ ಮಾರ್ಗ ಯೋಜನೆ ಸಿದ್ಧವಾಗಿದೆ. ಕಾಮಗಾರಿ ಶೀಘ್ರವೇ ಆರಂಭಗೊಳ್ಳಲಿದೆ. ಸುರಂಗ ಮಾರ್ಗಕ್ಕಾಗಿ ಭೂಮಿ ಸ್ವಾಧೀನಪಡಿಸುವ ಕೆಲಸವು ನಡೆಯುತ್ತಿದೆ ಎಂದು ಗಡ್ಕರಿ ಹೇಳಿದ್ದಾರೆ. ಮುಂದಿನ ಹಂತದಲ್ಲಿ ಯೋಜನೆಯ ಗುತ್ತಿಗೆಗಾಗಿ ಟೆಂಡರ್ ಕರೆಯಲಿದ್ದೇವೆ. ಈ ಯೋಜನೆಗಳು ಕರ್ನಾಟಕದ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವಹಿಸಲಿದೆ ಎಂದೂ ಗಡ್ಕರಿ ತಿಳಿಸಿದ್ದಾರೆ.

ಜೊತೆಗೆ, ರಾಜ್ಯದ ಇತರ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಗಡ್ಕರಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಮಂಗಳೂರು-ಮಡಿಕೇರಿ ಸಂಪರ್ಕಿಸುವ, ಸಂಪಾಜೆ ಮೂಲಕ ಹಾದುಹೋಗುವ 58.8 ಕೋಟಿ ರೂಪಾಯಿ ಮೊತ್ತದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ. ನದಿ ಪಕ್ಕ ಹಾದುಹೋಗುವ ಶಿರಾಡಿ ಘಾಟ್​ನ 26 ಕಿ.ಮೀ. ಉದ್ದದ ರಸ್ತೆಗೆ 36.5 ಕೋಟಿ ಮೊತ್ತದ ತಡೆಗೋಡೆ ನಿರ್ಮಾಣ ಯೋಜನೆ. ಚಾರ್ಮಾಡಿ ಘಾಟ್​ನ 13 ಕಿ.ಮೀ. ಉದ್ದದ ರಸ್ತೆಗೆ 19.4 ಕೋಟಿ ಮೊತ್ತದ ತಡೆಗೋಡೆ ನಿರ್ಮಾಣ ಯೋಜನೆಗಳಿಗೆ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಳಿನ್ ಕುಮಾರ್ ಕಟೀಲ್, ಬಿ.ಸಿ. ರೋಡ್-ಅಡ್ಡಹೊಳೆ ನಡುವಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮತ್ತು ಮಂಗಳೂರು-ಮೂಡಬಿದ್ರೆ ಸಂಪರ್ಕಿಸುವ ಕುಲಶೇಖರ-ಕಾರ್ಕಳ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಶೇ.90ರಷ್ಟು ಭೂ ಸ್ವಾಧೀನ ಕಾರ್ಯ ಪೂರ್ಣವಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ, ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಕೆಲಸಗಳು ಮುಂದಿನ 2-3 ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದಿದ್ದಾರೆ.

ನಿಂತ ಮಳೆ, ಹೆಚ್ಚಿದ ಚಾರ್ಮಾಡಿ ವೈಭೋಗ: ಕಣ್ಮನ ತಣಿಸುತ್ತಿವೆ ಸಣ್ಣ ಸಣ್ಣ ಜಲಪಾತಗಳು

Published On - 7:36 pm, Sun, 20 December 20

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ