AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ ಪ್ರಕರಣ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ ಮಾಡಿದ ಮೋದಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಿಎಂಎನ್​ಆರ್​ಎಫ್​ನಿಂದ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ. ಸಂಸದ ಕಾಗೇರಿ ಮನವಿ ಮೇರೆಗೆ ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಿ ಪಿಎಂಒ ಆದೇಶ ಹೊರಡಿಸಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ ಮಾಡಿದ ಮೋದಿ
ಶಿರೂರು ಗುಡ್ಡ ಕುಸಿತ ಪ್ರಕರಣ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ ಮಾಡಿದ ಮೋದಿ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Aug 26, 2024 | 8:19 PM

Share

ಕಾರವಾರ, ಆಗಸ್ಟ್​ 26: ಉತ್ತರ ಕನ್ನಡ ಜಿಲ್ಲೆಯ ಶಿರೂರು (Shiroor) ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮೇರೆಗೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಸಂತ್ರಸ್ತರಿಗೆ ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ದುರಂತದಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಎನ್​ಡಿಆರ್​ಎಫ್ನಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಹಣ ನೀಡಲಾಗಿತ್ತು. ಶಿರೂರು ದುರಂತವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚುವರಿ ಹಣ ಬಿಡುಗಡೆಗೆ ಅಧಿವೇಶನದಲ್ಲಿ ಉತ್ತರ ಕನ್ನಡ ಸಂಸದ ಕಾಗೇರಿ ಮನವಿ ಮಾಡಿದ್ದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತದಲ್ಲಿ ಮೃತ ಕುಟುಂಬಗಳಿಗೆ ಹೆಚ್ಚಿನ ಪರಿಹಾರಕ್ಕೆ ಮೋದಿ ಅನುಮೋದನೆ

ಕಾಗೇರಿ ಮನವಿಗೆ ಸ್ಪಂದಿಸಿದ್ದ ಪ್ರಧಾನಿ ಮೋದಿ 5 ಲಕ್ಷ ರೂ. ಪರಿಹಾರವನ್ನು ಬಿಡುಗಡೆ ಮಾಡಿದ್ದರು. ಇದೀಗ  ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ.

ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರ ಭೂ ಕುಸಿತ ಪ್ರದೇಶ. ಜುಲೈ 16 ರ ಬೆಳಗ್ಗೆ ಕುಸಿದ ಗುಡ್ಡ 11 ಜನರನ್ನು ಆಹುತಿ ಪಡೆದಿತ್ತು. 8 ಜನರ ಶವ ದೊರೆತಿದ್ದು, ಇನ್ನೂ ಮೂವರ ಮೃತದೇಹ ಪತ್ತೆ ಆಗಬೇಕಿದೆ.

ಇದನ್ನೂ ಓದಿ: ಶಿರೂರು ದುರಂತ; ಗುಡ್ಡ ಕುಸಿತದ ಬಗ್ಗೆ ಮೊದಲೇ ತಿಳಿದಿದ್ದ NHAI

ರಾಡಾರ್ ಮೂಲಕ ಶೋಧ ಕಾರ್ಯ ನಡೆಸಿ ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್ ಗಳು ಇರುವುದು ಪತ್ತೆಯಾಗಿವೆ. ರಸ್ತೆಯ ಬದಿ ಇದ್ದ ಅಂಗಡಿ ನೆಲಸಮವಾದ ಕಡೆ ಶೋಧ ಕಾರ್ಯ ನಡೆಸಲಾಗಿದ್ದು, ಗಂಗಾವಳಿ ನದಿಗೆ ಬಿದ್ದ ಮಣ್ಣಿನ ಗುಡ್ಡದಲ್ಲಿ NDRF ,SDRF ,ಆರ್ಮಿ ಕಮಾಂಡೋಗಳ ತಂಡ ಶೋಧ ಕಾರ್ಯ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:09 pm, Mon, 26 August 24

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು