AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತನ್ನಿಬ್ಬರು ಮಕ್ಕಳು ಸೇರಿದಂತೆ ಐವರನ್ನ ರಕ್ಷಿಸಿದ ಹುವಾ ಗೌಡ

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತವಾಗಿ ಒಂದಲ್ಲಾ ಎರಡಲ್ಲ 13 ದಿನಗಳೇ ಕಳೆದುಹೋಗಿದ್ದರೂ ಗುಡ್ಡ ಕುಸಿತದಲ್ಲಿ ನಾಪತ್ತೆ ಆದ ಮೂವರ ಸುಳಿವೇ ಸಿಗುತ್ತಿಲ್ಲ. ಗಂಗಾವಳಿ ನದಿಯ ಇನ್ನೊಂದು ದಡದ ಉಳುವರೆ ಗ್ರಾಮದಲ್ಲಿ ಭಾರೀ ಹಾನಿ ಉಂಟಾಗಿ ಸಾವು ನೋವು ಸಂಭವಿಸಿವೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತನ್ನಿಬ್ಬರು ಮಕ್ಕಳು ಸೇರಿದಂತೆ ಐವರನ್ನು ಹುವಾ ಗೌಡ ರಕ್ಷಣೆ ಮಾಡಿದ್ದಾರೆ.

ಶಿರೂರು ಗುಡ್ಡ ಕುಸಿತ: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತನ್ನಿಬ್ಬರು ಮಕ್ಕಳು ಸೇರಿದಂತೆ ಐವರನ್ನ ರಕ್ಷಿಸಿದ ಹುವಾ ಗೌಡ
ಶಿರೂರು ಗುಡ್ಡ ಕುಸಿತ: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತನ್ನಿಬ್ಬರು ಮಕ್ಕಳು ಸೇರಿದಂತೆ ಐವರನ್ನ ರಕ್ಷಿಸಿದ ಹುವಾ ಗೌಡ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 29, 2024 | 4:46 PM

ಕಾರವಾರ, ಜುಲೈ 29: ಉತ್ತರ ಕನ್ನಡ ಜಿಲ್ಲೆಯ ಶಿರೂರು (Shiroor) ಗುಡ್ಡ ಕುಸಿತ ಘಟನೆ ನಡೆದು ಒಂದಲ್ಲ ಎರಡಲ್ಲ ಬರೋಬ್ಬರಿ 13 ದಿನ ಕಾರ್ಯಾಚರಣೆ ನಡೆದಿತ್ತು. ಗಂಗಾವಳಿ ನದಿಯ ಆರ್ಭಟದ ಮುಂದೆ ತಜ್ಞರು ಮಂಡಿಯೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಗಂಗಾವಳಿ ನದಿಯ ಇನ್ನೊಂದು ದಡದ ಉಳುವರೆ ಗ್ರಾಮದಲ್ಲಿ ಭಾರೀ ಹಾನಿ ಉಂಟಾಗಿದ್ದು ಸಾವು ನೋವು ಕೂಡ ಸಂಭವಿಸಿವೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತನ್ನಿಬ್ಬರು ಮಕ್ಕಳು (childrens) ಸೇರಿದಂತೆ ಐವರನ್ನು ಬಚಾವ್ ಮಾಡಿದ ಹುವಾ ಗೌಡ ಅವರ ಮಾತು ಕೇಳಿದರೆ ಮೈ ಜುಮ್ಮೆನಿಸುತ್ತೆ.

ಘಟನೆಯಲ್ಲಿ ಬಚಾವ್​ ಆದ ಹುವಾ ಗೌಡ ಪ್ರತಿಕ್ರಿಯಿಸಿದ್ದು, ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದ ಮಕ್ಕಳು ಒಮ್ಮೆಲೆ ನದಿಯ ರಭಸಕ್ಕೆ ತೇಲಿಕೊಂಡು ಹೋದರು. ಅಂದಾಜು 50 ಮೀಟರ್ ಕೊಚ್ಚಿಕೊಂಡು ಹೋಗುತ್ತಿದ್ದರು. ಮಕ್ಕಳು ಗಿಡಗಂಟಿಗಳಿಗೆ ಸಿಕ್ಕಿಹಾಕಿಕೊಂಡರು. ಆವಾಗ ನಾನು‌ ಕೂಡ ತೇಲಿ ಹೋಗುತ್ತಿದೆ. ಆಗ ಮಕ್ಕಳು ನನ್ನ ಕೈಗೆ ಸಿಕ್ಕಿದರು. ಎಲ್ಲರನ್ನು ಕೂಡ ಅಪ್ಪಿ ಹಿಡಿದುಕೊಂಡೆ. ಇಬ್ಬರು ನನ್ನ ಮಕ್ಕಳು, ಮೂವರು ನನ್ನ ತಮ್ಮನ ಮಕ್ಕಳು. ಎಲ್ಲರನ್ನು ಬಚಾವ್ ಮಾಡಿ ದಡಕ್ಕೆ ತಂದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: 13 ದಿನವಾದರೂ ಸಿಗದ ನಾಪತ್ತೆಯಾದವರ ಸುಳಿವು, ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧಾರ

ನೀರು ಎಷ್ಟೇ ರಭಸದಿಂದ ಬಂದರ ಜಗ್ಗದೆ ಮಕ್ಕಳನ್ನ ಅಪ್ಪಿಕೊಂಡರಂತೆ ಹುವಾ ಗೌಡ. ಇನ್ನು ಗುಡ್ಡ ಕುಸಿತದ ಭೀಕರತೆಯನ್ನ ಇನ್ನೊರ್ವ ಪ್ರತ್ಯಕ್ಷದರ್ಶಿ ಮಂಗೇಶ‌ ಗೌಡ ಎಂಬುವವರು ವಿವರಿಸಿದ್ದು ಇತಿಹಾಸದಲ್ಲೇ ಇಂತ ಘಟನೆ ನೋಡಿಲ್ಲ ಎಂದಿದ್ದಾರೆ.

ನಿನ್ನೆ ಮಧ್ಯಾಹ್ನದಿಂದ ವಿಶೇಷ ಕಾರ್ಯಾಚರಣೆ ಸ್ಥಗಿತವಾಗಿದೆ. ಗಂಗಾವಳಿ ನದಿಯ ನೀರಿನ ರಭಸ ಹೆಚ್ಚಾದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತವಾಗಿದೆ. ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಮಾಡುವ ಡ್ರೋಣ ದೃಶ್ಯ ಲಭ್ಯವಾಗಿದೆ. ಅಪಾಯದ ಮಟ್ಟ ಮೀರಿ 10 ನಾಟ್ಸ್​ನಲ್ಲಿ ಗಂಗಾವಳಿ ನದಿ ರಭಸವಾಗಿ ಹರಿಯುತ್ತಿದ್ದ ವಿಡಿಯೋ ಡ್ರೋಣ ಕಣ್ಣಲ್ಲಿ ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: ಶಿರೂರು ಭೂಕುಸಿತಕ್ಕೆ ಪ್ರಮುಖ ಕಾರಣ ಪತ್ತೆ ಮಾಡಿದ ಭೂವೈಜ್ಞಾನಿಕ ಸಮೀಕ್ಷೆ

ನೌಕಾ ಸೇನೆ, ಭೂ ಸೇನೆ, ನಿವೃತ್ತ ಸೇನಾಧಿಕಾರಿ ವಿಶೇಷ ತಂಡ ಹಾಗೂ ಮುಳುಗು ತಜ್ಞರು ಈ ಎಲ್ಲರ ನಿರಂತರ ಪರಿಶ್ರಮ ಗಂಗಾವಳಿ ನದಿಯ ಮುಂದೆ ನಡೆಯಲಿಲ್ಲ. ಕಳೆದ ಐದು ದಿನಗಳಿಂದ ನಿತ್ಯ ವಿಶೇಷ ಕಾರ್ಯಾಚರಣೆ ಮಾಡಲಾಯಿತು. ಶಿರೂರು ಗ್ರಾಮದ ಜಗನ್ನಾಥ ನಾಯ್ಕ್, ಲೊಕೇಶ್ ನಾಯ್ಕ್ ಹಾಗೂ ಲಾರಿ ಚಾಲಕ ಅರ್ಜುನ್​ ಕಣ್ಮರೆಯಾದ ಮೂವರು ಗಂಗಾವಳಿ ನದಿಯಲ್ಲಿ ಸಿಗಲೆಯಿಲ್ಲ. ನೀರಿನ ಅಬ್ಬರ ಕಡಿಮೆ ಆಗುವವರೆಗೆ ಏನು ಮಾಡುವುದಕ್ಕೆ ಆಗಲ್ಲವೆಂದು ತಜ್ಞರು ಹೇಳಿದ್ದಾರೆ. ಇಂದು ಬೋಟ್ ಮೂಲಕ ನದಿಯ ದಡದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಆದರೆ ವಿಶೇಷ ಕಾರ್ಯಾಚರಣೆ ಯಾವುದು ಕೂಡ ಇಂದು ಮಾಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:34 pm, Mon, 29 July 24

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ