AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳದ ಆಯುರ್ವೇದಿಕ್ ಶಿಕ್ಷಣ ಸಂಸ್ಥೆಯ ಶಿಷ್ಯೋಪನಯನ

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಗುರುಕುಲ ಪದ್ಧತಿಗೆ ವಿಶೇಷ ಸ್ಥಾನವಿದೆ. ಗುರು ಶಿಷ್ಯ ಸಂಬಂಧಕ್ಕೆ ಹಲವು ಮೌಲ್ಯಯುತ ಉದಾಹರಣೆಗಳಿವೆ. ಅಂದಿನ ಪರಂಪರೆಯನ್ನು ಉಳಿಸುವ ಸಲುವಾಗಿ ಆಯುರ್ವೇದ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿಗಳಿಹೆ ಶಿಷ್ಯೋಪನಯನ ನೆರವೇರಿಸಿದೆ. ಗುರು ಬ್ರಹ್ಮ ಗುರು ವಿಷ್ಣು.. ಗುರು ದೇವ ಮಹೇಶ್ವರ.. ಗುರುವಿನ ಗುಲಾಮನಾಗುವ ತನಕ ದೊರೆಯದ್ದನ್ನ ಮುಕುತಿ.. ಹೌದು, ಗೌರು ಮತ್ತು ಶಿಷ್ಯ ಸಂಬಂಧಕ್ಕೆ ಅಂಥಾ ಮಹತ್ವವಿದೆ. ಸನಾತನ ಸಂಸ್ಕೃತಿಯ ಗುರುವಿಗೆ ದೇವರ ಸ್ಥಾನ ನೀಡುವ ಅಪಾರ ಗೌರವವಿದೆ. ರಾಮಾಯಣ ಮಹಾಭಾರತದಿಂದ ಹಿಡಿದು ಇಂದಿಗೂ ಗುರ […]

ಧರ್ಮಸ್ಥಳದ ಆಯುರ್ವೇದಿಕ್ ಶಿಕ್ಷಣ ಸಂಸ್ಥೆಯ ಶಿಷ್ಯೋಪನಯನ
ಸಾಧು ಶ್ರೀನಾಥ್​
|

Updated on: Dec 22, 2019 | 7:18 PM

Share

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಗುರುಕುಲ ಪದ್ಧತಿಗೆ ವಿಶೇಷ ಸ್ಥಾನವಿದೆ. ಗುರು ಶಿಷ್ಯ ಸಂಬಂಧಕ್ಕೆ ಹಲವು ಮೌಲ್ಯಯುತ ಉದಾಹರಣೆಗಳಿವೆ. ಅಂದಿನ ಪರಂಪರೆಯನ್ನು ಉಳಿಸುವ ಸಲುವಾಗಿ ಆಯುರ್ವೇದ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿಗಳಿಹೆ ಶಿಷ್ಯೋಪನಯನ ನೆರವೇರಿಸಿದೆ.

ಗುರು ಬ್ರಹ್ಮ ಗುರು ವಿಷ್ಣು.. ಗುರು ದೇವ ಮಹೇಶ್ವರ.. ಗುರುವಿನ ಗುಲಾಮನಾಗುವ ತನಕ ದೊರೆಯದ್ದನ್ನ ಮುಕುತಿ.. ಹೌದು, ಗೌರು ಮತ್ತು ಶಿಷ್ಯ ಸಂಬಂಧಕ್ಕೆ ಅಂಥಾ ಮಹತ್ವವಿದೆ. ಸನಾತನ ಸಂಸ್ಕೃತಿಯ ಗುರುವಿಗೆ ದೇವರ ಸ್ಥಾನ ನೀಡುವ ಅಪಾರ ಗೌರವವಿದೆ. ರಾಮಾಯಣ ಮಹಾಭಾರತದಿಂದ ಹಿಡಿದು ಇಂದಿಗೂ ಗುರ ಶಿಷ್ಯರ ಸಂಬಂಧಕ್ಕೆ ಮಹತ್ವದ ವ್ಯಾಖ್ಯಾನಗಳಿವೆ.

ಗುರುವಿಗೆ ಗೌರವಿಸಿ ತಮ್ಮನ್ನ ಶಿಷ್ಯರನ್ನಾಗಿ ಸ್ವೀಕರಿಸಿ ಎಂಬ ಶಿಷ್ಯ ನಿವೇದನೆಯ ವಿಶಿಷ್ಠ ಕಾರ್ಯಕ್ರಮವೇ ಶಿಷ್ಯೋಪನಯನ. ಇಂಥಾ ವಿಭಿನ್ನ ಕಾರ್ಯಕ್ರಮವನ್ನ ಧರ್ಮಸ್ಥಳದ ಆಯುರ್ವೇದಿಕ್ ಶಿಕ್ಷಣ ಸಂಸ್ಥೆಗಳು ಕಳೆದ 25 ವರ್ಷಗಳಿಂದ ನಡೆಸ್ತಿವೆ. ಸಂಸ್ಥೆಗಳಿಗೆ ಹೊಸದಾಗಿ ಸೇರ್ಪಡೆಯಾಗುವ ವಿದ್ಯಾರ್ಥಿಗಳನ್ನ, ಗುರುಗಳು ಶಿಷ್ಯರನ್ನಾಗಿ ಅಧಿಕೃತವಾಗಿ ಸ್ವೀಕರಿಸಿದ್ರು.

ಮುಂಜಾನೆ ಶ್ವೇತ ವಸ್ತ್ರಧಾರಿಗಳಾದ ಹೊಸ ವಿದ್ಯಾರ್ಥಿಗಳು ಧನ್ವಂತರೀ ಹೋಮದಲ್ಲಿ ಪಾಲ್ಗೊಳ್ಳುತ್ತಾರೆ. ಪೂರ್ಣಾಹುತಿ ಸಂದರ್ಭದಲ್ಲಿ ವಿದ್ಯಾರ್ಥಿಗಳೂ ಹೋಮಕ್ಕೆ ಹವಿಸ್ಸು ಅರ್ಪಿಸ್ತಾರೆ. ಬಳಿಕ ವಿದ್ಯಾರ್ಥಿಗಳು ಪವಿತ್ರ ಧಾರವನ್ನು ಕಟ್ಟಿಕೊಳ್ಳುತ್ತಾರೆ. ಆ ಬಳಿಕ ಗುರುಗಳ ಆಶೀರ್ವಾದ ಪಡೆಯೋ ಮೂಲಕ ಶಿಷ್ಯೋಪನಯನ ಕಾರ್ಯಕ್ರಮ ಸಂಪನ್ನಗೊಳ್ಳುತ್ತೆ.

ದೇಶದಲ್ಲಿ ಅನಾದಿ ಕಾಲದಿಂದಲೂ ಶಿಕ್ಷಣ ಮತ್ತು ಗುರು ಶಿಷ್ಯ ಸಂಬಂಧಕ್ಕೆ ಬಹಳ ಮೌಲ್ಯಯುತ ಸ್ಥಾನವಿತ್ತು. ಅದನ್ನ ಕಾಪಾಡುವ ಮತ್ತು ಮುಂದಿನ ಜನಾಂಗಕ್ಕೆ ಉಳಿಸುವ ಈ ವಿಶಿಷ್ಟ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​