AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

ಲಲಿತಾ ನಾಯಕ್ ಅವರಿಗೆ ಬಂದ ಪತ್ರದಲ್ಲಿ ನಾಲ್ಕು ಗಣ್ಯರನ್ನು ಮೇ 1ರಂದು ಕೊಲೆ ಮಾಡುವುದಾಗಿ ತಿಳಿಸಲಾಗಿದೆಯಂತೆ. ಹೀಗಾಗಿ ಸೂಕ್ತ ರಕ್ಷಣೆ ಹಾಗೂ ತನಿಖೆಗೆ ಆಗ್ರಹಿಸಿ ಲಲಿತಾ ನಾಯಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..
ನಟ ಶಿವರಾಜ್ ಕುಮಾರ್
ಆಯೇಷಾ ಬಾನು
ಆಯೇಷಾ ಬಾನು|

Updated on: Mar 22, 2021 | 11:54 AM

Share

ಬೆಂಗಳೂರು: ಸಾಮಾಜದಲ್ಲಿ ಹೆಸರು ಮಾಡಿದ ನಾಲ್ಕು ಗಣ್ಯರನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಹಾಗೂ ಚಿಂತಕರಾದ ಬಿ.ಟಿ. ಲಲಿತಾ ನಾಯಕ್ ಸಮಾರಂಭವೊಂದರಲ್ಲಿ ಹೇಳಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪತ್ರಕರ್ತ ಹೆಚ್.ಆರ್. ರಂಗನಾಥ್, ನಟ ಶಿವರಾಜ್ ಕುಮಾರ್ ಹಾಗೂ ನನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಲಲಿತಾ ನಾಯಕ್ ತಿಳಿಸಿದ್ದಾರೆ.

ಮಾಜಿ ಸಚಿವ ಹೆಚ್.ಎಂ. ರೇವಣ್ಣ ಸಾರ್ವಜನಿಕ ಜೀವನದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಚ್.ಎಂ. ರೇವಣ್ಣ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಭಿನಂದನೆ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಈ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ವೇದಿಕೆಯಲ್ಲಿ ತಮಗೂ ಹಾಗೂ ಮೂವರು ಗಣ್ಯರಿಗೆ ಕೊಲೆ ಬೆದರಿಕೆ ಇರುವ ಬಗ್ಗೆ ತಿಳಿಸಿದ್ದಾರೆ. ಸದ್ಯ ಈ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇನ್ನು ಲಲಿತಾ ನಾಯಕ್ ಅವರಿಗೆ ಬಂದ ಪತ್ರದಲ್ಲಿ ನಾಲ್ಕು ಗಣ್ಯರನ್ನು ಮೇ 1ರಂದು ಕೊಲೆ ಮಾಡುವುದಾಗಿ ತಿಳಿಸಲಾಗಿದೆಯಂತೆ. ಹೀಗಾಗಿ ಸೂಕ್ತ ರಕ್ಷಣೆ ಹಾಗೂ ತನಿಖೆಗೆ ಆಗ್ರಹಿಸಿ ಲಲಿತಾ ನಾಯಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲಲಿತಾ ಅವರಿಗೆ ಇಂತಹ ಬೆದರಿಕೆ ಪತ್ರಗಳು ಇದೇ ಮೊದಲೇನಲ್ಲ. ಈ ಹಿಂದೆಯೂ ಅನೇಕ ಬಾರಿ ಈ ರೀತಿಯ ಬೆದರಿಕೆ ಪತ್ರಗಳು ಅವರ ಮನೆಯ ವಿಳಾಸಕ್ಕೆ ಬರುತ್ತಲೇ ಇರುತ್ತವೆ.

ಶಿವರಾಜ್‌ಕುಮಾರ್ ಮನೆಯ ಬಳಿ ಪೊಲೀಸ್ ಭದ್ರತೆ ನಟ ಶಿವರಾಜ್‌ಕುಮಾರ್‌ಗೆ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ರಾಜ್ಯ ಸರ್ಕಾರ ನಾಲ್ವರು ಪೊಲೀಸರು ಮತ್ತು ಗನ್‌ಮ್ಯಾನ್ ನಿಯೋಜನೆ ಮಾಡಿದೆ. ಹಾಗೂ ಶಿವರಾಜ್‌ಕುಮಾರ್ ಮನೆಯ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಆದ್ರೆ ಈ ಸುದ್ದಿಗೆ ಹೆಚ್ಚು ಒತ್ತು ನೀಡ ಬೇಡಿ ಎಂದು ಶಿವರಾಜ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. BT Lalitha nayak letter

ಇದನ್ನೂ ಓದಿ: Mallikarjuna Kharge Threat call ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ನಿಮ್ಮನ್ನು ಬಿಡಲ್ಲ -ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು