AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ನಗರದ ಜನರ ಪಾಲಿಗೆ ಕೊವಿಡ್ ಸಹಾಯವಾಣಿ: 18004257677ಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಸಂಪರ್ಕಿಸಿ

Shivamogga Covid 19 Helpline: ರಾಜ್ಯದ ಎಲ್ಲೆಡೆ ನಾಳೆಯಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಯಾಗುತ್ತಿರುವ ಕಾರಣ ಶಿವಮೊಗ್ಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 6 ಕಡೆ ತಾತ್ಕಾಲಿಕ ತರಕಾರಿ ಮಾರುಕಟ್ಟೆಗಳ ವ್ಯವಸ್ಥೆ ನಿರ್ಮಿಸಲಾಗಿದೆ.

ಶಿವಮೊಗ್ಗ ನಗರದ ಜನರ ಪಾಲಿಗೆ ಕೊವಿಡ್ ಸಹಾಯವಾಣಿ: 18004257677ಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಸಂಪರ್ಕಿಸಿ
ಸಹಾಯವಾಣಿ
guruganesh bhat
| Edited By: |

Updated on: May 10, 2021 | 6:39 AM

Share

ಶಿವಮೊಗ್ಗ: ಕೊವಿಡ್ ಎದುರಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಟೋಲ್ ಫ್ರೀ ಸಹಾಯವಾಣಿ ಆರಂಭಿಸಲಾಗಿದೆ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 18004257677ಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಫೋನ್ ಮಾಡುವ ಮೂಲಕ ಸಹಾಯ ಪಡೆಯಬಹುದಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಾಳೆಯಿಂದ ಕೊರೊನಾ ನಿಯಂತ್ರಣ ಕ್ಕೆ ವಾರ್ ರೂಂ ಮಾದರಿಯಲ್ಲಿ ಕೆಲಸ ಮಾಡಲಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಹಾಯವಾಣಿಯ ಮೂಲಕ ನೆರವು ಒದಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ರಾಜ್ಯದ ಎಲ್ಲೆಡೆ ಇಂದಿನಿಂದ (ಮೇ 10) ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಾಗುತ್ತಿರುವ ಕಾರಣ ಶಿವಮೊಗ್ಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 6 ಕಡೆ ತಾತ್ಕಾಲಿಕ ತರಕಾರಿ ಮಾರುಕಟ್ಟೆಗಳ ವ್ಯವಸ್ಥೆ ನಿರ್ಮಿಸಲಾಗಿದೆ. ವಿನೋಬನಗರ ಶಿವಾಲಯ ದೇವಸ್ಥಾನ ಹತ್ತಿರ, ಕಾಶೀಪುರ ಕೇಂಬ್ರಿಡ್ಜ್ ಶಾಲೆಯ ಹತ್ತಿರ, ನವುಲೆ ಕ್ರೀಡಾಂಗಣದ ಎದುರಿನ ಪ್ರದೇಶ, ಖಾಸಗಿ ಬಸ್ ನಿಲ್ದಾಣದ ಒಳಗೆ, ತುಂಗಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಪ್ರದೇಶ ಮತ್ತು ಸೈನ್ಸ್ ಮೈದಾನ ಬಿಎಚ್ ರಸ್ತೆಯಲ್ಲಿ ಸಾರ್ವಜನಿಕರಿಗೆ ತಾತ್ಕಾಲಿಕ ವ್ಯವಸ್ಥೆ ನಿರ್ಮಿಸಲಾಗಿದೆ. ಈ ಸ್ಥಳಗಳಲ್ಲಿ ಬೆಳಗ್ಗೆ 6ರಿಂದ 10ರವರೆಗೆ ವ್ಯಾಪಾರ ನಡೆಸಲು ಮಾತ್ರ ಅವಕಾಶವಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮಾಹಿತಿ ನೀಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ತವರು ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ತುತ್ತಾಗುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಿತ್ಯ 15ಕ್ಕೂ ಜನರು ಕೊರೊನಾ ಗೆ ಬಲಿಯಾಗುತ್ತಿದ್ದಾರೆ. ಈಗಾಗಲೇ ಎರಡನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 130ಕ್ಕೂ ಹೆಚ್ಚು ಜನರು  ನಿಧನರಾಗಿದ್ದಾರೆ. ಪ್ರತಿದಿನ 600 ರಿಂದ 700 ಕೊರೊನಾ ಸೋಂಕಿತರು ಶಿವಮೊಗ್ಗದಲ್ಲಿ ಪತ್ತೆಯಾಗುತ್ತಿದ್ದಾರೆ. ಶಿವಮೊಗ್ಗ ನಗರವು ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ 

Covid Helpline Numbers: ಆಕ್ಸಿಜನ್​, ರೆಮ್​ಡೆಸಿವರ್​ ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಿ

(Shivamogga municipal corporation starts toll free helpline to fight against covid 19)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!