AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ಸ್ತಬ್ಧಚಿತ್ರದಲ್ಲಿ ಶಿವಮೊಗ್ಗ ರಂಗಾಯಣ ರೆಪರ್ಟರಿ ಕಲಾವಿದರು

‘ಸುಮಾರು 15 ದಿನಗಳ ಕಾಲ ಹಗಲಿರುಳೆನ್ನದೇ ಸ್ತಬ್ಧಚಿತ್ರದ ಕುರಿತೇ ಧ್ಯಾನ ಮಾಡಿದಂತೆ ಕೆಲಸ ನಿರ್ವಹಿಸಿದೆವು. ಇತಿಹಾಸವನ್ನು ಜನರೆದುರು ತೆರೆದಿಡಬೇಕು. ವಿಜಯನಗರ ಸಾಮ್ರಾಜ್ಯದ ವೈಭವವನ್ನು ಪ್ರದರ್ಶಿಸಬೇಕು ಎಂದು ಹಂಬಲಿಸಿದ ಇಡೀ ತಂಡದ ಪ್ರತಿಫಲವೇ ಈ ಸುಂದರ ಸ್ಥಬ್ಧಚಿತ್ರ’ ಎಂದು ಮಹಿಳಾ ತಂಡದ ವಸ್ತ್ರ ವಿನ್ಯಾಸಕಿ ಸಹನಾ ಚೇತನ್ ತಿಳಿಸಿದರು.

ಗಣರಾಜ್ಯೋತ್ಸವ ಸ್ತಬ್ಧಚಿತ್ರದಲ್ಲಿ ಶಿವಮೊಗ್ಗ ರಂಗಾಯಣ ರೆಪರ್ಟರಿ ಕಲಾವಿದರು
ಕರ್ನಾಟಕದ ಸ್ತಬ್ಧಚಿತ್ರ ಮತ್ತು ತಂಡ ದೆಹಲಿಯಲ್ಲಿ ಗಣರಾಜ್ಯೋತ್ಸವ ಮೆರವಣಿಗೆಯ ತಾಲೀಮಿನಲ್ಲಿ ಪಾಲ್ಗೊಂಡಿದ್ದಾರೆ.
guruganesh bhat
|

Updated on:Jan 25, 2021 | 5:12 PM

Share

ಶಿವಮೊಗ್ಗ: ದೆಹಲಿಯಲ್ಲಿ ನಡೆಯಲಿರುವ 72ನೇ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ವಿಜಯನಗರ ಸಾಮ್ರಾಜ್ಯದ ವೈಭವ ಪ್ರದರ್ಶನಗೊಳ್ಳಲಿದೆ. ಖ್ಯಾತ ಕಲಾವಿದ, ವಿನ್ಯಾಸಕಾರ ಶಶಿಧರ ಅಡಪ ಅವರ ನೇತೃತ್ವದಲ್ಲಿ ತಯಾರಾದ ಸ್ತಬ್ಧಚಿತ್ರದಲ್ಲಿ ಶಿವಮೊಗ್ಗದ ಕಲಾವಿದರು ಪಾಲ್ಗೊಂಡಿದ್ದಾರೆ.

ವಿಜಯನಗರ ಸಾಮ್ರಾಜ್ಯವನ್ನು ನೆನಪಿಸುವ, ಗತವೈಭವವನ್ನು ಸಾರುವ ಸ್ತಬ್ಧಚಿತ್ರವನ್ನು ವಿನ್ಯಾಸ ಮಾಡಲಾಗಿದೆ. ಸ್ತಬ್ಧಚಿತ್ರ ಮೆರವಣಿಗೆಗೆ ಪ್ರವೀಣ್. ಡಿ.ರಾವ್ ಸಂಗೀತ ಸಂಯೋಜಿಸಿದ್ದಾರೆ. ವಾರಿಜಾಕ್ಷಿ ವೇಣುಗೋಪಾಲ್ ನೇತೃತ್ವದಲ್ಲಿ ಪ್ರಮಥ್ ಕಿರಣ್ ಮತ್ತು ಗೋಪಾಲ್ ಗೋಪಾಲ್ ವೆಂಕಟರಮಣ ಸಂಗೀತಕ್ಕೆ ಜತೆಯಾಗಿದ್ದಾರೆ.

ಪುರುಷೋತ್ತಮ್ ತಲವಾಟ ಮುಖ್ಯ ವಿನ್ಯಾಸಕಾರರಾಗಿ ಜವಾಬ್ದಾರಿ ನಿರ್ವಹಿಸಿದ್ದು, ಖ್ಯಾತ ಭರತನಾಟ್ಯ ಕಲಾವಿದೆ ಸಹನಾ ಚೇತನ್ ಮಹಿಳಾ ತಂಡದ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ್ ಜವಳಿ ರೆಪರ್ಟರಿ ಕಲಾವಿದರ ಬೆನ್ನಿಗೆ ನಿಂತು ಕೆಲಸ ನಿರ್ವಹಿಸಿದ್ದಾರೆ. ಸ್ತಬ್ಧಚಿತ್ರ ರೂಪಿಸುವಲ್ಲಿ ಗುರುಮೂರ್ತಿ ವರದಮೂಲ ಅವರ ಸಹಕಾರವಿದೆ.

ತಾಲೀಮಿನ ದೃಶ್ಯ

ಟಿವಿ9 ಕನ್ನಡ ಡಿಜಿಟಲ್​ಗೆ ಜತೆ ಮಾತಿಗೆ ಸಿಕ್ಕ ಮಹಿಳಾ ತಂಡದ ವಸ್ತ್ರ ವಿನ್ಯಾಸಕಿ ಸಹನಾ ಚೇತನ್ ತಮ್ಮ ಅನುಭವ ಹಂಚಿಕೊಂಡರು. ‘ಸುಮಾರು 15 ದಿನಗಳ ಕಾಲ ಹಗಲಿರುಳೆನ್ನದೇ ಸ್ತಬ್ಧಚಿತ್ರದ ಕುರಿತೇ ಧ್ಯಾನ ಮಾಡಿದಂತೆ ಕೆಲಸ ನಿರ್ವಹಿಸಿದೆವು. ಇತಿಹಾಸವನ್ನು ಜನರೆದುರು ತೆರೆದಿಡಬೇಕು. ವಿಜಯನಗರ ಸಾಮ್ರಾಜ್ಯದ ವೈಭವವನ್ನು ಪ್ರದರ್ಶಿಸಬೇಕು ಎಂದು ಹಂಬಲಿಸಿದ ಇಡೀ ತಂಡದ ಪ್ರತಿಫಲವೇ ಈ ಸುಂದರ ಸ್ತಬ್ಧಚಿತ್ರ’ ಎಂದು ಸಹನಾ ಚೇತನ್ ತಿಳಿಸಿದರು.

Published On - 4:55 pm, Mon, 25 January 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?