AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಇಬ್ಬರು ಹೆಣ್ಣು ಮಕ್ಕಳನ್ನು ತುಂಗಾ ನದಿಗೆ ಎಸೆದ ತಾಯಿ; ಜೀವದ ಹಂಗು ತೊರೆದು ತಾಯಿ- 11 ತಿಂಗಳ ಮಗುವನ್ನು ರಕ್ಷಿಸಿದ ಯುವಕರು

ಶಿವಮೊಗ್ಗದಲ್ಲಿ ಕುಟುಂಬ ಕಲಹದಿಂದ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ತುಂಗಾ ನದಿಗೆ ಎಸೆದು, 11 ತಿಂಗಳ ಮಗುವಿನೊಂದಿಗೆ ತಾನೂ ಹಾರಿದ್ದಾಳೆ. ಸ್ಥಳೀಯ ಯುವಕರಿಂದ ತಾಯಿ ಮತ್ತು ಗಂಡು ಮಗು ರಕ್ಷಿಸಲ್ಪಟ್ಟಿದ್ದರೆ, ಆರು ಮತ್ತು ನಾಲ್ಕು ವರ್ಷದ ಇಬ್ಬರು ಹೆಣ್ಣುಮಕ್ಕಳು ನದಿಪಾಲಾಗಿದ್ದಾರೆ. ನಾಪತ್ತೆಯಾದ ಮಕ್ಕಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಮನಕಲಕುವ ಘಟನೆ ಶಿವಮೊಗ್ಗದಲ್ಲಿ ಭಾರಿ ಆಘಾತ ಮೂಡಿಸಿದೆ.

ಶಿವಮೊಗ್ಗ: ಇಬ್ಬರು ಹೆಣ್ಣು ಮಕ್ಕಳನ್ನು ತುಂಗಾ ನದಿಗೆ ಎಸೆದ ತಾಯಿ; ಜೀವದ ಹಂಗು ತೊರೆದು ತಾಯಿ- 11 ತಿಂಗಳ ಮಗುವನ್ನು ರಕ್ಷಿಸಿದ ಯುವಕರು
ಶಿವಮೊಗ್ಗ ದುರಂತ
Basavaraj Yaraganavi
| Edited By: |

Updated on:Aug 25, 2026 | 7:35 PM

Share

ಶಿವಮೊಗ್ಗ, ಆ.25: ಕುಟುಂಬದ ಗಲಾಟೆಯಿಂದ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಭೋರ್ಗರೆದು ಹರಿಯುತ್ತಿರುವ ತುಂಗಾ ನದಿಗೆ ಎಸೆದು, ಬಳಿಕ 11 ತಿಂಗಳ ಮಗುವಿನೊಂದಿಗೆ ತಾನೂ ನದಿಗೆ ಹಾರಿದ ದಾರುಣ ಹಾಗೂ ಮನಕಲಕುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸ್ಥಳೀಯ ಯುವಕರ ಸಮಯಪ್ರಜ್ಞೆ ಹಾಗೂ ಸಾಹಸದಿಂದ ತಾಯಿ ಮತ್ತು 11 ತಿಂಗಳ ಗಂಡು ಮಗು ಪ್ರಾಣಾಪಾಯದಿಂದ ಪಾರಾಗಿದ್ದರೆ, 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳು ನದಿ ಪಾಲಾಗಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆಯ ಹೊಸೂರು ಗ್ರಾಮದ ಭವಾನಿ ಎಂದು ಗುರುತಿಸಲಾಗಿದೆ. ಪತಿ ದುಗ್ಗಪ್ಪ ಅವರೊಂದಿಗೆ ಮನೆಯಲ್ಲಾದ ಕೌಟುಂಬಿಕ ಜಗಳದಿಂದಾಗಿ ಮನನೊಂದು, ಮಕ್ಕಳೊಂದಿಗೆ ಶಿವಮೊಗ್ಗಕ್ಕೆ ಬಂದು ನದಿಗೆ ಹಾರಿದ್ದಾಳೆ.

ಭವಾನಿ ತನ್ನ 6 ವರ್ಷದ ಮಗಳು ಸಾನ್ವಿಕಾ ಹಾಗೂ 4 ವರ್ಷದ ಮಗಳು ತನ್ವಿಕಾಳನ್ನು ರೈಲ್ವೇ ಸೇತುವೆಯಿಂದ ನದಿಗೆ ಎಸೆದು, ನಂತರ 11 ತಿಂಗಳ ಮಗುವಿನೊಂದಿಗೆ ತಾನೂ ನದಿಗೆ ಹಾರಿದ್ದಾಳೆ.ಕತ್ತಲಲ್ಲಿ ಈ ಘಟನೆಯನ್ನು ಕಂಡ ನವೀನ್, ದಾದಾಪೀರ್ ಸೇರಿದಂತೆ ಸ್ಥಳೀಯ ನಾಲ್ಕೈದು ಯುವಕರು ತಕ್ಷಣವೇ ಜೀವದ ಹಂಗು ತೊರೆದು ನದಿಗೆ ಹಾರಿ, ತಾಯಿ ಭವಾನಿ ಹಾಗೂ 11 ತಿಂಗಳ ಗಂಡು ಮಗುವನ್ನು ಬಚಾವ್ ಮಾಡಿದ್ದಾರೆ.

ಇದನ್ನೂ ಓದಿ: ಗಿಫ್ಟ್‌ಗೆ ಆಸೆ ಬಿದ್ದು ಕಮ್ಮಿ ವಯಸ್ಸಿಗೆ ಮದುವೆಗೆ ಯತ್ನ: 25 ಜೋಡಿಗಳ ಮದುವೆ ತಡೆದ ಅಧಿಕಾರಿಗಳು

ರಕ್ಷಿಸಲ್ಪಟ್ಟ ತಾಯಿ ಮತ್ತು 11 ತಿಂಗಳ ಮಗುವನ್ನು ಶಿವಮೊಗ್ಗ ಜಿಲ್ಲಾಸ್ಪತ್ರೆಯ ಐಸಿಯು (ICU) ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೀರುಪಾಲಾಗಿರುವ ಇಬ್ಬರು ಕಂದಮ್ಮಗಳಿಗಾಗಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ಬೋಟ್‌ಗಳು ಮತ್ತು ತೆಪ್ಪಗಳ ಮೂಲಕ ಸುಮಾರು 15 ರಿಂದ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಂಬಂಧಿಕರು ಹಾಗೂ ಗ್ರಾಮಸ್ಥರು ದೌಡಾಯಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಾಯಿ ಭವಾನಿ ಮೌನಕ್ಕೆ ಶರಣಾಗಿರುವುದರಿಂದ ಆತ್ಮಹತ್ಯೆ ಯತ್ನದ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Tue, 25 August 26

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್