AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ರೈಲು ನಿಲ್ದಾಣದಲ್ಲಿ 2 ಅನಾಮಧೇಯ ಬಾಕ್ಸ್ ಪತ್ತೆ: ಮೇಡ್ ಇನ್ ಬಾಂಗ್ಲಾದೇಶ ಎಂಬ ಬಹರ

ಶಿವಮೊಗ್ಗ ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್​​ನಲ್ಲಿ 2 ಅನಾಮಧೇಯ ಬಾಕ್ಸ್ ಪತ್ತೆ ಆಗಿದೆ. ಬಾಂಬ್​ ಸ್ಕ್ವಾಡ್, ಶ್ವಾನದಳ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗಿದ್ದು, ಬಾಕ್ಸ್ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಮತ್ತು ಫುಡ್​ ಗ್ರೈನ್ಸ್ ಆ್ಯಂಡ​​ ಶುಗರ್ಸ್ ಎಂದು ಬರೆಯಲಾಗಿದೆ. ಸದ್ಯ ಅನಾಮಧೇಯ ಬಾಕ್ಸ್​ಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಶಿವಮೊಗ್ಗ ರೈಲು ನಿಲ್ದಾಣದಲ್ಲಿ 2 ಅನಾಮಧೇಯ ಬಾಕ್ಸ್ ಪತ್ತೆ: ಮೇಡ್ ಇನ್ ಬಾಂಗ್ಲಾದೇಶ ಎಂಬ ಬಹರ
ಅನಾಮಧೇಯ ಬಾಕ್ಸ್ ಪತ್ತೆ
Basavaraj Yaraganavi
| Edited By: |

Updated on:Nov 05, 2023 | 2:55 PM

Share

ಶಿವಮೊಗ್ಗ, ನವೆಂಬರ್​ 05: ಶಿವಮೊಗ್ಗ ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್​​ನಲ್ಲಿ 2 ಅನಾಮಧೇಯ ಬಾಕ್ಸ್ ಪತ್ತೆ (boxes found) ಆಗಿದೆ. ಬಾಂಬ್​ ಸ್ಕ್ವಾಡ್, ಶ್ವಾನದಳ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗಿದ್ದು, ಬಾಕ್ಸ್ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಮತ್ತು ಫುಡ್​ ಗ್ರೈನ್ಸ್ ಆ್ಯಂಡ​​ ಶುಗರ್ಸ್ ಎಂದು ಬರೆಯಲಾಗಿದೆ. ನಿನ್ನೆಯಿಂದಲೂ ಪಾರ್ಕಿಂಗ್ ಲಾಟ್​​ನಲ್ಲೇ ಬಾಕ್ಸ್​ಗಳಿದ್ದು, ಬಾಕ್ಸ್​​ ಬಳಿ ಯಾರೂ ತೆರಳದಂತೆ ಪೊಲೀಸರು ಬ್ಯಾರಿಕೇಡ್​​ ಹಾಕಿದ್ದಾರೆ. ಸದ್ಯ ಅನಾಮಧೇಯ ಬಾಕ್ಸ್​ಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಾಕ್ಸ್ ಯಾರದ್ದು, ಯಾಕೆ ಇಲ್ಲಿದೆ ಎಂಬುದು ಇನ್ನು ತಿಳಿದು ಬಂದಿಲ್ಲ. ಕಳೆದ ನಾಲ್ಕೈದು ದಿನಗಳಿಂದ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪ್ರಯಾಣಿಕರನ್ನು ಚೆಕ್ ಮಾಡಿ ಒಳಗೆ ಬಿಡುತ್ತಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಹತ್ಯೆ: ಎರಡು ಠಾಣೆಯ ಒಟ್ಟು 6 ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬಾಕ್ಸ್‌ಗಳ ಸುತ್ತ 2 ಲೋಡ್‌ ಮರಳಿನ ಚೀಲಗಳನ್ನು ಪೊಲೀಸರು ಜೋಡಿಸಿದ್ದಾರೆ. ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡ ಹೊರಟಿದ್ದು, ಸಂಜೆ ವೇಳೆಗೆ ಶಿವಮೊಗ್ಗಕ್ಕೆ ಆಗಮಿಸುವ ನಿರೀಕ್ಷೆ ಇದೆ. ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿದ ನಂತರ ಬಾಕ್ಸ್​ಗಳನ್ನು ಪೊಲೀಸರು ಓಪನ್ ಮಾಡಲಿದ್ದಾರೆ.

ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಕಾಲೇಜಿನ ಗೋಡೆಗಳ ಮೇಲೆ ಅಶ್ಲೀಲ ಬರಹ

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣದ ‘ಪದವಿ ಪೂರ್ವ ಸರ್ಕಾರಿ ಕಾಲೇಜಿನಲ್ಲಿ ಕಿಡಿಗೇಡಿಗಳ ಕಾಟ ಮತ್ತೆ ಆರಂಭವಾಗಿತ್ತು. ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಕಾಲೇಜಿನ ಗೋಡೆಗಳ ಮೇಲೆ ಅಶ್ಲೀಲವಾಗಿ ಬರೆದಿರುವಂತಹ ಘಟನೆ ಇತ್ತೀಚೆಗೆ ನಡೆದಿತ್ತು. ಈ ಬರಹಗಳನ್ನು ಕಂಡು ವಿದ್ಯಾರ್ಥಿನಿಯರು ಕಣ್ಣೀರು ಹಾಕುತ್ತಿದ್ದರು. ಈ ವಿಕೃತ ಘಟನೆಯಿಂದ ವಿದ್ಯಾರ್ಥಿನಿಯರು ಮಾನಸಿಕ ಖಿನ್ನತೆ ಒಳಗಾಗುವ ಆತಂಕ ಎದುರಾಗಿತ್ತು.

ಇದನ್ನೂ ಓದಿ: ನಿಮ್ಮ ಬಳಿ ಸೈಟ್ ಇದೆಯಾ? ಅದನ್ನು ಸರಿಯಾಗಿ ನಿರ್ವಹಣೆ ಮಾಡ್ತಿಲ್ವಾ, ಹಾಗಾದ್ರೆ ಬಿಬಿಎಂಪಿಯಿಂದ ದಂಡ ಫಿಕ್ಸ್

ಇದರಿಂದ ಕೆಲ ಪಾಲಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ ಮನೆಯಲ್ಲಿ ಕೂರಿಸಿದ್ದರು. ಈ ಪ್ರಕರಣ ಪೋಷಕರನ್ನು ದಿನೇ ದಿನೇ ಆತಂಕಕ್ಕೆ ದೂಡಿದೆ. ಈ ಘಟನೆ ಇಡೀ ಕನಕಗಿರಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಸಾರ್ವಜನಿಕರಲ್ಲಿ ಬೇಸರ ಮೂಡಿಸಿತ್ತು. ಆದರೆ, ಇದರ ಹಿಂದಿನ ಮುಖ ಪತ್ತೆ ಮಾಡುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿತ್ತು.

ಕಳೆದ ಒಂದು ವರ್ಷದಿಂದ ಈ ರೀತಿ ಅಶ್ಲೀಲ‌ ಬರಹದ ಘಟನೆಗಳು ನಡೆಯುತ್ತಲೇ ಇದ್ದವು. ಜುಲೈ 10 ರಂದು ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ಆರಂಭಿಸಿದ್ದರು. ಈ ನಡುವೆ ಮತ್ತೆ ಕಿರಾತಕರು ಶನಿವಾರ ಕನಕಗಿರಿ ಜೂನಿಯರ್ ಕಾಲೇಜು ಗೋಡೆ ಮೇಲೆ ಅಶ್ಲೀಲ ಬರಹದ ಮೂಲಕ ವಿಕೃತಿ ಹೊರ ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:42 pm, Sun, 5 November 23

ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್