AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು

Shivamogga: ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ. ಮೊದಲಿಗೆ ಎರಡು ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ಬೈಕ್​ ಸವಾರರ ಮೇಲೆ ಹರಿದಿದೆ.

ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು
ಲಾರಿ
Basavaraj Yaraganavi
| Edited By: |

Updated on: Oct 01, 2023 | 10:25 AM

Share

ಶಿವಮೊಗ್ಗ, (ಅಕ್ಟೋಬರ್ 01): ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ (Shivamogga)  ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಕಾಸ್ (18), ಯಶ್ವಂತ‌(17) ಶಶಾಂಕ (17) ಮೃತಪಟ್ಟ ದುರ್ದೈವಿಗಳು. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಬೈಕ್​ ಸವಾರರ ಮೇಲೆ ಹರಿದಿದೆ. ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮತ್ತೊಂದು ಬೈಕ್‌ ಚಲಾಯಿಸುತ್ತಿದ್ದ ಯುವಕನನ್ನು ಭದ್ರಾವತಿ ತಾಲೂಕು ಅರದೊಟ್ಟು ಗ್ರಾಮದ ಬಸವರಾಜ್ ಗಾಯಗೊಂಡಿದ್ದು ಈತನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈಮರ ಕಡೆಯಿಂದ ಬಸವರಾಜ್ ಕಲ್ಲಿಹಾಳ್‌ ಕಡೆಗೆ ತೆರಳುತ್ತಿದ್ದ. ಇದೇ ವೇಳೆ ಲಾರಿ ಹಾಗೂ ಬೈಕ್‌ ಎದುರಿನಿಂದ ಬರುತ್ತಿದ್ದವು. ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ಮೂವರಿದ್ದ ಬೈಕ್‌ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಆಗ, ಎರಡೂ ಬೈಕ್‌ ಸವಾರರಿಗೆ ನಿಯಂತ್ರಣ ತಪ್ಪಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಆಗ ಮತ್ತೊಂದಡೆ ವೇಗವಾಗಿ ಚಲಿಸುತ್ತಿದ್ದ ಲಾರಿ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೆ ಮೃತಟ್ಟಿದ್ದು, ದೇಹಗಳು ಛಿದ್ರಗೊಂಡಿವೆ. ಇನ್ನು ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ