AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು

Shivamogga: ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ. ಮೊದಲಿಗೆ ಎರಡು ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ಬೈಕ್​ ಸವಾರರ ಮೇಲೆ ಹರಿದಿದೆ.

ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು
ಲಾರಿ
Basavaraj Yaraganavi
| Edited By: |

Updated on: Oct 01, 2023 | 10:25 AM

Share

ಶಿವಮೊಗ್ಗ, (ಅಕ್ಟೋಬರ್ 01): ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ (Shivamogga)  ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಕಾಸ್ (18), ಯಶ್ವಂತ‌(17) ಶಶಾಂಕ (17) ಮೃತಪಟ್ಟ ದುರ್ದೈವಿಗಳು. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಬೈಕ್​ ಸವಾರರ ಮೇಲೆ ಹರಿದಿದೆ. ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮತ್ತೊಂದು ಬೈಕ್‌ ಚಲಾಯಿಸುತ್ತಿದ್ದ ಯುವಕನನ್ನು ಭದ್ರಾವತಿ ತಾಲೂಕು ಅರದೊಟ್ಟು ಗ್ರಾಮದ ಬಸವರಾಜ್ ಗಾಯಗೊಂಡಿದ್ದು ಈತನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈಮರ ಕಡೆಯಿಂದ ಬಸವರಾಜ್ ಕಲ್ಲಿಹಾಳ್‌ ಕಡೆಗೆ ತೆರಳುತ್ತಿದ್ದ. ಇದೇ ವೇಳೆ ಲಾರಿ ಹಾಗೂ ಬೈಕ್‌ ಎದುರಿನಿಂದ ಬರುತ್ತಿದ್ದವು. ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ಮೂವರಿದ್ದ ಬೈಕ್‌ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಆಗ, ಎರಡೂ ಬೈಕ್‌ ಸವಾರರಿಗೆ ನಿಯಂತ್ರಣ ತಪ್ಪಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಆಗ ಮತ್ತೊಂದಡೆ ವೇಗವಾಗಿ ಚಲಿಸುತ್ತಿದ್ದ ಲಾರಿ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೆ ಮೃತಟ್ಟಿದ್ದು, ದೇಹಗಳು ಛಿದ್ರಗೊಂಡಿವೆ. ಇನ್ನು ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ