AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ

ಗಂಡ ಗೋವಾಕ್ಕೆ ಹೋಗಿದ್ದಾಗ, ಇತ್ತ ಮನೆಯಲ್ಲಿದ್ದ ಹೆಂಡತಿಯನ್ನು ದುಷ್ಮರ್ಮಿಗಳು ಉಸಿರುಗಟ್ಟಿಸಿ ಕೊಂದಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ
ಕೊಲೆಯಾದ ಮಹಿಳೆ
ರಮೇಶ್ ಬಿ. ಜವಳಗೇರಾ
|

Updated on: Jun 18, 2023 | 5:24 PM

Share

ಶಿವಮೊಗ್ಗ: ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಇಂದು(ಜೂನ್ 18) ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ. ವಿಜಯನಗರದ ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾರೆ. ಇದರಿಂದ ಕಮಲಮ್ಮ ಒಬ್ಬರೆ ಇದ್ದಾಗ ದುಷ್ಕರ್ಮಿಗಳು ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ.

ಇದನ್ನೂ ಓದಿ: Shivamogga News: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು

ಕಮಲಮ್ಮ ಅವರ ಪತಿ ಚಿತ್ರದುರ್ಗದಲ್ಲಿ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದು, ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾನೆ. ಕಮ್ಮಲಮ್ಮ ಒಬ್ಬರೇ ಮನೆಯಲ್ಲಿ ಇದ್ದರು. ಶನಿವಾರ ಸಂಜೆಯೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.

ಮನೆ ಬಲ್ಬ್ ಗಳನ್ನೂ ಆನ್ ಮಾಡಿರಲಿಲ್ಲ. ಅನುಮಾನಗೊಂಡು ಮನೆ ಬಾಗಿಲು ತೆರದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ. ಬಾಯಿಗೆ ಬಟ್ಟೆ ತುರುಕಿದ್ದು ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಶಿವಮೊಗ್ಗ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ