AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ

ಗಂಡ ಗೋವಾಕ್ಕೆ ಹೋಗಿದ್ದಾಗ, ಇತ್ತ ಮನೆಯಲ್ಲಿದ್ದ ಹೆಂಡತಿಯನ್ನು ದುಷ್ಮರ್ಮಿಗಳು ಉಸಿರುಗಟ್ಟಿಸಿ ಕೊಂದಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ
ಕೊಲೆಯಾದ ಮಹಿಳೆ
ರಮೇಶ್ ಬಿ. ಜವಳಗೇರಾ
|

Updated on: Jun 18, 2023 | 5:24 PM

Share

ಶಿವಮೊಗ್ಗ: ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಇಂದು(ಜೂನ್ 18) ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ. ವಿಜಯನಗರದ ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾರೆ. ಇದರಿಂದ ಕಮಲಮ್ಮ ಒಬ್ಬರೆ ಇದ್ದಾಗ ದುಷ್ಕರ್ಮಿಗಳು ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ.

ಇದನ್ನೂ ಓದಿ: Shivamogga News: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು

ಕಮಲಮ್ಮ ಅವರ ಪತಿ ಚಿತ್ರದುರ್ಗದಲ್ಲಿ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದು, ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾನೆ. ಕಮ್ಮಲಮ್ಮ ಒಬ್ಬರೇ ಮನೆಯಲ್ಲಿ ಇದ್ದರು. ಶನಿವಾರ ಸಂಜೆಯೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.

ಮನೆ ಬಲ್ಬ್ ಗಳನ್ನೂ ಆನ್ ಮಾಡಿರಲಿಲ್ಲ. ಅನುಮಾನಗೊಂಡು ಮನೆ ಬಾಗಿಲು ತೆರದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ. ಬಾಯಿಗೆ ಬಟ್ಟೆ ತುರುಕಿದ್ದು ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಶಿವಮೊಗ್ಗ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!