AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ

ಗಂಡ ಗೋವಾಕ್ಕೆ ಹೋಗಿದ್ದಾಗ, ಇತ್ತ ಮನೆಯಲ್ಲಿದ್ದ ಹೆಂಡತಿಯನ್ನು ದುಷ್ಮರ್ಮಿಗಳು ಉಸಿರುಗಟ್ಟಿಸಿ ಕೊಂದಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ
ಕೊಲೆಯಾದ ಮಹಿಳೆ
ರಮೇಶ್ ಬಿ. ಜವಳಗೇರಾ
|

Updated on: Jun 18, 2023 | 5:24 PM

Share

ಶಿವಮೊಗ್ಗ: ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಇಂದು(ಜೂನ್ 18) ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ. ವಿಜಯನಗರದ ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾರೆ. ಇದರಿಂದ ಕಮಲಮ್ಮ ಒಬ್ಬರೆ ಇದ್ದಾಗ ದುಷ್ಕರ್ಮಿಗಳು ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ.

ಇದನ್ನೂ ಓದಿ: Shivamogga News: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು

ಕಮಲಮ್ಮ ಅವರ ಪತಿ ಚಿತ್ರದುರ್ಗದಲ್ಲಿ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದು, ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾನೆ. ಕಮ್ಮಲಮ್ಮ ಒಬ್ಬರೇ ಮನೆಯಲ್ಲಿ ಇದ್ದರು. ಶನಿವಾರ ಸಂಜೆಯೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.

ಮನೆ ಬಲ್ಬ್ ಗಳನ್ನೂ ಆನ್ ಮಾಡಿರಲಿಲ್ಲ. ಅನುಮಾನಗೊಂಡು ಮನೆ ಬಾಗಿಲು ತೆರದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ. ಬಾಯಿಗೆ ಬಟ್ಟೆ ತುರುಕಿದ್ದು ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಶಿವಮೊಗ್ಗ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು