AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ

ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು  ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳು.

ಶಿವಮೊಗ್ಗ: ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ
ಮೆಗ್ಗಾನ್ ಜಿಲ್ಲಾಸ್ಪತ್ರೆ ಹೆರಿಗೆ ವಾರ್ಡ್.
TV9 Web
| Edited By: |

Updated on:Oct 10, 2022 | 11:10 PM

Share

ಶಿವಮೊಗ್ಗ: ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಬಾತ್ ರೂಂನಿಂದ ಹೊರಗೆ ಬಿಸಾಡಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು  ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗ್ಗೆ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಬಂದಿದ್ದಾಳೆ. ಮಗುವಿನ  ಅಳುವಿನ ಶಬ್ಧ ಸರ್ಜರಿ ವಿಭಾಗದಿಂದ ಕೇಳಿ ಬಂದಿದ್ದಕ್ಕೆ ಮೆಗ್ಗಾನ್ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಹುಡುಕಿದ್ದಾರೆ. ಶೌಚಾಲಯದ ಹೊರಭಾಗದಲ್ಲಿ ಮಲಗಿದ್ದ ಹೆಣ್ಣು ಮಗು ಪತ್ತೆಯಾಗಿದೆ.

ಈ ಕುರಿತು ಯಾರನ್ನೂ ಕೇಳಿದರೂ ಗೊತ್ತಿಲ್ಲವೆಂದು ಹೇಳಿದ್ದಾರೆ. ಇದರಿಂದ ಮಗು ಯಾರದ್ದು ಇರಬಹುದು ಎಂದು ಆಸ್ಪತ್ರೆ ಸಿಬ್ಬಂದಿ ಪತ್ತೆಗೆ ಮುಂದಾಗಿದ್ದಾರೆ.  ಮಗುವಿನ ಜನ್ಮ ನೀಡಿದ ತಾಯಿಯನ್ನ ಹುಡುಕಲು ಆರಂಭಿಸಿದ ಸಿಬ್ಬಂದಿಗಳು ಓಬಿಜಿ ವೈದ್ಯರನ್ನ ಕರೆತಂದು ಸರ್ಜರಿ ವಿಭಾಗದಲ್ಲಿ ದಾಖಲಾದ ಯುವತಿಯನ್ನ ಅನುಮಾನದಿಂದ ಕೌನ್ಸಲಿಂಗ್ ನಡೆಸಿದಾದ್ದಾರೆ. ಅಲ್ಲದೇ ತಕ್ಷಣವೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಪೊಲೀಸರು ಬಂದು ವಿಚಾರಣೆ ನಡೆಸಿದಾಗ ತಾಯಿ ಮಗುವನ್ನು ಬಿಸಾಕಿರುವುದು ಒಪ್ಪಿಕೊಂಡಿದ್ದಾಳೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಪತ್ತೆಯಾದ ಮಗುವನ್ನು ಸದ್ಯ ರಕ್ಷಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆ ಬಳಿಕ ಯುವತಿಯನ್ನ ಸರ್ಜರಿ ವಿಭಾಗದಿಂದ ಹೆರಿಗೆ ವಾರ್ಡ್​​ಗೆ  ಸ್ಥಳಾಂತರಿಸಲಾಗಿದೆ.

ಈ ಯುವತಿ ಯಾಕೆ ಹೀಗೆ ಮಾಡಿದಳು ಅಂತಾ ನೋಡುವುದಾದರೆ, ಇಲ್ಲೊಂದು ಲವ್ ಸ್ಟೋರಿ ಇದೆ. ಶಿಕಾರಿಪುರದ ಸುರಗೀಹಳ್ಳಿಯ ರಾಕೇಶ್ ಎನ್ನುವ ಯುವಕನ ಜೊತೆ ಯುವತಿಗೆ ಲವ್ ಆಗಿತ್ತು. ಬಳಿಕ ಇಬ್ಬರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿದ್ದಾರೆ. ಡಿಪ್ಲೊಮಾ ಓದುವಾಗಲೇ ಶಿಕಾರಿಪುರದ ವಿವಾಹ ನೋಂದಾಣಿ  ಕಚೇರಿಯಲ್ಲಿ ಯಾರಿಗೂ ಗೊತ್ತಿಲ್ಲದೇ ಮದುವೆಯಾಗಿದ್ದಾರೆ.

ಈ ನಡುವೆ ಯುವತಿ ಗರ್ಭೀಣಿಯಾಗಿದ್ದಳು. ಒಂದು ವೇಳೆ ಮಗು ಆಗಿದ್ದು ಗೊತ್ತಾಗಿಬಿಟ್ಟರೆ ಮದುವೆ ರಹಸ್ಯ ಬಯಲಾಯಾಗಿ ಸಮಸ್ಯೆ ಆಗುತ್ತದೆ ಎಂದು ತಿಳಿದ ಯುವತಿ ಹುಟ್ಟಿರುವ ಮಗುವನ್ನು ಈ ರೀತಿ ಬಿಟ್ಟು ಹೋಗಿದ್ದಾಳೆ. ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಈ ಘಟನೆ ಬೆಳಕಿಗೆ ಬಂದ ಬಳಿಕ ಆಸ್ಪತ್ರೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ಹಾಗೂ ವೈದ್ಯರು ಅಲರ್ಟ್ ಆಗಿದ್ದಾರೆ. ಸದ್ಯ  ಘಟನೆ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವರದಿ: ಬಸವರಾಜ್ ಯರಗಣವಿ ಟಿವಿ9 ಶಿವಮೊಗ್ಗ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:28 pm, Mon, 10 October 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!