AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​ ಪಾಲಾದ

ತಮ್ಮ ಫೋಟೊವನ್ನು ತಮಗೆ ಬೇಕಾದಂತೆ ತಾವೇ ತೆಗೆದುಕೊಳ್ಳುವ ಸೆಲ್ಫಿ ಕ್ರೇಜ್‌ ಕೇವಲ ಯುವಕರು ಮಾತ್ರವಲ್ಲದೆ, ಎಲ್ಲಾ ವಯೋಮಾನದವರಿಗೂ ಅತ್ಯಂತ ಪ್ರಿಯ. ಆದರೆ ಇತ್ತೀಚಿಗೆ ಈ ಕ್ರೇಜ್‌ ಮಿತಿ ಮೀರಿ ಎಳೆ ಪ್ರಾಯದ ಯುವಕರ ಪ್ರಾಣಕ್ಕೆ ಎರವಾಗುತ್ತಿರುವುದು ಮಾತ್ರ ಆಂತಕದ ಸಂಗತಿ. ಹೌದು..ಅಬ್ಬಿ ಫಾಲ್ಸ್​ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​  ಪಾಲಾದ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jun 24, 2024 | 3:55 PM

Share

ಶಿವಮೊಗ್ಗ, (ಜೂನ್ 24): ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿ ಫಾಲ್ಸ್​ನಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಫಾಲ್ಸ್​ನಲ್ಲಿ ಈ ದುರ್ಘಟನೆ ನಡೆದಿದೆ. 12 ಜನರ ಗೆಳೆಯರೊಂದಿಗೆ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ಮೂಲದ ವಿನೋದ್(26) ಸೆಲ್ಫಿ ಕ್ಕಿಕ್ಕಿಸಿಕೊಳ್ಳುವಾಗ ಕಾಲ ಜಾರಿ ಬಿದ್ದು ನೀರುಪಾಲಾಗಿದ್ದಾನೆ.

12 ಯುವಕರ ತಂಡ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿತ್ತು. ಈ ಪೈಕಿ ಬಳ್ಳಾರಿ ಮೂಲದ ವಿನೋದ್ (26) ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿದೆ. ಪರಿಣಾಮ ಜಲಪಾತದೊಳಗೆ ಬಿದ್ದಿದ್ದಾನೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ವಿನೋದ್​ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ಕುಡಿದ ನಶೆಯಲ್ಲಿ ಯುವಕ ನೇಣಿಗೆ ಶರಣು

ಬೆಳಗಾವಿ: ಕುಡಿದ ಮತ್ತಿನಲ್ಲಿ ವಿಠ್ಠಲ್ ಮಾದರ(26) ಎನ್ನುವ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಡೋಣವಾಡ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಠ್ಠಲ್​, ಇಂದು(ಜೂನ್ 24) ಕುಡಿದ ನಶೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ‌ ಮೇಲ್ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!