ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​ ಪಾಲಾದ

| Updated By: ರಮೇಶ್ ಬಿ. ಜವಳಗೇರಾ

Updated on: Jun 24, 2024 | 3:55 PM

ತಮ್ಮ ಫೋಟೊವನ್ನು ತಮಗೆ ಬೇಕಾದಂತೆ ತಾವೇ ತೆಗೆದುಕೊಳ್ಳುವ ಸೆಲ್ಫಿ ಕ್ರೇಜ್‌ ಕೇವಲ ಯುವಕರು ಮಾತ್ರವಲ್ಲದೆ, ಎಲ್ಲಾ ವಯೋಮಾನದವರಿಗೂ ಅತ್ಯಂತ ಪ್ರಿಯ. ಆದರೆ ಇತ್ತೀಚಿಗೆ ಈ ಕ್ರೇಜ್‌ ಮಿತಿ ಮೀರಿ ಎಳೆ ಪ್ರಾಯದ ಯುವಕರ ಪ್ರಾಣಕ್ಕೆ ಎರವಾಗುತ್ತಿರುವುದು ಮಾತ್ರ ಆಂತಕದ ಸಂಗತಿ. ಹೌದು..ಅಬ್ಬಿ ಫಾಲ್ಸ್​ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​  ಪಾಲಾದ
Follow us on

ಶಿವಮೊಗ್ಗ, (ಜೂನ್ 24): ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿ ಫಾಲ್ಸ್​ನಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಫಾಲ್ಸ್​ನಲ್ಲಿ ಈ ದುರ್ಘಟನೆ ನಡೆದಿದೆ. 12 ಜನರ ಗೆಳೆಯರೊಂದಿಗೆ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ಮೂಲದ ವಿನೋದ್(26) ಸೆಲ್ಫಿ ಕ್ಕಿಕ್ಕಿಸಿಕೊಳ್ಳುವಾಗ ಕಾಲ ಜಾರಿ ಬಿದ್ದು ನೀರುಪಾಲಾಗಿದ್ದಾನೆ.

12 ಯುವಕರ ತಂಡ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿತ್ತು. ಈ ಪೈಕಿ ಬಳ್ಳಾರಿ ಮೂಲದ ವಿನೋದ್ (26) ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿದೆ. ಪರಿಣಾಮ ಜಲಪಾತದೊಳಗೆ ಬಿದ್ದಿದ್ದಾನೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ವಿನೋದ್​ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ಕುಡಿದ ನಶೆಯಲ್ಲಿ ಯುವಕ ನೇಣಿಗೆ ಶರಣು

ಬೆಳಗಾವಿ: ಕುಡಿದ ಮತ್ತಿನಲ್ಲಿ ವಿಠ್ಠಲ್ ಮಾದರ(26) ಎನ್ನುವ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಡೋಣವಾಡ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಠ್ಠಲ್​, ಇಂದು(ಜೂನ್ 24) ಕುಡಿದ ನಶೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ‌ ಮೇಲ್ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.