ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​ ಪಾಲಾದ

ತಮ್ಮ ಫೋಟೊವನ್ನು ತಮಗೆ ಬೇಕಾದಂತೆ ತಾವೇ ತೆಗೆದುಕೊಳ್ಳುವ ಸೆಲ್ಫಿ ಕ್ರೇಜ್‌ ಕೇವಲ ಯುವಕರು ಮಾತ್ರವಲ್ಲದೆ, ಎಲ್ಲಾ ವಯೋಮಾನದವರಿಗೂ ಅತ್ಯಂತ ಪ್ರಿಯ. ಆದರೆ ಇತ್ತೀಚಿಗೆ ಈ ಕ್ರೇಜ್‌ ಮಿತಿ ಮೀರಿ ಎಳೆ ಪ್ರಾಯದ ಯುವಕರ ಪ್ರಾಣಕ್ಕೆ ಎರವಾಗುತ್ತಿರುವುದು ಮಾತ್ರ ಆಂತಕದ ಸಂಗತಿ. ಹೌದು..ಅಬ್ಬಿ ಫಾಲ್ಸ್​ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​  ಪಾಲಾದ
Edited By:

Updated on: Jun 24, 2024 | 3:55 PM

ಶಿವಮೊಗ್ಗ, (ಜೂನ್ 24): ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿ ಫಾಲ್ಸ್​ನಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಫಾಲ್ಸ್​ನಲ್ಲಿ ಈ ದುರ್ಘಟನೆ ನಡೆದಿದೆ. 12 ಜನರ ಗೆಳೆಯರೊಂದಿಗೆ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ಮೂಲದ ವಿನೋದ್(26) ಸೆಲ್ಫಿ ಕ್ಕಿಕ್ಕಿಸಿಕೊಳ್ಳುವಾಗ ಕಾಲ ಜಾರಿ ಬಿದ್ದು ನೀರುಪಾಲಾಗಿದ್ದಾನೆ.

12 ಯುವಕರ ತಂಡ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿತ್ತು. ಈ ಪೈಕಿ ಬಳ್ಳಾರಿ ಮೂಲದ ವಿನೋದ್ (26) ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿದೆ. ಪರಿಣಾಮ ಜಲಪಾತದೊಳಗೆ ಬಿದ್ದಿದ್ದಾನೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ವಿನೋದ್​ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ಕುಡಿದ ನಶೆಯಲ್ಲಿ ಯುವಕ ನೇಣಿಗೆ ಶರಣು

ಬೆಳಗಾವಿ: ಕುಡಿದ ಮತ್ತಿನಲ್ಲಿ ವಿಠ್ಠಲ್ ಮಾದರ(26) ಎನ್ನುವ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಡೋಣವಾಡ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಠ್ಠಲ್​, ಇಂದು(ಜೂನ್ 24) ಕುಡಿದ ನಶೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ‌ ಮೇಲ್ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More
Follow Us