AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರ ನುಂಗಿದ ಹಸು! ಮುಂದೇನಾಯ್ತು?

ಮನೆಯ ಹಸುವೊಂದು ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರ ನುಂಗಿತ್ತು. ಆತಂಕಕಾರಿ ಬೆಳವಣಿಗೆಯಲ್ಲಿ ಬಂಗಾರದ ಸರ ನುಂಗಿದ್ದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಮುಂದೆ ಅದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂಬ ಆತಂಕ ಕುಟುಂಬಸ್ಥರಲ್ಲಿ ಮಡುವುಗಟ್ಟಿದೆ.

ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರ ನುಂಗಿದ ಹಸು! ಮುಂದೇನಾಯ್ತು?
ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ಮನೆಯ ಹಸು ನುಂಗಿದ ಪ್ರಸಂಗ
Basavaraj Yaraganavi
| Edited By: |

Updated on:Nov 28, 2023 | 2:46 PM

Share

ಶಿವಮೊಗ್ಗ: ಗೋಪೂಜೆ (Gopuja) ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ಮನೆಯ ಹಸು (cow) ನುಂಗಿದ ಪ್ರಸಂಗ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ (hosnagar) ತಾಲೂಕಿನ ಮತ್ತಿಮನೆ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ಯಾಮ ಉಡುಪ ಎಂಬುವವರಿಗೆ ಸೇರಿದ ಹಸು ಆ ಬಂಗಾರದ ಸರವನ್ನು (gold chain) ನುಂಗಿತ್ತು, ಕೊನೆಗೆ ಪಶು ವೈದ್ಯರು ಬಂಗಾರದ ಸರವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಗೋಪೂಜೆಗೆಂದು ತೆಗೆದಿಟ್ಟಿದ್ದ ಸರ ಇದ್ದಕ್ಕಿದ್ದಂತೆ ಮಾಯವಾಗಿತ್ತು. ಶ್ಯಾಮ ಉಡುಪ ಕುಟುಂಬಸ್ಥರು ಎಲ್ಲಡೆ ಹುಡುಕಾಟ ನಡೆಸಿದ್ದರು. ಆದರೆ ಎಲ್ಲೂ ಸಿಗದಿದ್ದಾಗ, ಪ್ರಸಾದದ ಜೊತೆ ಬಂಗಾರದ ಸರವನ್ನೂ ಹಸು ನುಂಗಿರಬಹುದು ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಅಲ್ಲಿಗೂ ಕುಟುಂಬಸ್ಥರು ಬಂಗಾರದ ಸರ ಹೋದರೆ ಹೋಗಲಿ, ನಮ್ಮ ಹಸು ತಣ್ಣಗಿರಲಿ ಎಂದು ಸುಮ್ಮನಾಗಿದ್ಧರು.

ಆದರೆ ಇತ್ತ ಆತಂಕಕಾರಿ ಬೆಳವಣಿಗೆಯಲ್ಲಿ ಬಂಗಾರದ ಸರ ನುಂಗಿದ್ದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಮುಂದೆ ಅದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂಬ ಆತಂಕ ಅವರಲ್ಲಿ ಮಡುವುಗಟ್ಟಿದೆ.

ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದಲ್ಲಿ ಸೋದರತ್ತೆಯರು ತಮ್ಮ ಸೊಸೆಗೆ ಸೀರೆ ಉಡಿಸಬೇಕು ಅನ್ನೋ ಸುದ್ದಿ ಹರಿದಾಡುತ್ತಿದೆ! ಏನಿದರ ಒಳಗುಟ್ಟು?

ಕೊನೆಗೆ ಗತ್ಯಂತರವಿಲ್ಲದೆ ಶ್ಯಾಮ ಉಡುಪ ಕುಟುಂಬಸ್ಥರು ಹಸುವಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಪಶು ವೈದ್ಯ ಡಾ. ಆನಂದ ಅವರು ಆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಹಸುವಿನ ಹೊಟ್ಟೆಯೊಳಗಿಂದ ಚಿನ್ನದ ಸರವನ್ನು ಹೊರ ತೆಗೆಯುವಲ್ಲಿ ವೈದ್ಯರು ಸಫಲರಾಗಿದ್ದಾರೆ. ಸಮಾಧಾನಕರ ಸಂಗತಿಯೆಂದರೆ ಶಸ್ತ್ರಚಿಕಿತ್ಸೆ ಬಳಿಕ ಹಸು ಆರೋಗ್ಯದಿಂದ ಇದೆ, ಜೊತೆಗೆ ಶ್ಯಾಮ ಉಡುಪ ಅವರ ಮನೆಯವರಿಗೆ ಚಿನ್ನದ ಸರ ಮತ್ತೆ ಸಿಕ್ಕಿದ ಸಮಾಧಾನವೂ ಮನೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:46 pm, Tue, 28 November 23

Follow Us
Basavaraj Yaraganavi
Basavaraj Yaraganavi
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ