AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಅರಣ್ಯಾಧಿಕಾರಿಗಳಿಂದ ಮನೆಯ ಮೇಲೆ ದಾಳಿ; ಜಿಂಕೆ, ಕಾಡುಕೋಣದ ಕೊಂಬು ವಶಕ್ಕೆ

ನೂರಾರು ವರ್ಷಗಳಿಂದ ಈ ಮನೆಯಲ್ಲಿ ವನ್ಯಜೀವಿಯ ಟ್ರೋಫಿಯೊಂದು ಇದ್ದು, ಇದೀಗ ಅದನ್ನು ಸೀಜ್ ಮಾಡಿದ್ದಾರೆ. ಇನ್ನು ಮನೆ ಯಜಮಾನ ವಯಸ್ಸಾಗಿ ಅನಾರೋಗ್ಯದಲ್ಲಿದಲಿದ್ದಾರೆ. ಆದರೂ ಅರಣ್ಯ ಅಧಿಕಾರಿಗಳು ಆತನನ್ನು ಬಂಧಿಸಲು ಮುಂದಾಗಿದ್ದು, ಅರಣ್ಯ ಅಧಿಕಾರಿಗಳ ಧೋರಣೆಗೆ ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ: ಅರಣ್ಯಾಧಿಕಾರಿಗಳಿಂದ ಮನೆಯ ಮೇಲೆ ದಾಳಿ; ಜಿಂಕೆ, ಕಾಡುಕೋಣದ ಕೊಂಬು ವಶಕ್ಕೆ
ತೀರ್ಥಹಳ್ಳಿಯಲ್ಲಿ ಕಾಡು ಪ್ರಾಣಿಗಳ ಕೊಂಬು ಪತ್ತೆ
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್|

Updated on:Nov 01, 2023 | 3:12 PM

Share

ಶಿವಮೊಗ್ಗ, ನ.01: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಹುಲಿ ಉಗುರಿನ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಅದರಂತೆ ಇದೀಗ ವನ್ಯಜೀವಿ ಉಪ ಸಂರಕ್ಷಣಾ ಅಧಿಕಾರಿಗಳ ತಂಡ ಮತ್ತು ಅರಣ್ಯ ಜಾಗೃತ ದಳ ಅಧಿಕಾರಿಗಳು ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಸಮೀಪದ ಬಸವನಗದ್ದೆಯಲ್ಲಿ ಜಂಟಿ ಕಾರ್ಯಾಚರಣೆ ಮಾಡಿ, ಕಾಡು ಪ್ರಾಣಿಗಳ ಕೊಂಬನ್ನು ವಶಕ್ಕೆ ಪಡೆದಿದ್ದಾರೆ. ಹೌದು, ಪ್ರಸನ್ನ ಎಂಬುವವರ ಮನೆ‘ಯ 12 ಜನ ಅಧಿಕಾರಿಗಳ ತಂಡವು ದಾಳಿ ಮಾಡಿ, ಮನೆಯಲ್ಲಿದ್ದ ಜಿಂಕೆ ಮತ್ತು ಕಾಡುಕೋಣದ ಕೊಂಬನ್ನು ವಶಕ್ಕೆ ಪಡೆದಿದ್ದಾರೆ.

ಅನಾರೋಗ್ಯದಲ್ಲಿರುವ ಮನೆ ಯಜಮಾನನ್ನು ಬಂಧಿಸಲು ಮುಂದಾದ ಅರಣ್ಯಾಧಿಕಾರಿಗಳು

ಹೌದು, ನೂರಾರು ವರ್ಷಗಳಿಂದ ಈ ಮನೆಯಲ್ಲಿ ವನ್ಯಜೀವಿಯ ಟ್ರೋಫಿಯೊಂದು ಇದ್ದು, ಇದೀಗ ಅದನ್ನು ಸೀಜ್ ಮಾಡಿದ್ದಾರೆ. ಇನ್ನು ಮನೆ ಯಜಮಾನ ವಯಸ್ಸಾಗಿ ಅನಾರೋಗ್ಯದಲ್ಲಿದಲಿದ್ದಾರೆ. ಆದರೂ ಅರಣ್ಯ ಅಧಿಕಾರಿಗಳು ಆತನನ್ನು ಬಂಧಿಸಲು ಮುಂದಾಗಿದ್ದು, ಅರಣ್ಯ ಅಧಿಕಾರಿಗಳ ಧೋರಣೆಗೆ ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಅರಣ್ಯಾಧಿಕಾರಿಗಳ ಈ ದಿಢೀರ್​ ಕ್ರಮವನ್ನು ಖಂಡಿಸಿ ಮಾಜಿ ಸಚಿವ ಆರಗ ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ:ಹುಲಿ ಉಗುರು ವಿವಾದ: ನನ್ನ ಬೆಡ್​​ರೂಮ್​ಗೆ ನುಗ್ಗಿ ಸರ್ಚ್​​ ಮಾಡಿದ್ದಾರೆ, ಅರಣ್ಯ ಅಧಿಕಾರಿಗಳ ವಿರುದ್ಧ ಸವದಿ ಕೆಂಡಾಮಂಡಲ

ಇನ್ನು ಶಾಸಕ ಲಕ್ಷ್ಮಣ್ ಸವದಿ ಅವರ ಪುತ್ರನಾದ ಸುಮಿತ್, ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 31 ರಂದು ಅರಣ್ಯ ಅಧಿಕಾರಿಗಳು ಮನೆಗೆ ಬಂದು ಪರಿಶೀಲನೆ ನಡೆಸಿದ್ದರು. ಇದರ ವಿರುದ್ಧ ಲಕ್ಷ್ಮಣ್ ಸವದಿ ಅವರು  ಕೆಂಡಾಮಂಡಲವಾಗಿದ್ದರು. ಹುಲಿ ಉಗುರು ಇಲ್ಲ, ಇಲಿ ಉಗುರೂ ಇಲ್ಲ. ಅದು ಕೃತಕ ಉಗುರು. ನಮ್ಮ ಮನೆ ಪರಿಶೀಲನೆ ಮಾಡಬೇಕಾದರೆ ನನ್ನ ಗಮನಕ್ಕೆ ತರಬೇಕಿತ್ತು. ಅಥವಾ ನೋಟಿಸ್ ನೀಡಬೇಕಿತ್ತು. ನಾನು ಊರಲ್ಲಿ ಇರದ ಸಮಯದಲ್ಲಿ ನನ್ನ ಬೆಡ್ ರೂಮ್​​ಗೆ ಹೊಗಿ ಪರಿಶೀಲನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Wed, 1 November 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ