AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಖಾಸಗಿ ಲಾಡ್ಜ್​​ನಲ್ಲಿ ವಿಷ ಸೇವಿಸಿ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಶರಣು

ಹಾಡಹಗಲು ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದು, 7.5 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Crime News: ಖಾಸಗಿ ಲಾಡ್ಜ್​​ನಲ್ಲಿ ವಿಷ ಸೇವಿಸಿ ವ್ಯಕ್ತಿ ಓರ್ವ ಆತ್ಮಹತ್ಯೆಗೆ ಶರಣು
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 16, 2022 | 10:04 PM

Share

ಶಿವಮೊಗ್ಗ: ನಗರದ ಖಾಸಗಿ ಲಾಡ್ಜ್​ನಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣ ಸಮೀಪದ ಲಾಡ್ಜ್​ನಲ್ಲಿ ನಡೆದಿದೆ. ತುಮಕೂರು ಮೂಲದ ಮಂಜುನಾಥ್(26) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.  ಮಂಜುನಾಥ್​ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಸೂರಗೊಂಡನಹಳ್ಳಿ ಗ್ರಾಮದ ನಿವಾಸಿ. ಸೆಪ್ಟೆಂಬರ್ 13 ರಂದು ಖಾಸಗಿ ಲಾಡ್ಜ್​ನಲ್ಲಿ ಬಂದು ವಾಸ್ತವ್ಯ ಹೂಡಿದ್ದು, ನಿನ್ನೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್‌ನೋಟ್‌ ಬರೆದಿಟ್ಟು ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದು, ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಸ್ನೇಹಿತನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ದ ಅಕ್ಕ ಸುಧಾ, ಕೋಪದಿಂದ ಅಕ್ಕನನ್ನು ಕೊಂದು ಆತ್ಮಹತ್ಯೆಯೆಂದು ಉಲ್ಲೇಖಿಸಲಾಗಿದೆ. ಕೊಠಡಿಯಿಂದ ವಾಸನೆ ಬಂದ ಹಿನ್ನೆಲೆ ಲಾಡ್ಜ್ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಡಹಗಲು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಹಾಡಹಗಲು ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದು, 7.5 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮನೆಗಳ್ಳತನ ಮಾಡ್ತಿದ್ದ ಆರೋಪಿ ಜಯಂತಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಹಗಲು ಹೊತ್ತಿನಲ್ಲಿಯೇ ಮನೆ ಲಾಕ್ ಮುರಿಯುತಿದ್ದ ಈ ಜಯಂತಿ, ನಂತರ ಇಡೀ ಮನೆಯನ್ನು ಜಾಲಾಡಿ ಚಿನ್ನಾಭರಣ, ಹಣ ಕದ್ದು ಪರಾರಿಯಾಗುತ್ತಿದ್ದಳು. ಬೆಂಗಳೂರಿನ ವಿವಿಧ ಠಾಣೆಯ‌ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.

ನವವಿವಾಹಿತೆಯ ಬರ್ಬರ ಹತ್ಯೆ

ಬೆಂಗಳೂರು ಗ್ರಾಮಾಂತರ: ಚಾಕುವಿನಿಂದ ಇರಿದು ನವವಿವಾಹಿತೆಯ ಬರ್ಬರ ಹತ್ಯೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ ನಿರಾಕರಿಸಿ ಬೇರೊಬ್ಬನ ಜೊತೆ ವಿವಾಹವಾಗಿದ್ದಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆ ಗೈಯಲಾಗಿದೆ. ಪಾಗಲ್ ಪ್ರೇಮಿ ಸುಬ್ರಹ್ಮಣ್ಯ ಎಂಬುವನಿಂದ ಸೌಮ್ಯಾ(23) ಕೊಲೆಯಾದ ದುರ್ದೈವಿ.

ಬೆಂಗಳೂರಿನ ನಾಗವಾರದ ಕಾಫಿ ಡೆನಲ್ಲಿ ಕೆಲಸ ಮಾಡಿಕೊಂಡಿದ್ದ ಸೌಮ್ಯ ಹಾಗೂ ಅಲ್ಲೆ ಕೆಲಸ ಮಾಡಿಕೊಂಡಿದ್ದ ಸುಬ್ರಮಣ್ಯ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕೆಲವು ತಿಂಗಳ ಹಿಂದೆ ಸೌಮ್ಯ ಕೆಲಸ ಬಿಟ್ಟಿದ್ದು, ಹದಿನೈದು ದಿನಗಳ ಹಿಂದೆ ಬೆರೊಬ್ಬನ ಜೊತೆ ಮದುವೆಯಾಗಿದ್ದಳು. ಮದುವೆ ವಿಚಾರ ತಿಳಿದ ಸುಬ್ರಮಣ್ಯ ಕೊಲೆ ಮಾಡಲು ನಿರ್ಧರಿಸಿದ್ದಾನೆ. ಅದರಂತೆ ರಾತ್ರಿ ಮನೆಯವರು ಗಣೇಶನ ಪೂಜೆಗೆ ಹೋಗಿದ್ದ ಹಿನ್ನೆಲೆ ಸೌಮ್ಯ ಮನೆಯಲ್ಲಿ ಒಂಟಿಯಾಗಿದ್ದಳು. ಈ ವೇಳೆ ಮನೆಗೆ ನುಗ್ಗಿದ ಸುಬ್ರಮಣ್ಯ ಎರಡು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಾಣಸವಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಜು ಸೆಲ್ವರಾಜ್ (36) ಬಂಧಿತ ಆರೋಪಿ. ಗೋವಾ, ಖಾನಾಪುರ, ಯಲ್ಲಾಪುರ ಸೇರಿದಂತೆ ವಿವಿಧೆಡೆ ಆರೋಪಿ ವಿರುದ್ಧ ಪ್ರಕರಣಗಳಿವೆ. ಬಂಧಿತನಿಂದ 3.50 ಲಕ್ಷ ಮೌಲ್ಯದ 74 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬಾಣಸವಾಡಿ ಠಾಣಾ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೋಲೀಸರ ದಾಳಿ:

ಕೋಲಾರ: ರೆಹಮತ್ ನಗರದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್​ ಮಾಡುತ್ತಿದ್ದ ಅಯಾಸ್ ಎಂಬಾತನ ಅಂಗಡಿ ಮೇಲೆ ಆಹಾರ ಇಲಾಖೆ ಉಪ ನಿರ್ದೇಶಕಿ ಶೃತಿ ಹಾಗೂ ಗಲ್​ಪೇಟೆ ಪೊಲೀಸರಿಂದ ದಾಳಿ ಮಾಡಲಾಗಿದೆ. 30ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್​ಗಳು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 pm, Fri, 16 September 22

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ