AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ

ಸಾಗರ ತಾಲೂಕು ಆಸ್ಪತ್ರೆಗೆ ಹೋಗಲು ಅಂಬುಲೇನ್ಸ್ ವ್ಯವಸ್ಥೆ ಸಮಸ್ಯೆ ಇಲ್ಲ. ಸಂಜೆಯಾಗುತ್ತಲೇ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಸೇವೆ ಸ್ಥಗಿತವಾಗುತ್ತದೆ. ಸದ್ಯ 120 ಕಿಲೋಮೀಟರ್ ಸುತ್ತು ಹಾಕಿ ಸಾಗರ ಆಸ್ಪತ್ರೆಗೆ ತೆರಳಬೇಕು.

ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ
ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಇಬ್ಬರು ಗಾಯಾಳುಗಳು ಪರದಾಟ
TV9 Web
| Edited By: |

Updated on:Dec 16, 2021 | 8:57 AM

Share

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ತುಮರಿ ಎಂಬಲ್ಲಿ ತುಂಬು ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಹೋಗಲು ಪರದಾಟ ಪಟ್ಟಿದ್ದಾರೆ. ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ಗರ್ಭಿಣಿ ಮಹಿಳೆ ಪರದಾಡಿದ್ದಾರೆ. ಗರ್ಭಿಣಿ ಮಾತ್ರವಲ್ಲ ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರು ಗಾಯಾಳುಗಳು ಸಹಾ ಆಸ್ಪತ್ರೆಗೆ ತೆರಳಲು ಆ್ಯಂಬುಲೆನ್ಸ್ ಇಲ್ಲದೆ ಗೋಳಾಡಿದ್ದಾರೆ. 108 ಆ್ಯಂಬುಲೆನ್ಸ್ ಕೆಟ್ಟು 25 ದಿನಗಳು ಕಳೆದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಂಡಿಲ್ಲ ಅಂತ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಸಾಗರ ತಾಲೂಕು ಆಸ್ಪತ್ರೆಗೆ ಹೋಗಲು ಅಂಬುಲೇನ್ಸ್ ವ್ಯವಸ್ಥೆ ಸಮಸ್ಯೆ ಇಲ್ಲ. ಸಂಜೆಯಾಗುತ್ತಲೇ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಸೇವೆ ಸ್ಥಗಿತವಾಗುತ್ತದೆ. ಸದ್ಯ 120 ಕಿಲೋಮೀಟರ್ ಸುತ್ತು ಹಾಕಿ ಸಾಗರ ಆಸ್ಪತ್ರೆಗೆ ತೆರಳಬೇಕು. ಗರ್ಭಿಣಿ ಚೈತ್ರ ಜಗದೀಶ್ ಮತ್ತು ಗಾಯಾಳುಗಳಾದ ನಾರಾಯಣ ಮತ್ತು ಬಲರಾಮ ಖಾಸಗಿ ವಾಹನ ಸಿಗದೇ ಪರದಾಡಿದ್ದಾರೆ. ಖಾಸಗಿ ವಾಹನದವರು ಯಾರು ಸಹಾಯಕ್ಕೆ ಬರುತ್ತಿಲ್ಲ ಅಂತ ಸ್ಥಳೀಯರು ಆಕ್ರೋಶ ಸಾಗರ ಶಾಸಕ ಹರತಾಳ ಹಾಲಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ-75 ತಡೆದು ವಿದ್ಯಾರ್ಥಿಗಖು ಧರಣಿ ನಡೆಸಿದ್ದಾರೆ. ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಸಕಲೇಶಪುರದಿಂದ ಹಾಸನಕ್ಕೆ ಹೋಗಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ ಎಂದು ಆರೋಪಿಸಿ ಕೂಡಲೇ ಶಾಲಾ, ಕಾಲೇಜು ಸಮಯಕ್ಕೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿದ್ದಾರೆ. ಸಕಲೇಶಪುರ ಡಿಪೋವನ್ನು ಚಿಕ್ಕಮಗಳೂರು ವಿಭಾಗದಿಂದ ಹಾಸನ ವಿಭಾಗಕ್ಕೆ ಬದಲಾಯಿಸುವಂತೆಯೂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

Gold Price Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಇಳಿಕೆಯಾಯ್ತು ಚಿನ್ನದ ದರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?

ಸ್ಕೋಡಾ ಕೊಡಿಯಾಕ್ ಕಾರಿನ ನವೀಕರಣ ಕಾರ್ಯ ಔರಂಗಾಬಾದ್ ಪ್ಲ್ಯಾಂಟ್ ನಲ್ಲಿ ಆರಂಭವಾಗಿದ್ದು ಮುಂದಿನ ತಿಂಗಳು ಭಾರತದಲ್ಲಿ ಲಾಂಚ್ ಆಗಲಿದೆ

Published On - 8:44 am, Thu, 16 December 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?