AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ ತಡೆಯಲು ಪ್ರತ್ಯೇಕ ಪೊಲೀಸ್ ತಂಡ ರಚನೆ; ಗೃಹಸಚಿವ ಆರಗ ಜ್ಞಾನೇಂದ್ರ

ಪಾದಯಾತ್ರೆಯಿಂದ ಕೋಲಾರ, ಹಾಸನ, ತುಮಕೂರು ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗಿದೆ. ಡಿಕೆ ಶಿವಕುಮಾರ್ ಕೊರೊನಾ ಅಂಕಿ ಅಂಶ ಸುಳ್ಳು ಎಂದು ಹೇಳುತ್ತಾರೆ.

ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ ತಡೆಯಲು ಪ್ರತ್ಯೇಕ ಪೊಲೀಸ್ ತಂಡ ರಚನೆ; ಗೃಹಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on:Jan 22, 2022 | 3:06 PM

Share

ಶಿವಮೊಗ್ಗ: ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ (Sand Mafia) ತಡೆಯಲು ಪ್ರತ್ಯೇಕ, ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ. ಕ್ವಾರಿ ಗುತ್ತಿಗೆ ಪಡೆದ ವ್ಯಕ್ತಿ ಡಬ್ಲಿಂಗ್ ಮಾಡಿದರೆ ಪೋಲಿಸರು ಅದನ್ನು ಪತ್ತೆ ಮಾಡಿ ಕ್ರಮಕೈಗೊಳ್ಳುತ್ತಾರೆ. ಮರಳು ತಿನ್ನುವ ವಸ್ತು ಅಲ್ಲ. ಅದು ಬಳಿಕೆದಾರರಿಗೆ ಸುಲಭವಾಗಿ ಸಿಗಬೇಕು ಅಂತ ಶಿವಮೊಗ್ಗದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿಕೆ ನೀಡಿದ್ದಾರೆ. ಮುಂದುವರಿದು ಮಾತನಾಡಿದ ಸಚಿವರು, ಕಾಂಗ್ರೆಸ್ ಪಾದಯಾತ್ರೆ ಭದ್ರತೆಗೆ ತೆರಳಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಶೇ.60ರಷ್ಟು ಪೊಲೀಸರು, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿದೆ ಅಂತ ತಿಳಿಸಿರು.

ಪಾದಯಾತ್ರೆಯಿಂದ ಕೋಲಾರ, ಹಾಸನ, ತುಮಕೂರು ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗಿದೆ. ಡಿಕೆ ಶಿವಕುಮಾರ್ ಕೊರೊನಾ ಅಂಕಿ ಅಂಶ ಸುಳ್ಳು ಎಂದು ಹೇಳುತ್ತಾರೆ. ಡಿಕೆಶಿ ಬಳಿ ಯಾವುದೇ ದಾಖಲೆಗಳಿದ್ದರೆ ದೂರು ನೀಡಲಿ ಅಂತ ಗೃಹಸಚಿವ ಆರಗ ಜ್ಞಾನೇಂದ್ರ ಸವಾಲ್ ಹಾಕಿದ್ದಾರೆ.

ರಾಜ್ಯದಲ್ಲಿ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಶೇ.5ರಷ್ಟಿದೆ. ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಹೆಚ್ಚಾದರೆ ಕಠಿಣ ನಿಯಮ ಜಾರಿಯಾಗುತ್ತದೆ ಎಂದು ಮಾತನಾಡಿದ ಆರಗ ಜ್ಞಾನೇಂದ್ರ, ನಾವು ರಾಜಕೀಯವಾಗಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು. ಜನರ ಅನುಕೂಲಕ್ಕಾಗಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಕೊರೊನಾ ಸೋಂಕು ಹೆಚ್ಚಳ ಆದ್ರೂ ಅದರ ತೀವ್ರತೆ ಕಡಿಮೆ ಇದೆ. ಕೊರೊನಾ ಮತ್ತೆ ವೇಗವಾಗಿ ಹರಡಿದರೆ ಕಠಿಣ ಕ್ರಮ ಅನಿವಾರ್ಯ ಅಂತ ಅಭಿಪ್ರಾಯಪಟ್ಟರು.

ನಿನ್ನೆ ಮೂರು ಘಂಟೆ ಸುದೀರ್ಘ ಸಭೆ ಆಗಿದೆ. ಕೊರೊನಾದಿಂದ ಬೆಂಗಳೂರು ಹೊತ್ತಿ ಉರಿಯುತ್ತಿದೆ. ಪ್ರತಿ ನಿತ್ಯ ಅನ್ನಕ್ಕಾಗಿ ಬಡವರ ಪರದಾಡುತ್ತಿದ್ದಾರೆ. ಬಡ ಕೊಲಿ ಕಾರ್ಮಿಕರಿಗೆ ದೊಡ್ಡ ಹೊಡೆತ ಬೀಳುತ್ತಿದೆ. ಹೀಗಾಗಿ ವಿಕೇಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಇಲ್ಲಿ ಸಾಮಾನ್ಯ ಜನರ ಹೊಣೆಗಾರಿಕೆ ಜಾಸ್ತಿ ಇದೆ. ಎಲ್ಲರೂ ಕೊರೊನಾ ನಿಯಮ ಕಟ್ಟು ನಿಟ್ಟಾಗಿ ಪಾಲಿಸಿ. ನಮ್ಮ ಪ್ರಾಣ, ನಮ್ಮ ಆರೋಗ್ಯ, ನಮ್ಮ ಕೈಯಲ್ಲಿ ಇದೆ ಎನ್ನುವ ಹೊಣೆಗಾರಿಕೆ ಎಲ್ಲರಿಗೂ ಬೇಕು ಅಂತ ಸಚಿವರು ತಿಳಿಸಿದರು.

ಇದನ್ನೂ ಓದಿ

ನಿಖಿಲ್​ ಹೊಸ ಸಿನಿಮಾ ಹೆಸರು ‘ಯದುವೀರ’; ಖಡಕ್​ ಲುಕ್​ ಮೂಲಕ ಹುಟ್ಟುಹಬ್ಬದ ಗಿಫ್ಟ್​

ಸಿನಿಮೀಯ ಶೈಲಿಯಲ್ಲಿ ಭೀಕರ ರಸ್ತೆ ಅಪಘಾತ; ಖ್ಯಾತ​ ನಟ ಬಚಾವ್​, ವೈರಲ್​ ಆಯ್ತು ಫೋಟೋ

Published On - 3:04 pm, Sat, 22 January 22

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,