AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವು

ಸ್ನೇಹಿತರ ಜತೆ ಸ್ವಿಮ್ಮಿಂಗ್​ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಕ್ತಿಧಾಮ ಲೇಔಟ್​ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಸ್ವಿಮ್ಮಿಂಗ್ ಪೂಲ್​ನಲ್ಲಿ ನಡೆದಿದೆ.

ಸ್ನೇಹಿತರ ಜೊತೆ ಸ್ವಿಮ್ಮಿಂಗ್ ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವು
ಮೃತ ಯುವಕ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 28, 2022 | 5:29 PM

ಶಿವಮೊಗ್ಗ: ಸ್ನೇಹಿತರ ಜತೆ ಸ್ವಿಮ್ಮಿಂಗ್​ಪೂಲ್​ಗೆ ಈಜಲು ಹೋಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ಶಕ್ತಿಧಾಮ ಲೇಔಟ್​ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಸ್ವಿಮ್ಮಿಂಗ್ ಪೂಲ್​ನಲ್ಲಿ ನಡೆದಿದೆ. ರಾಕೇಶ್ (18) ಮೃತ ಯುವಕ. ಶಿವಮೊಗ್ಗದ ಜೊಸೆಫ್ ನಗರದ ನಿವಾಸಿ ಕುಮಾರ್ ಎಂಬುವರ ಪುತ್ರನಾಗಿರುವ ರಾಕೇಶ್, ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದನು. ರಾಕೇಶ್ ಇಂದು ಸ್ನೇಹಿತರೊಂದಿಗೆ ಶಿವಮೊಗ್ಗ ಹೊರವಲಯದ ಗಾಡಿಕೊಪ್ಪ ಸಮೀಪದ ಶಕ್ತಿಧಾಮ ಲೇಔಟ್ ಬಳಿ ಇರುವ ಖಾಸಗಿ ಒಡೆತನದ ಕರ್ಣ ಮೋದಿ ಈಜಲು ತೆರಳಿದ್ದಾನೆ. ಆದರೆ ರಾಕೇಶ್​ಗೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಯಾದಗಿರಿ: ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ. ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಎಸ್ ಹೊಸಹಳ್ಳಿ ಗ್ರಾಮ ಸಾಬಣ್ಣ (17) ಮೃತ ದುರ್ದೈವಿಗಳು. ಓರ್ವ ಯುವಕನಿಗೆ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮಧ್ಯಾಹ್ನ ಯಾದಗಿರಿಯಿಂದ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:25 pm, Wed, 28 September 22

ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!