ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಶಿವಮೊಗ್ಗದ ಯುವಕ ಸಾವು

ಸೆಲ್ಫಿ ಕ್ರೇಜ್​ಗೆ ಯುವಕನೊಬ್ಬ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ​ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ದುರ್ಘಟನೆ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಶಿವಮೊಗ್ಗದ ಯುವಕ ಸಾವು
ಕಲ್ಯಾಣಿಗೆ ಬಿದ್ದು ಶಿವಮೊಗ್ಗದ ಯುವಕ ಸಾವು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 25, 2024 | 10:04 PM

ಶಿವಮೊಗ್ಗ, ಆ.25:  ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ​ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ದುರ್ಘಟನೆ ನಡೆದಿದೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ; ಸವಾರ ಸಾವು

ಗದಗ: ಲಕ್ಕುಂಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಹಾಗೂ​ ಸ್ಕೂಟಿ ನಡುವೆ ಡಿಕ್ಕಿಯಾಗಿ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಪ್ರಜ್ವಲ್​ ಮೃತ ಬಾಲಕ. ಅಪಘಾತದ ಬಳಿಕ ಸರ್ಕಾರಿ ಬಸ್ ಚಾಲಕ ಪರಾರಿಯಾಗಿದ್ದು, ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಕೊಲ್ಲಾಪುರದಿಂದ ಗಂಗಾವತಿಗೆ ಹೊರಟಿದ್ದ ಬಸ್, ಟ್ರ್ಯಾಕ್ಟರ್ ಓವರ್‌ ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ:ಮಂಡ್ಯ: ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ, ಇತ್ತ ಪತಿ ಕೂಡ ಕೆರೆಗೆ ಹಾರಿ ಸಾವು; ಆಗಿದ್ದೇನು?

ಉತ್ತರ ಕನ್ನಡ: ಕಾರವಾರದ ಬೈತ್‌ಕೋಲಾದ ಬಳಿಯ ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೀನುಗಾರಿಕೆ ನಡೆಸಲು ಹೊರರಾಜ್ಯದಿಂದ ಆಗಮಿಸಿದ್ದ ಕಾರ್ಮಿಕನ ಶವ ಇರಬಹುದೆಂದು ಶಂಕಿಸಲಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವದ ಗುರುತು ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ