AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವಂತಹ ಘಟನೆ ಶಿಕಾರಿಪುರ ತಾಲ್ಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್​ನಲ್ಲಿ ನಡೆದಿದೆ. ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 18, 2023 | 3:13 PM

Share

ಶಿವಮೊಗ್ಗ: ಈಜಲು ತೆರಳಿದ್ದ ಯುವಕ (young boy) ನೀರು ಪಾಲಾಗಿರುವಂತಹ ಘಟನೆ ಶಿಕಾರಿಪುರ ತಾಲ್ಲೂಕಿನ ಗಾಂಧಿನಗರ ಗ್ರಾಮದ ಮನ್ಸೂರ್ ಸಾಬ್​ನಲ್ಲಿ ನಡೆದಿದೆ. ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಶಾಸಕ ಬಿ.ವೈ ವಿಜಯೇಂದ್ರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರಿಂದ ಹಣ ವಸೂಲಿ: ನಕಲಿ ಪೊಲೀಸ್​ ಬಂಧನ

ಕೊಪ್ಪಳ: ಅರಣ್ಯ ಇಲಾಖೆ ಪೊಲೀಸ್​ ಅಂತಾ ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಗಂಗಾಪುರಪೇಟೆಯ ನಿವಾಸಿ ಸಂಜಯ್ ಕೊಪ್ಪದ ಬಂಧಿತ ಆರೋಪಿ. ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಮೇ 25ರಂದು ಕೊಪ್ಪಳ ಬಳಿ ಬೈಕ್ ಸವಾರ ಬೊಚನಹಳ್ಳಿಯ ಹನುಮೇಶ್​​​ ಎಂಬುವವರ ಬಳಿ ಹಣ ವಸೂಲಿ ಮಾಡಿದ್ದರು. ಗಂಧದ ಕಟ್ಟಿಗೆ ಕಳವುವಾಗಿದೆ, ನಿಮ್ಮ ಮೇಲೆ ಅನುಮಾನವಿದೆ ಎಂದಿದ್ದ.

ಇದನ್ನೂ ಓದಿ: Belagavi News: ಪತ್ನಿ ಜತೆ ಅನೈತಿಕ ಸಂಬಂಧ ಆರೋಪ, ಯುವಕನ ಹತ್ಯೆಗೈದ ಪತಿ

ಹನುಮೇಶ್​ ಬಳಿ 49,000 ನಗದು, 2 ಚಿನ್ನದ ಉಂಗುರ ದೋಚಿದ್ದ. ಅನುಮಾನ ಬಂದು ಗ್ರಾಮೀಣ ಠಾಣೆಗೆ ಹನುಮೇಶ್ ದೂರು ನೀಡಿದ್ದಾರೆ. ದೂರು ಆಧರಿಸಿ ಆರೋಪಿಯನ್ನು ಅರೆಸ್ಟ್​ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Shivamogga News: ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್, ತೀರ್ಥಹಳ್ಳಿ ಎಬಿವಿಪಿ ಅಧ್ಯಕ್ಷ ಅರೆಸ್ಟ್

ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಮಂಡ್ಯ: ಗೂಡ್ಸ್​ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ವೃತ್ತದ ಬಳಿ ನಡೆದಿದೆ. ಮರಿಲಿಂಗಯ್ಯ(65) ಮೃತ ವ್ಯಕ್ತಿ. ಬಸ್​ನಿಂದ ಇಳಿದು ರಸ್ತೆ ದಾಟುವಾಗ ಗೂಡ್ಸ್​ ವಾಹನ ಡಿಕ್ಕಿಯಾಗಿತ್ತು. ಈ ವೇಳೆ ಮರಿಲಿಂಗಯ್ಯ ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಆತನನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಹಲಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More