AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಇಲಾಖೆ ಜಂಟಿ ನಿರ್ದೇಶಕ ನಿವಾಸದಲ್ಲಿ ಭಾರಿ ಪ್ರಮಾಣದ ಚಿನ್ನದ ಗಟ್ಟಿ ಪತ್ತೆ; ರುದ್ರೇಶಪ್ಪ ಎಸಿಬಿ ವಶಕ್ಕೆ

ಶಿವಮೊಗ್ಗದ ಚಾಲುಕ್ಯನಗರ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಗಟ್ಟಿ ಬಂಗಾರ ಪತ್ತೆ ಆಗಿದೆ. ಗಟ್ಟಿ ಬಂಗಾರ ಸಂಗ್ರಹಿಸಿಡುವುದು ಕಾನೂನು ಬಾಹಿರ. ಈ ಕಾರಣದಿಂದ ಎಸಿಬಿ ಎಸ್​ಪಿ ಜಯಪ್ರಕಾಶ್ ನೇತೃತ್ವದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕ ನಿವಾಸದಲ್ಲಿ ಭಾರಿ ಪ್ರಮಾಣದ ಚಿನ್ನದ ಗಟ್ಟಿ ಪತ್ತೆ; ರುದ್ರೇಶಪ್ಪ ಎಸಿಬಿ ವಶಕ್ಕೆ
ಭಾರಿ ಪ್ರಮಾಣದ ಚಿನ್ನದ ಗಟ್ಟಿ ಪತ್ತೆ
TV9 Web
| Edited By: |

Updated on:Nov 24, 2021 | 9:47 PM

Share

ಶಿವಮೊಗ್ಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ​​ ಅವರನ್ನು ಎಸಿಬಿ ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗದ ಚಾಲುಕ್ಯನಗರ ನಿವಾಸದಲ್ಲಿ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪರನ್ನು ವಶಕ್ಕೆ ಪಡೆಯಲಾಗಿದೆ. ರುದ್ರೇಶಪ್ಪ​ಗೆ ಸೇರಿದ ಅಪಾರ ಪ್ರಮಾಣದ ಆಸ್ತಿ ಪತ್ತೆ ಹಿನ್ನೆಲೆ ಹಾಗೂ ನಾಳೆ ಬೆಳಗ್ಗೆ ಒಂದು ಲಾಕರ್ ಓಪನ್ ಮಾಡಬೇಕಿದೆ. ಅಲ್ಲದೆ, ಶಿವಮೊಗ್ಗದ ಚಾಲುಕ್ಯನಗರ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಗಟ್ಟಿ ಬಂಗಾರ ಪತ್ತೆ ಆಗಿದೆ. ಗಟ್ಟಿ ಬಂಗಾರ ಸಂಗ್ರಹಿಸಿಡುವುದು ಕಾನೂನು ಬಾಹಿರ. ಈ ಕಾರಣದಿಂದ ಎಸಿಬಿ ಎಸ್​ಪಿ ಜಯಪ್ರಕಾಶ್ ನೇತೃತ್ವದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದಲ್ಲಿ ನಡೆದ ಎಸಿಬಿ ದಾಳಿಯ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ರುದ್ರೇಶಪ್ಪ ಮನೆಯಲ್ಲಿ 15 ಲಕ್ಷ 94 ಸಾವಿರ ನಗದು ಪತ್ತೆ ಆಗಿದೆ. ಶಿವಮೊಗ್ಗ ನಗರದಲ್ಲಿ 2 ವಾಸದ ಮನೆ, ವಿವಿಧೆಡೆ 4 ನಿವೇಶನ ಇರುವುದು ತಿಳಿದುಬಂದಿದೆ. 9 ಕೆಜಿ 400 ಗ್ರಾಂ ಚಿನ್ನದ ಬಿಸ್ಕೆಟ್, ಆಭರಣಗಳು ಪತ್ತೆಯಾಗಿದೆ. 3 ಕೆಜಿ ಬೆಳ್ಳಿ ವಸ್ತುಗಳು, 2 ವಿವಿಧ ಕಂಪನಿಗಳ ಕಾರುಗಳು, 3 ದ್ವಿಚಕ್ರ ವಾಹನ, 8 ಎಕರೆ ಕೃಷಿ ಜಮೀನು, 20 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆ ಆಗಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ಇಲ್ಲಿನ ಹಿರಿಯ ಮೋಟಾರು ನಿರೀಕ್ಷಕ ಮರಲಿಂಗಣ್ಣನವರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಸದಾಶಿವ ಮನೆಯಲ್ಲಿ 8 ಲಕ್ಷ 22 ಸಾವಿರ ರೂಪಾಯಿ ಪತ್ತೆ ಆಗಿದೆ. 5 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆ ಆಗಿದೆ. 1 ಕೆಜಿ 135 ಗ್ರಾಂ ಚಿನ್ನಾಭರಣ, ಬೆಳಗಾವಿಯಲ್ಲಿ 1 ಮನೆ, 22 ಎಕರೆ ಜಮೀನು ಹೊಂದಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

ಬೈಲಹೊಂಗಲ ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಾಸ್ತಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಅಧಿಕಾರಿಗಳ ದಾಳಿ ವೇಳೆ ಪತ್ತೆಯಾದ ಆಸ್ತಿ ವಿವರ ಹೀಗಿದೆ. 1 ಲಕ್ಷ 10 ಸಾವಿರ ನಗದು, 263 ಗ್ರಾಂ ಚಿನ್ನಾಭರಣ, 945 ಬೆಳ್ಳಿ ವಸ್ತುಗಳು, ಬೈಲಹೊಂಗಲದಲ್ಲಿ 2 ಮನೆಗಳು, 4 ನಿವೇಶನಗಳು, 4 ಕಾರು, 6 ಬೈಕ್‌ಗಳು ಪತ್ತೆ ಆಗಿದೆ. 5 ಲಕ್ಷ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತು, 1 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಷೇರು ಪತ್ತೆ ಮಾಡಲಾಗಿದೆ.

ಬೆಳಗಾವಿ ಹೆಸ್ಕಾಂ ವಿಭಾಗದ ಗ್ರೂಪ್ ಸಿ ನೌಕರ ನಾತಾಜಿ ಪೀರಾಜಿ ಪಾಟೀಲ್ ಮನೆ ಮೇಲೆ ಎಸಿಬಿ ದಾಳಿ ವೇಳೆ ಮಾಡಲಾಗಿದೆ. ಈ ವೇಳೆ, 20 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, 38 ಸಾವಿರ ನಗದು, 239 ಗ್ರಾಂ ಚಿನ್ನಾಭರಣ, 1 ಕೆಜಿ 803 ಗ್ರಾಂ ಬೆಳ್ಳಿ, ಬೆಳಗಾವಿಯಲ್ಲಿ 1 ಮನೆ, 2 ನಿವೇಶನ, 1 ಕಾರು, 2 ಬೈಕ್ ಹೊಂದಿರುವ ಬಗ್ಗೆ ತಿಳಿದುಬಂದಿದೆ.

ನಂದಿನಿ ಹಾಲು ಉತ್ಪನ್ನಗಳು ಪ್ರಧಾನ ವ್ಯವಸ್ಥಾಪಕ ಬಿ.ಕೃಷ್ಣಾರೆಡ್ಡಿ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ಕೇಸ್ ಸಂಬಂಧಿಸಿ ಎಸಿಬಿ ಅಧಿಕಾರಿಗಳ ದಾಳಿಯ ವೇಳೆ ಪತ್ತೆಯಾದ ಆಸ್ತಿ ವಿವರ ಲಭ್ಯವಾಗಿದೆ. 3 ಲಕ್ಷ ನಗದು, 383 ಗ್ರಾಂ ಚಿನ್ನಾಭರಣ, 3395 ಗ್ರಾಂ ಬೆಳ್ಳಿ ವಸ್ತು, ಹೊಸಕೋಟೆ ತಾಲೂಕಿನಲ್ಲಿ ಒಂದು ಪೆಟ್ರೋಲ್ ಬಂಕ್, ವಿವಿಧ ನಗರಗಳಲ್ಲಿ 3 ವಾಸದ ಮನೆ, ವಿವಿಧೆಡೆ 9 ನಿವೇಶನ, ಚಿಂತಾಮಣಿ ತಾಲೂಕಿನಲ್ಲಿ 5 ಎಕರೆ 30 ಗುಂಟೆ ಜಮೀನು ಪತ್ತೆ ಆಗಿದೆ.

ಬಳ್ಳಾರಿ ರಿಟೈರ್ಡ್ ಸಬ್‌ ರಿಜಿಸ್ಟ್ರಾರ್ ಶಿವಾನಂದ್ ಎಸಿಬಿ ದಾಳಿ ವೇಳೆ ಸಿಕ್ಕಿರುವ ಆಸ್ತಿ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಮಂಡ್ಯ ಸಿಟಿಯಲ್ಲಿ ಶಿವಾನಂದ್‌ಗೆ ಸೇರಿದ 1 ವಾಸದ ಮನೆ, ಬೆಂಗಳೂರಿನಲ್ಲಿ ಒಂದು ನಿವೇಶನ, ಬಳ್ಳಾರಿ ಜಿಲ್ಲೆ ಮೋಕಾ ಗ್ರಾಮದಲ್ಲಿ 7 ಎಕರೆ ಕೃಷಿ ಜಮೀನು, 8 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತು ಹೊಂದಿರುವ ಬಗ್ಗೆ ಮಾಹಿತಿ ಲಭಿಸಿದೆ.

ಇದನ್ನೂ ಓದಿ: ಕರ್ನಾಟಕದ 68 ಕಡೆ ಎಸಿಬಿ ದಾಳಿ ಬಹುತೇಕ ಅಂತ್ಯ; ಅಪಾರ ಪ್ರಮಾಣದ ಆಸ್ತಿ, ಚಿನ್ನಾಭರಣ, ಹಣ ಪತ್ತೆ- ವಿವರ ಇಲ್ಲಿದೆ

ಇದನ್ನೂ ಓದಿ: ಎಸಿಬಿ ದಾಳಿ ವೇಳೆ ಸೀರೆಯಲ್ಲಿ ಬಚ್ಚಿಟ್ಟ ಹಣ ಪತ್ತೆ; ನೋಟು ಎಣಿಸಲು ಮಷೀನ್ ತಂದ ಅಧಿಕಾರಿಗಳು

Published On - 9:40 pm, Wed, 24 November 21

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ