AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಇಲಾಖೆ ಜಂಟಿ ನಿರ್ದೇಶಕ ನಿವಾಸದಲ್ಲಿ ಭಾರಿ ಪ್ರಮಾಣದ ಚಿನ್ನದ ಗಟ್ಟಿ ಪತ್ತೆ; ರುದ್ರೇಶಪ್ಪ ಎಸಿಬಿ ವಶಕ್ಕೆ

ಶಿವಮೊಗ್ಗದ ಚಾಲುಕ್ಯನಗರ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಗಟ್ಟಿ ಬಂಗಾರ ಪತ್ತೆ ಆಗಿದೆ. ಗಟ್ಟಿ ಬಂಗಾರ ಸಂಗ್ರಹಿಸಿಡುವುದು ಕಾನೂನು ಬಾಹಿರ. ಈ ಕಾರಣದಿಂದ ಎಸಿಬಿ ಎಸ್​ಪಿ ಜಯಪ್ರಕಾಶ್ ನೇತೃತ್ವದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕ ನಿವಾಸದಲ್ಲಿ ಭಾರಿ ಪ್ರಮಾಣದ ಚಿನ್ನದ ಗಟ್ಟಿ ಪತ್ತೆ; ರುದ್ರೇಶಪ್ಪ ಎಸಿಬಿ ವಶಕ್ಕೆ
ಭಾರಿ ಪ್ರಮಾಣದ ಚಿನ್ನದ ಗಟ್ಟಿ ಪತ್ತೆ
TV9 Web
| Edited By: |

Updated on:Nov 24, 2021 | 9:47 PM

Share

ಶಿವಮೊಗ್ಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ​​ ಅವರನ್ನು ಎಸಿಬಿ ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗದ ಚಾಲುಕ್ಯನಗರ ನಿವಾಸದಲ್ಲಿ ಗದಗ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪರನ್ನು ವಶಕ್ಕೆ ಪಡೆಯಲಾಗಿದೆ. ರುದ್ರೇಶಪ್ಪ​ಗೆ ಸೇರಿದ ಅಪಾರ ಪ್ರಮಾಣದ ಆಸ್ತಿ ಪತ್ತೆ ಹಿನ್ನೆಲೆ ಹಾಗೂ ನಾಳೆ ಬೆಳಗ್ಗೆ ಒಂದು ಲಾಕರ್ ಓಪನ್ ಮಾಡಬೇಕಿದೆ. ಅಲ್ಲದೆ, ಶಿವಮೊಗ್ಗದ ಚಾಲುಕ್ಯನಗರ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಗಟ್ಟಿ ಬಂಗಾರ ಪತ್ತೆ ಆಗಿದೆ. ಗಟ್ಟಿ ಬಂಗಾರ ಸಂಗ್ರಹಿಸಿಡುವುದು ಕಾನೂನು ಬಾಹಿರ. ಈ ಕಾರಣದಿಂದ ಎಸಿಬಿ ಎಸ್​ಪಿ ಜಯಪ್ರಕಾಶ್ ನೇತೃತ್ವದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದಲ್ಲಿ ನಡೆದ ಎಸಿಬಿ ದಾಳಿಯ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ರುದ್ರೇಶಪ್ಪ ಮನೆಯಲ್ಲಿ 15 ಲಕ್ಷ 94 ಸಾವಿರ ನಗದು ಪತ್ತೆ ಆಗಿದೆ. ಶಿವಮೊಗ್ಗ ನಗರದಲ್ಲಿ 2 ವಾಸದ ಮನೆ, ವಿವಿಧೆಡೆ 4 ನಿವೇಶನ ಇರುವುದು ತಿಳಿದುಬಂದಿದೆ. 9 ಕೆಜಿ 400 ಗ್ರಾಂ ಚಿನ್ನದ ಬಿಸ್ಕೆಟ್, ಆಭರಣಗಳು ಪತ್ತೆಯಾಗಿದೆ. 3 ಕೆಜಿ ಬೆಳ್ಳಿ ವಸ್ತುಗಳು, 2 ವಿವಿಧ ಕಂಪನಿಗಳ ಕಾರುಗಳು, 3 ದ್ವಿಚಕ್ರ ವಾಹನ, 8 ಎಕರೆ ಕೃಷಿ ಜಮೀನು, 20 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆ ಆಗಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ಇಲ್ಲಿನ ಹಿರಿಯ ಮೋಟಾರು ನಿರೀಕ್ಷಕ ಮರಲಿಂಗಣ್ಣನವರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಸದಾಶಿವ ಮನೆಯಲ್ಲಿ 8 ಲಕ್ಷ 22 ಸಾವಿರ ರೂಪಾಯಿ ಪತ್ತೆ ಆಗಿದೆ. 5 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆ ಆಗಿದೆ. 1 ಕೆಜಿ 135 ಗ್ರಾಂ ಚಿನ್ನಾಭರಣ, ಬೆಳಗಾವಿಯಲ್ಲಿ 1 ಮನೆ, 22 ಎಕರೆ ಜಮೀನು ಹೊಂದಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

ಬೈಲಹೊಂಗಲ ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಾಸ್ತಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಅಧಿಕಾರಿಗಳ ದಾಳಿ ವೇಳೆ ಪತ್ತೆಯಾದ ಆಸ್ತಿ ವಿವರ ಹೀಗಿದೆ. 1 ಲಕ್ಷ 10 ಸಾವಿರ ನಗದು, 263 ಗ್ರಾಂ ಚಿನ್ನಾಭರಣ, 945 ಬೆಳ್ಳಿ ವಸ್ತುಗಳು, ಬೈಲಹೊಂಗಲದಲ್ಲಿ 2 ಮನೆಗಳು, 4 ನಿವೇಶನಗಳು, 4 ಕಾರು, 6 ಬೈಕ್‌ಗಳು ಪತ್ತೆ ಆಗಿದೆ. 5 ಲಕ್ಷ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತು, 1 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಷೇರು ಪತ್ತೆ ಮಾಡಲಾಗಿದೆ.

ಬೆಳಗಾವಿ ಹೆಸ್ಕಾಂ ವಿಭಾಗದ ಗ್ರೂಪ್ ಸಿ ನೌಕರ ನಾತಾಜಿ ಪೀರಾಜಿ ಪಾಟೀಲ್ ಮನೆ ಮೇಲೆ ಎಸಿಬಿ ದಾಳಿ ವೇಳೆ ಮಾಡಲಾಗಿದೆ. ಈ ವೇಳೆ, 20 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, 38 ಸಾವಿರ ನಗದು, 239 ಗ್ರಾಂ ಚಿನ್ನಾಭರಣ, 1 ಕೆಜಿ 803 ಗ್ರಾಂ ಬೆಳ್ಳಿ, ಬೆಳಗಾವಿಯಲ್ಲಿ 1 ಮನೆ, 2 ನಿವೇಶನ, 1 ಕಾರು, 2 ಬೈಕ್ ಹೊಂದಿರುವ ಬಗ್ಗೆ ತಿಳಿದುಬಂದಿದೆ.

ನಂದಿನಿ ಹಾಲು ಉತ್ಪನ್ನಗಳು ಪ್ರಧಾನ ವ್ಯವಸ್ಥಾಪಕ ಬಿ.ಕೃಷ್ಣಾರೆಡ್ಡಿ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳ ದಾಳಿ ಕೇಸ್ ಸಂಬಂಧಿಸಿ ಎಸಿಬಿ ಅಧಿಕಾರಿಗಳ ದಾಳಿಯ ವೇಳೆ ಪತ್ತೆಯಾದ ಆಸ್ತಿ ವಿವರ ಲಭ್ಯವಾಗಿದೆ. 3 ಲಕ್ಷ ನಗದು, 383 ಗ್ರಾಂ ಚಿನ್ನಾಭರಣ, 3395 ಗ್ರಾಂ ಬೆಳ್ಳಿ ವಸ್ತು, ಹೊಸಕೋಟೆ ತಾಲೂಕಿನಲ್ಲಿ ಒಂದು ಪೆಟ್ರೋಲ್ ಬಂಕ್, ವಿವಿಧ ನಗರಗಳಲ್ಲಿ 3 ವಾಸದ ಮನೆ, ವಿವಿಧೆಡೆ 9 ನಿವೇಶನ, ಚಿಂತಾಮಣಿ ತಾಲೂಕಿನಲ್ಲಿ 5 ಎಕರೆ 30 ಗುಂಟೆ ಜಮೀನು ಪತ್ತೆ ಆಗಿದೆ.

ಬಳ್ಳಾರಿ ರಿಟೈರ್ಡ್ ಸಬ್‌ ರಿಜಿಸ್ಟ್ರಾರ್ ಶಿವಾನಂದ್ ಎಸಿಬಿ ದಾಳಿ ವೇಳೆ ಸಿಕ್ಕಿರುವ ಆಸ್ತಿ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಮಂಡ್ಯ ಸಿಟಿಯಲ್ಲಿ ಶಿವಾನಂದ್‌ಗೆ ಸೇರಿದ 1 ವಾಸದ ಮನೆ, ಬೆಂಗಳೂರಿನಲ್ಲಿ ಒಂದು ನಿವೇಶನ, ಬಳ್ಳಾರಿ ಜಿಲ್ಲೆ ಮೋಕಾ ಗ್ರಾಮದಲ್ಲಿ 7 ಎಕರೆ ಕೃಷಿ ಜಮೀನು, 8 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತು ಹೊಂದಿರುವ ಬಗ್ಗೆ ಮಾಹಿತಿ ಲಭಿಸಿದೆ.

ಇದನ್ನೂ ಓದಿ: ಕರ್ನಾಟಕದ 68 ಕಡೆ ಎಸಿಬಿ ದಾಳಿ ಬಹುತೇಕ ಅಂತ್ಯ; ಅಪಾರ ಪ್ರಮಾಣದ ಆಸ್ತಿ, ಚಿನ್ನಾಭರಣ, ಹಣ ಪತ್ತೆ- ವಿವರ ಇಲ್ಲಿದೆ

ಇದನ್ನೂ ಓದಿ: ಎಸಿಬಿ ದಾಳಿ ವೇಳೆ ಸೀರೆಯಲ್ಲಿ ಬಚ್ಚಿಟ್ಟ ಹಣ ಪತ್ತೆ; ನೋಟು ಎಣಿಸಲು ಮಷೀನ್ ತಂದ ಅಧಿಕಾರಿಗಳು

Published On - 9:40 pm, Wed, 24 November 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ