AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agumbe Ghat: ತೀರ್ಥಹಳ್ಳಿಯ ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

Crime News: ಮಲೆನಾಡು ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಕಡಿದಾದ ತಿರುವುಗಳಿರುವ ಆಗುಂಬೆ ಘಾಟಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಕಾರ್ಕಳದ ಮಿಯ್ಯಾರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Agumbe Ghat: ತೀರ್ಥಹಳ್ಳಿಯ ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ
ಆಗುಂಬೆ ಘಾಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 29, 2021 | 7:15 PM

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಆಗುಂಬೆ ಘಾಟ್​ನ (Agumbe Ghat) 9ನೇ ತಿರುವಿನಲ್ಲಿ ವ್ಯಾನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಈ ವ್ಯಾನ್​ನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಐವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸಾವನ್ನಪ್ಪಿರುವ ನಾಲ್ವರು ಕಾರ್ಕಳದವರು ಎಂದು ತಿಳಿದುಬಂದಿದೆ.

ಮಲೆನಾಡು ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಕಡಿದಾದ ತಿರುವುಗಳಿರುವ ಆಗುಂಬೆ ಘಾಟಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಕಾರ್ಕಳದ ಮಿಯ್ಯಾರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗೂ ಹೆಬ್ರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಅಫಘಾತಕ್ಕೀಡಾದ ವಾಹನ ಚಿಕ್ಕಮಗಳೂರಿನ ಕೊಪ್ಪಕ್ಕೆ ಇಂಟರ್ ಲಾಕ್ ಬ್ರಿಕ್ಸ್ ಗಳನ್ನು ಸರಬರಾಜು ಮಾಡಲು ತೆರಳಿ ಮಂಗಳೂರಿನ ಕಡೆಗೆ ವಾಪಾಸಾಗುತ್ತಿತ್ತು ಎನ್ನಲಾಗಿದೆ. ತೀರ್ಥಹಳ್ಳಿಯಿಂದ ಆಗುಂಬೆ ಘಾಟ್ ಮಾರ್ಗದಲ್ಲಿ ಬರುವಾಗ 9ನೇ ತಿರುವಿನಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಪೊಲೀಸರು ಮತ್ತು ಸ್ಥಳೀಯರು ಪ್ರಪಾತದಲ್ಲಿ ಬಿದ್ದಿದ್ದ ವಾಹನದಿಂದ ಮೃತದೇಹಗಳನ್ನು ಹೊರಗೆ ಎಳೆದಿದ್ದಾರೆ. ಉಳಿದವರ ಸ್ಥಿತಿಯೂ ಗಂಭೀರವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!

ಆಗುಂಬೆ: ಆಕಸ್ಮಿಕ ಬೆಂಕಿಯಿಂದ ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿತು ಭಾರೀ ಅವಗಢ

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ