AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agumbe Ghat: ತೀರ್ಥಹಳ್ಳಿಯ ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

Crime News: ಮಲೆನಾಡು ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಕಡಿದಾದ ತಿರುವುಗಳಿರುವ ಆಗುಂಬೆ ಘಾಟಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಕಾರ್ಕಳದ ಮಿಯ್ಯಾರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Agumbe Ghat: ತೀರ್ಥಹಳ್ಳಿಯ ಆಗುಂಬೆ ಘಾಟ್​ನಲ್ಲಿ ಭೀಕರ ಅಪಘಾತ; 4 ಜನ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ
ಆಗುಂಬೆ ಘಾಟ್
TV9 Web
| Edited By: |

Updated on: Oct 29, 2021 | 7:15 PM

Share

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಆಗುಂಬೆ ಘಾಟ್​ನ (Agumbe Ghat) 9ನೇ ತಿರುವಿನಲ್ಲಿ ವ್ಯಾನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಈ ವ್ಯಾನ್​ನಲ್ಲಿ ಪ್ರಯಾಣಿಸುತ್ತಿದ್ದ 9 ಜನರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಐವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸಾವನ್ನಪ್ಪಿರುವ ನಾಲ್ವರು ಕಾರ್ಕಳದವರು ಎಂದು ತಿಳಿದುಬಂದಿದೆ.

ಮಲೆನಾಡು ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಕಡಿದಾದ ತಿರುವುಗಳಿರುವ ಆಗುಂಬೆ ಘಾಟಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಕಾರ್ಕಳದ ಮಿಯ್ಯಾರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗೂ ಹೆಬ್ರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಅಫಘಾತಕ್ಕೀಡಾದ ವಾಹನ ಚಿಕ್ಕಮಗಳೂರಿನ ಕೊಪ್ಪಕ್ಕೆ ಇಂಟರ್ ಲಾಕ್ ಬ್ರಿಕ್ಸ್ ಗಳನ್ನು ಸರಬರಾಜು ಮಾಡಲು ತೆರಳಿ ಮಂಗಳೂರಿನ ಕಡೆಗೆ ವಾಪಾಸಾಗುತ್ತಿತ್ತು ಎನ್ನಲಾಗಿದೆ. ತೀರ್ಥಹಳ್ಳಿಯಿಂದ ಆಗುಂಬೆ ಘಾಟ್ ಮಾರ್ಗದಲ್ಲಿ ಬರುವಾಗ 9ನೇ ತಿರುವಿನಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಪೊಲೀಸರು ಮತ್ತು ಸ್ಥಳೀಯರು ಪ್ರಪಾತದಲ್ಲಿ ಬಿದ್ದಿದ್ದ ವಾಹನದಿಂದ ಮೃತದೇಹಗಳನ್ನು ಹೊರಗೆ ಎಳೆದಿದ್ದಾರೆ. ಉಳಿದವರ ಸ್ಥಿತಿಯೂ ಗಂಭೀರವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!

ಆಗುಂಬೆ: ಆಕಸ್ಮಿಕ ಬೆಂಕಿಯಿಂದ ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿತು ಭಾರೀ ಅವಗಢ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ