AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಗಾಗಿ ಗಂಡನ ಮನೆಯವರಿಂದಲೇ ವಿಷ ಹಾಕಿದ ಆರೋಪ; ಮಹಿಳೆ ಸಾವು, ಐದು ತಿಂಗಳ ಮಗು ಸ್ಥಿತಿ ಚಿಂತಾಜನಕ

ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಗ್ರಾಮದಲ್ಲಿ ವರದಕ್ಷಿಣೆಗಾಗಿ ಗಂಡನ ಮನೆಯವರೇ ಮಹಿಳೆ ಹಾಗೂ ಆಕೆಯ 5 ತಿಂಗಳ ಮಗುವಿಗೆ ವಿಷ ಕುಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳೆ ಮೃತಪಟ್ಟಿದ್ದು 5 ತಿಂಗಳ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಆರೋಪಿ ಗಂಡ​ನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವರದಕ್ಷಿಣೆಗಾಗಿ ಗಂಡನ ಮನೆಯವರಿಂದಲೇ ವಿಷ ಹಾಕಿದ ಆರೋಪ; ಮಹಿಳೆ ಸಾವು, ಐದು ತಿಂಗಳ ಮಗು ಸ್ಥಿತಿ ಚಿಂತಾಜನಕ
ಕಸ್ತೂರಿ
Basavaraj Yaraganavi
| Edited By: |

Updated on: Feb 24, 2024 | 1:36 PM

Share

ಶಿವಮೊಗ್ಗ, ಫೆ.24: ವರದಕ್ಷಿಣೆಗಾಗಿ (Dowry) ಗಂಡನ ಮನೆಯವರು ಮಹಿಳೆ ಹಾಗೂ ಆಕೆಯ 5 ತಿಂಗಳ ಮಗುವಿಗೆ ವಿಷ (Poison) ಕುಡಿಸಿದ್ದಾರೆ ಎನ್ನಲಾಗಿರುವ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಸಿದ್ಲಿಪುರ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕಸ್ತೂರಿ(25) ಎಂಬ ಮಹಿಳೆ ಮೃತಪಟ್ಟಿದ್ದು ಐದು ತಿಂಗಳ ಮಗು ಸ್ಥಿತಿ ಚಿಂತಾಜನಕವಾಗಿದೆ. ಆರೋಪಿ ಮಂಜುನಾಥ್​ನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಗಂಡನ ಮನೆಯವರಿಂದ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು ಪತ್ನಿ ಹಾಗು ಮಗುವಿಗೆ ಗಂಡನ ಮನೆಯವರೇ ವಿಷ ಕುಡಿಸಿದ್ದಾರೆ ಎಂದು ಮೃತ ಕಸ್ತೂರಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಮಹಿಳೆ ಮೃತಪಟ್ಟಿದ್ದು 5 ತಿಂಗಳ ಮಗುವಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮೃತ ಕಸ್ತೂರಿ ಕುಟುಂಬಸ್ಥರು ಪತಿ -ಮಂಜುನಾಥ್, ಅತ್ತೆ -ಉಮಾ, ಮೈದುನ -ಮುತ್ತು ವಿರುದ್ದ ವಿಷ ಕುಡಿಸಿರುವ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಪೊಲೀಸರು ಆರೋಪಿ ಮಂಜುನಾಥ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಗಳೂರಲ್ಲಿ ವಿದ್ಯಾರ್ಥಿ ಮೇಲೆ ಹರಿದ ಸ್ಕೂಲ್ ಬಸ್

ಬಸ್ ಇಳಿದ ಕೂಡಲೇ, ಬಸ್‌ ಮುಂದೆಯೇ ರಸ್ತೆ ದಾಟೋದು ಎಷ್ಟು ಡೇಂಜರ್ ಅನ್ನೋದಕ್ಕೆ ಈ ಸಿಸಿಕ್ಯಾಮರಾದ ದೃಶ್ಯವೇ ಸಾಕ್ಷಿ. ಮಂಗಳೂರಿನ ಕುಳಾಯಿ ಎಂಬಲ್ಲಿ ಶಾಲಾ ಬಸ್ ಇಳಿದ ವಿದ್ಯಾರ್ಥಿ ಮನೆಗೆ ಹೋಗಲು ರಸ್ತೆ ದಾಟಿದ್ದಾನೆ. ಇದನ್ನ ಗಮನಿಸದ ಚಾಲಕ ವಿದ್ಯಾರ್ಥಿ ಮೇಲೆಯೇ ಬಸ್ ಹತ್ತಿಸಿದ್ದಾನೆ. ಅದೃಷ್ಟವಶಾತ್ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: Shri Yerrithatha Swamy: ದೇವರ ಮೂರ್ತಿ ಕೂರಿಸುವ ವಿಚಾರದಲ್ಲಿ ಗಲಾಟೆ, ಕೊಳಗಲ್ ಗ್ರಾಮದಲ್ಲಿ ಸೆಕ್ಷನ್ 144 ಜಾರಿ

ಮೈಸೂರಲ್ಲಿ ಸ್ಕೂಟರ್ ಪಾರ್ಕಿಂಗ್ ಮಾಡುವಾಗ ಹೃದಯಾಘಾತ

ಮೈಸೂರಿನ ವಿಜಯನಗರದಲ್ಲಿ ಸ್ಕೂಟರ್ ಪಾರ್ಕ್ ಮಾಡ್ತಿದ್ದಾಗಲೇ ಹೃದಯಾಘಾತವಾಗಿ ನಿವೃತ್ತ ASI ಮೃತಪಟ್ಟಿದ್ದಾರೆ. ಸ್ಕೂಟರ್‌ ನಿಲ್ಲಿಸಿ ಕೆಳಗಿಳಿಯುತ್ತಿದ್ದ 71 ವರ್ಷದ ಜಿ.ವಿ ರಾಜು ಅನ್ನೋರಿಗೆ ಹೃದಯಾಘಾತವಾಗಿದೆ.

ಉತ್ತರ ಕನ್ನಡದಲ್ಲಿ ಹೊಂಚು ಹಾಕಿ ನಾಯಿ ಹೊತ್ತೊಯ್ದ ಚಿರತೆ

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬೆಳ್ಳಕ್ಕಿ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮನೆ ಮುಂದಿದ್ದ ನಾಯಿಯನ್ನ ಚಿರತೆ ಹೊತ್ತೊಯ್ದಿದೆ. ಮೊದಲ ಬಾರಿ ನಾಯಿ ಬಚಾವ್ ಆಗಿದ್ದು, ಎರಡನೇ ಬಾರಿಗೆ ನಾಯಿ ಮಲಗಿದ್ದಾಗ ಚಿರತೆ ದಾಳಿ ನಡೆಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್