AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ

ಶಿವಮೊಗ್ಗ ಹೊರವಲಯದ ಸೋಮಿನಕೊಪ್ಪದ ಪ್ರಾರ್ಥನಾ ಮಂದಿರ ಎದುರು ಆಟೋಚಾಲಕನ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಬಿಜೆಪಿಗೆ ಮತ ಹಾಕಿದ್ದಕ್ಕೆ ಅನ್ಯಕೋಮಿಗಳಿಂದ ಆಟೋ ಚಾಲಕನ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:May 15, 2023 | 1:44 PM

Share

ಶಿವಮೊಗ್ಗ: ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲು ಮತ್ತು ನಂತರ ರಾಜ್ಯದಲ್ಲಿ ಅನೇಕ ಗಲಾಟೆಗಳು ನಡೆಯುತ್ತಿವೆ. ಅದರಂತೆ ಈಗ ಶಿವಮೊಗ್ಗ (Shivamogga) ಹೊರವಲಯದ ಸೋಮಿನಕೊಪ್ಪದ ಪ್ರಾರ್ಥನಾ ಮಂದಿರ ಎದುರು ಆಟೋಚಾಲಕನ (Auto Driver) ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹರೀಶ್ ರಾವ್ ಗೋರ್ಪಡೆ ಹಲ್ಲೆಗೊಳಗಾದ ಆಟೋ ಚಾಲಕ. ಆಟೋ ಚಾಲಕ “ಬಿಜೆಪಿಗೆ (BJP) ಮತ ಹಾಕಿದಕ್ಕೆ” ಅನ್ಯಕೋಮಿನ ಕಿಡಿಗೇಡಿಗಳು ಕೈಯಿಂದ ಗುದ್ದಿ, ಕಲ್ಲಿನಿಂದ ಆಟೋಗೆ ಹೊಡೆದಿದ್ದಾರೆ ಎಂದು ಎಸ್​​ಪಿ ಕಚೇರಿಗೆ ಬಂದು ಹರೀಶ್ ರಾವ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಘಟನೆ ವಿವರ ತಿಳಿದು ಹರೀಶ್ ರಾವ್​ ಅವರಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಧನಸಹಾಯ ಮಾಡಿದ್ದಾರೆ. ಇನ್ನು ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೆಎಸ್ ಈಶ್ವರಪ್ಪ ಎಸ್ಪಿಗೆ ಮನವಿ ಮಾಡಿದ್ದಾರೆ.

ಹೊಸಕೋಟೆಯಲ್ಲಿ ಬಿಜೆಪಿ ಮುಖಂಡನ ಕೊಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಈ ಭಾರಿ ಕೂಡ ಬಚ್ಚೇಗೌಡರ ಮಗ ಶರತ್ ಬಚ್ಚೇಗೌಡ  ಅವರು ಎಂಟಿಬಿ ನಾಗರಾಜ್  ಅವರ ವಿರುದ್ದ ಎರಡನೆ ಭಾರಿಗೆ ಗೆದ್ದು ಬೀಗಿದ್ದಾರೆ.  ಮೇ 13ರಂದು ರಿಸಲ್ಟ್‌ ಬರ್ತಿದ್ದಂತೆ ರಾತ್ರಿ ಇದೇ ವಿಚಾರವಾಗಿ ಹೊಸಕೋಟೆ ತಾಲೂಕಿನ ಡಿ ಶೆಟ್ಟಿಹಳ್ಳಿಯಲ್ಲಿ ಕೃಷ್ಣಪ್ಪ ಹಾಗೂ ಗಣೇಶಪ್ಪ ಅನ್ನೋ ಸಹೋದರರ ನಡುವೆ ಗಲಾಟೆಯಾಗಿತ್ತು. ನೀನು ಪಕ್ಷದಲ್ಲಿ ಇದ್ದುಕೊಂಡೇ ಬಿಜೆಪಿಗೆ ಮೋಸ ಮಾಡಿದ್ದೀಯಾ ಅಂತ ಎಂಟಿಬಿ ಬೆಂಬಲಿಗ ಕೃಷ್ಣಪ್ಪ ತನ್ನ ಸಹೋದರನನ್ನು ಪ್ರಶ್ನಿಸಿದ್ದ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿದ್ದು, ಗಣೇಶಪ್ಪನ ಮಗ ಆದಿತ್ಯಾ ಮತ್ತು ಕೆಲವರು ಕೃಷ್ಣಪ್ಪನ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು. ಕುಡುಗೋಲಿನಿಂದ ಅಟ್ಯಾಕ್‌ ಮಾಡಿದ್ದರು. ಇದರಿಂದ ಗಾಯಗೊಂಡ ಕೃಷ್ಣಪ್ಪನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಬದುಕುಳಿಯಲಿಲ್ಲ.

ಇನ್ನು ಹೋಸಕೋಟೆ ತಾಲೂಕಿನ ಕೊಡಹಳ್ಳಿ ಕುರುಬರಹಳ್ಳಿ, ಶಿವನಾಪುರ, ತಮ್ಮರಸನಹಳ್ಳಿ, ನೆರಗನಹಳ್ಳಿ ಸೇರಿದಂತೆ ಹಲವಡೆ ಶರತ್ ಬಚ್ಚೇಗೌಡ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಾ ಎಂಟಿಬಿ ಬೆಂಬಲಿಗರ ಮನೆಗಳ ಮುಂದೆ ಪಟಾಕಿ ಸಿಡಿಸಿದ್ದರು. ಈ ವೇಳೆ ಮನೆ ಕಾಂಪೌಂಡ್‌ ಒಳಗೂ ಕೂಡ ಪಟಾಕಿ ಸಿಡಿಸಿದ್ದರಂತೆ. ಹೀಗಾಗಿ ಮನೆ ಮುಂದೆ ಪಟಾಕಿ ಸಿಡಿಸಬೇಡಿ ಅಂತ ಹೇಳಿದಕ್ಕೆ, ಗಲಾಟೆಯಾಗಿದೆ. ಇದರಿಂದ ಕೆರಳಿದ ಎಂಟಿಬಿ ಬೆಂಬಲಿಗರು ನಂದಗುಡಿ ಪೊಲೀಸ್ ಠಾಣೆ ಮುಂದೆ ಕೃಷ್ಣಪ್ಪನ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Mon, 15 May 23

ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್