AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ, 13 ಎಫ್​ಐಆರ್ ದಾಖಲು- ಎಸ್​ಪಿ ಮಾಹಿತಿ

ಇದುವರೆಗೆ 13 ಎಫ್​ಐಆರ್​ ದಾಖಲಾಗಿವೆ. ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ, 13 ಎಫ್​ಐಆರ್ ದಾಖಲು- ಎಸ್​ಪಿ ಮಾಹಿತಿ
ಬಜರಂಗದಳ ಕಾರ್ಯಕರ್ತ ಹರ್ಷ
TV9 Web
| Edited By: |

Updated on:Feb 22, 2022 | 6:41 PM

Share

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು. ಇದೀಗ ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್​ಐಆರ್​ ದಾಖಲಾಗಿವೆ. ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಎ1, ಎ2 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಯಿತು. ನಿನ್ನೆ ಗಲಾಟೆ ವೇಳೆ ಗಾಯಗೊಂಡಿದ್ದಾಗಿ 8 ಜನರಿಂದ ದೂರು ನೀಡಲಾಗಿದೆ. 18 ವಾಹನಗಳ ಮೇಲೆ ದಾಳಿ ನಡೆಸಿ ಬೆಂಕಿಯನ್ನೂ ಹಚ್ಚಿದ್ದಾರೆ. ಶಿವಮೊಗ್ಗದಲ್ಲಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹತ್ಯೆಯಾಗಿರುವ ಹರ್ಷನ ವಿರುದ್ಧ 2 ಪ್ರಕರಣ ದಾಖಲಾಗಿದ್ದವು. ಎ1, ಎ3, ಎ4, ಎ5 ಹರ್ಷನ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಎ2, ಎ6 ಹಂತಕರಿಗೆ ಸಹಕಾರ ನೀಡಿದ್ದಾರೆ. ಒಟ್ಟು 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೆವು. 6 ಜನರ ಪಾತ್ರ ಕಂಡುಬಾರದ ಹಿನ್ನೆಲೆ ಬಿಟ್ಟು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.

ಎ1 ಮೊಹಮ್ಮದ್ ಕಾಸಿಫ್, ಎ2 ಸೈಯದ್ ನದೀಮ್, ಎ3 ಆಸಿಫ್ ಉಲ್ಲಾ ಖಾನ್, ಎ4 ರಿಹಾನ್ ಷರೀಫ್​, ಎ5 ನಿಹಾನ್, ಎ6 ಅಬ್ದುಲ್ ಅಫ್ನಾನ್​ ಬಂಧಿಸಲಾಗಿದೆ. ಎಲ್ಲಾ 6 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಗಿದೆ. ಬಂಧಿತ 6 ಆರೋಪಿಗಳ ಪೈಕಿ ನಾಲ್ವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಗಲಭೆಯಲ್ಲಿ ಭಾಗಿಯಾಗಿದ್ದ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಶಿವಮೊಗ್ಗದಲ್ಲಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹರ್ಷ ಹತ್ಯೆ ಪ್ರಕರಣದಲ್ಲಿ ಕಾಸಿಫ್, ಸೈಯದ್ ನದೀಮ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಬಂಧಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗದಲ್ಲಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಹೇಳಿದ್ದಾರೆ. ಈ ಮಧ್ಯೆ, ಶಿವಮೊಗ್ಗ ಬಿಜೆಪಿ ಕಚೇರಿಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್‌ ಮುಂದುವರಿಕೆ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಹಿನ್ನೆಲೆ, ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್‌ ಮುಂದುವರಿಕೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಶುಕ್ರವಾರ ಬೆಳಗ್ಗೆವರೆಗೂ 144 ಸೆಕ್ಷನ್‌ ಇರಲಿದೆ. ಶಿವಮೊಗ್ಗದಲ್ಲಿ ಶುಕ್ರವಾರದವರೆಗೂ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. 144 ಸೆಕ್ಷನ್‌ ವಿಸ್ತರಣೆ ಬಗ್ಗೆ ಮುಂದೆ ತೀರ್ಮಾನಿಸಲಾಗುವುದು. ಪರಿಸ್ಥಿತಿ ನೋಡಿಕೊಂಡು ಮುಂದೆ ತೀರ್ಮಾನ ಕೈಗೊಳ್ಳುತ್ತೇವೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6-9 ಗಂಟೆವರೆಗೆ ಅವಕಾಶ ನೀಡುತ್ತೇವೆ. ಕೆಲವೆಡೆ 144 ಸೆಕ್ಷನ್ ಉಲ್ಲಂಘಿಸ್ತಿದ್ದಾರೆ, ಕ್ರಮ ಕೈಗೊಳ್ತೇವೆ ಎಂದು ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Shivamogga Violence Live: ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್​ ಮುಂದುವರಿಕೆ: ಶಾಲೆ ಕಾಲೇಜಿಗೆ ರಜೆ

ಇದನ್ನೂ ಓದಿ: ಗುರುವಾರ ಶಿವಮೊಗ್ಗಕ್ಕೆ ಭೇಟಿ ನೀಡುತ್ತೇನೆ: ತಾಖತ್ ಇದ್ದರೆ ಅಟ್ಯಾಕ್ ಮಾಡಿ, ನಾವು ನೋಡಿಕೊಳ್ತೇವೆ -ರೇಣುಕಾಚಾರ್ಯ ಸವಾಲ್

Published On - 6:38 pm, Tue, 22 February 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ