AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರೇ ಗಮನಿಸಿ: ಶಿವಮೊಗ್ಗ, ತಾಳಗುಪ್ಪ ಮಾರ್ಗದ ಹಲವು ರೈಲು ಸಂಚಾರ ರದ್ದು, ಮಾರ್ಗ ಬದಲಾವಣೆ

ಬೆಂಗಳೂರು, ಆ.19: ಮಲ್ಲಸಂದ್ರ-ಗುಬ್ಬಿ ನಡುವೆ ನಡೆಯುತ್ತಿರುವ ಇಂಜಿನಿಯರಿಂಗ್ ಕಾಮಗಾರಿಗಳಿಂದ ಆಗಸ್ಟ್ ತಿಂಗಳಲ್ಲಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ತಾಳಗುಪ್ಪ, ಶಿವಮೊಗ್ಗ, ಚಿಕ್ಕಮಗಳೂರು ಮಾರ್ಗದ ರೈಲುಗಳು ಭಾಗಶಃ/ಸಂಪೂರ್ಣ ರದ್ದುಗೊಂಡಿವೆ ಅಥವಾ ಮಾರ್ಗ ಬದಲಾವಣೆಗೊಂಡಿವೆ. ಪ್ರಯಾಣಿಕರು ಆಗಸ್ಟ್ 19, 22, 23, 26 ರಂದು ತಮ್ಮ ರೈಲು ವೇಳಾಪಟ್ಟಿ ಪರಿಶೀಲಿಸಿ ಪ್ರಯಾಣಿಸಲು ರೈಲ್ವೆ ಇಲಾಖೆ ಕೋರಿದೆ.

ರೈಲು ಪ್ರಯಾಣಿಕರೇ ಗಮನಿಸಿ: ಶಿವಮೊಗ್ಗ, ತಾಳಗುಪ್ಪ ಮಾರ್ಗದ ಹಲವು ರೈಲು ಸಂಚಾರ ರದ್ದು, ಮಾರ್ಗ ಬದಲಾವಣೆ
ಸಾಮದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 19, 2026 | 10:38 AM

Share

ಬೆಂಗಳೂರು, ಆ.19: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವೆ ಅತ್ಯಗತ್ಯ ಇಂಜಿನಿಯರಿಂಗ್ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಹಲವು ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ತಾಳಗುಪ್ಪ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಮಾರ್ಗದ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಆಗಸ್ಟ್ ತಿಂಗಳಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ರೈಲು ವೇಳಾಪಟ್ಟಿಯನ್ನು ಪರಿಶೀಲಿಸಿ ಪ್ರಯಾಣ ಬೆಳೆಸಲು ಕೋರಲಾಗಿದೆ.

ಭಾಗಶಃ ಹಾಗೂ ಸಂಪೂರ್ಣ ರದ್ದಾಗಿರುವ ರೈಲುಗಳು:

ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (20652): ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಅರಸೀಕೆರೆ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲಿಯೇ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.

ಆಗಸ್ಟ್ 19 ಮತ್ತು 26 ರಂದು ಸಂಪೂರ್ಣ ರದ್ದಾಗಿರುವ ರೈಲುಗಳು:

ಚಿಕ್ಕಮಗಳೂರು–ಯಶವಂತಪುರ (16239)

ಯಶವಂತಪುರ–ಚಿಕ್ಕಮಗಳೂರು (16240)

ಕೆಎಸ್ಆರ್ ಬೆಂಗಳೂರು–ಮೈಸೂರು ಒಡೆಯರ್ (12614)

ಕೆಎಸ್ಆರ್ ಬೆಂಗಳೂರು–ತುಮಕೂರು ಮೆಮು (66567)

ತುಮಕೂರು–ಕೆಎಸ್ಆರ್ ಬೆಂಗಳೂರು ಮೆಮು (66572)

ಆಗಸ್ಟ್ 19, 22 ಮತ್ತು 26 ರಂದು ರದ್ದಾಗಿರುವ ರೈಲುಗಳು:

ಯಲಹಂಕ–ಅರಸೀಕೆರೆ (66505) ಮೆಮು

ಅರಸೀಕೆರೆ–ಯಲಹಂಕ (66506) ಮೆಮು

ಇಲ್ಲಿದೆ ನೋಡಿ ಎಕ್ಸ್​​ ಪೋಸ್ಟ್​:

ಮಾರ್ಗ ಬದಲಾವಣೆಯಾಗಿರುವ ರೈಲುಗಳು:

ಯಶವಂತಪುರ–ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (20689): ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಹಾಸನ ಹಾಗೂ ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಪರಿಣಾಮ, ಈ ರೈಲಿಗೆ ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಇದನ್ನೂ ಓದಿ: ‘ಪಿಎಂ-ಇ ಡ್ರೈವ್’ ಯೋಜನೆಯಡಿ 4,500 ಇವಿ ಬಸ್: ಬಿಎಂಟಿಸಿಯ ಡ್ರೈವರ್​ಗಳನ್ನೇ ನೇಮಕ ಮಾಡುವಂತೆ ಆಗ್ರಹ

ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ಇತರ ರೈಲುಗಳು:

ವಾಸ್ಕೋ ಡ ಗಾಮ–ಯಶವಂತಪುರ ಎಕ್ಸ್‌ಪ್ರೆಸ್ (17310)

ಮೈಸೂರು–ಬೆಳಗಾವಿ ವಿಶ್ವಮಾನವ ಎಕ್ಸ್‌ಪ್ರೆಸ್ (20676) (ಈ ರೈಲುಗಳು ತಿಪಟೂರು ಮತ್ತು ತುಮಕೂರು ಬದಲಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲಿವೆ).

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Wed, 19 August 26

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ