AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಸಂಕಷ್ಟ: ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನೇಣಿಗೆ ಶರಣು

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನಗರದ ದೇವಜ್ಞ ಕಲ್ಯಾಣ ಮಂಟಪ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರ್ಥಿಕ ಸಂಕಷ್ಟ: ಭದ್ರಾವತಿ ವಿಐಎಸ್​ಎಲ್ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on:Feb 06, 2023 | 11:38 AM

Share

ಶಿವಮೊಗ್ಗ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL factory) ಗುತ್ತಿಗೆ ಕಾರ್ಮಿಕ ನಗರದ ದೇವಜ್ಞ ಕಲ್ಯಾಣ ಮಂಟಪ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೇತನ್​ಕುಮಾರ್(32) ಮೃತ ವ್ಯಕ್ತಿ. ಆರ್ಥಿಕ ಮುಗ್ಗಟ್ಟಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲವು ದಿನಗಳಿಂದ ವಿಐಎಸ್​ಎಲ್ ಕಾರ್ಖಾನೆ ಮುಚ್ಚುವ ಭೀತಿ ಎದುರಾಗಿದೆ. ಇದರಿಂದ ಗುತ್ತಿಗೆ ಕಾರ್ಮಿಕ ವಲಯದಲ್ಲಿ ಆರ್ಥಕ ಸಂಕಷ್ಟ ಎದುರಾಗಿದೆ. ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ

ರಸ್ತೆ ಅಪಘಾತದಲ್ಲಿ ಆರ್​ಟಿಒ ಸಿಬ್ಬಂದಿ ಸಾವು

ರಾಯಚೂರು: ಸ್ಕಾರ್ಪಿಯೋ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಆರ್​ಟಿಒ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ರಾಯಚೂರು ನಗರದ ಆರ್​ಟಿಒ ಸರ್ಕಲ್ ಸಮೀಪ ನಡೆದಿದೆ. ಆರ್​ಟಿಒ ಕಂಪ್ಯೂಟರ್ ಆಪರೇಟರ್ ಚಂದ್ರಕಾಂತ್(34) ಮೃತ ದುರ್ದೈವಿ. ಬೈಕ್​ನ ಹಿಂಬದಿ ಸವಾರ ನಿಲೇಶ್​ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕಾರ್ಪಿಯೋ ವಾಹನ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಯಚೂರು ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಾರಕಾಸ್ತ್ರದಿಂದ ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನ, ಆರೋಪಿ ಮೇಲೆ ಫೈರಿಂಗ್‌

ಚಂದ್ರಕಾಂತ್ ಬೈಕ್​​ನಲ್ಲಿ ಆರ್​ಟಿಓ ಸರ್ಕಲ್​ನಿಂದ ಬಿಆರ್​ಬಿ ಸರ್ಕಲ್ ಕಡೆ ಹೊರಟಿದ್ದರು. ಈ ವೇಳೆ ಸ್ಕಾರ್ಪಿಯೋ ವಿರುದ್ಧ ದಿಕ್ಕಿನಲ್ಲಿ ಆರ್​ಟಿಓ ಸರ್ಕಲ್ ಕಡೆ ಬರುತ್ತಿತ್ತು. ಈ ಸಮಯದಲ್ಲಿ ಸ್ಕಾರ್ಪಿಯೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಚಂದ್ರಕಾಂತ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮೈಸೂರು: ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದ ಬಸ್ ನಿಲ್ದಾಣದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಗಂಧನಹಳ್ಳಿ ಗ್ರಾಮದ ನಿವಾಸಿ ಅರುಣ್ ಕುಮಾರ್ ಮೃತ ದುರ್ದೈವಿ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:38 am, Mon, 6 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ