AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಮನೆಗೆ ಭೇಟಿ ನೀಡಿದ ರೇಣುಕಾಚಾರ್ಯ ಎದುರು ದುಃಖ ತೋಡಿಕೊಂಡ ಮೃತ ಹರ್ಷನ ತಾಯಿ

ಹರ್ಷ ಕುಟುಂಬಕ್ಕೆ ರೇಣುಕಾಚಾರ್ಯ ವೈಯಕ್ತಿಕವಾಗಿ ₹ 5 ಲಕ್ಷ ನೀಡಿದರು. ಹರ್ಷನ ತಾಯಿಗೆ ಸಾಂತ್ವನ ಹೇಳುವ ವೇಳೆ ರೇಣುಕಾಚಾರ್ಯ ಗದ್ಗದಿತರಾದರು

ಶಿವಮೊಗ್ಗ: ಮನೆಗೆ ಭೇಟಿ ನೀಡಿದ ರೇಣುಕಾಚಾರ್ಯ ಎದುರು ದುಃಖ ತೋಡಿಕೊಂಡ ಮೃತ ಹರ್ಷನ ತಾಯಿ
ಶಿವಮೊಗ್ಗದಲ್ಲಿ .ಪಿ.ರೇಣುಕಾಚಾರ್ಯ ಮೃತ ಹರ್ಷದ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 24, 2022 | 11:21 PM

Share

ಶಿವಮೊಗ್ಗ: ನಗರದಲ್ಲಿ ಈಚೆಗೆ ಮೃತಪಟ್ಟ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಮನೆಗೆ ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಗುರುವಾರ ಪತ್ನಿ ಸುಮಾ ಜೊತೆಗೆ ಭೇಟಿ ನೀಡಿದರು. ಮೃತ ಹರ್ಷನ ತಾಯಿ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಹರ್ಷ ಕುಟುಂಬಕ್ಕೆ ರೇಣುಕಾಚಾರ್ಯ ವೈಯಕ್ತಿಕವಾಗಿ ₹ 5 ಲಕ್ಷ ನೀಡಿದರು. ಈ ವೇಳೆ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ₹ 1 ಲಕ್ಷ, ಹೊನ್ನಾಳಿ ಕ್ಷೇತ್ರದ ಕಾರ್ಯಕರ್ತರು ಸಂಗ್ರಹಿಸಿದ್ದ ₹ 17,000 ಪರಿಹಾರ ನೀಡಿದರು. ಹರ್ಷನ ತಾಯಿಗೆ ಸಾಂತ್ವನ ಹೇಳುವ ವೇಳೆ ರೇಣುಕಾಚಾರ್ಯ ಗದ್ಗದಿತರಾದರು. ಒಂದು ತಿಂಗಳಿನಿಂದ ನನಗೆ ಏನೋ ಒಂದು ತರ ಕಳವಳ ಆಗ್ತಾ ಇತ್ತು. ಯಾವತ್ತೂ ಆ ರೀತಿಯಾಗಿ ಅನ್ನಿಸಿರಲಿಲ್ಲ. ಹೀಗಾಗಿ ಪ್ರತಿ ಹತ್ತು ನಿಮಿಷಕ್ಕೆ ಅವನಿಗೆ ಕರೆ ಮಾಡುತ್ತಿದ್ದೆ. ಆದರೆ ನನ್ನ ಪ್ರಪಂಚವೇ ಆಗಿದ್ದ ಅವನನ್ನು ಕಳೆದುಕೊಂಡೆ ಎಂದು ಹರ್ಷ ತಾಯಿ ಪದ್ಮಾ ಹೇಳಿದರು.

ಹರ್ಷನ ಕೊಲೆ ಮಾಡಿದವರನ್ನು ಎನ್​ಕೌಂಟರ್​ ಮಾಡಬೇಕು ಎಂದು ರೇಣುಕಾಚಾರ್ಯ ಭಾವುಕರಾಗಿ ನುಡಿದರು. ಛತ್ರಪತಿ ಶಿವಾಜಿಯ ಪ್ರತಿರೂಪದಲ್ಲಿ ಹರ್ಷನನ್ನು ನೋಡಿದ್ದೇನೆ. ಇತಿಹಾಸ ಪುರುಷರು ಬಹಳ ದಿನ ಇರಲಿಲ್ಲ. ಹಿಂದೂ ಪರ ಸಂಘಟನೆಗಳ ಸಾಕಷ್ಟು ಯುವಕರ ಹತ್ಯೆಯಾಗಿದೆ. ಹಂತಕರನ್ನು ಎನ್​ಕೌಂಟರ್​​ ಮಾಡಿದರೆ ಇಂತಹ ಕೃತ್ಯ ನಿಲ್ಲುತ್ತದೆ ಎಂದು ತಿಳಿಸಿದರು. ಹರ್ಷನ ತಾಯಿಯದು ಒಂದೇ ಬಯಕೆ. ಹಿಂದುತ್ವ ಉಳಿಬೇಕು ಹರ್ಷನ ಆತ್ಮಕ್ಕೆ ಶಾಂತಿ ಸಿಗಬೇಕು ಎನ್ನುತ್ತಿದ್ದಾರೆ ಅವರು. ಗಲಭೆಯಾದರೆ ಮಕ್ಕಳು ಮನೆಯಿಂದ ಹೋಗದಂತೆ ನೋಡಿಕೊಳ್ಳುತ್ತೇವೆ. ಆದರೆ ಹರ್ಷ ಹಿಂದುತ್ವ ಉಳಿಸಲು ಪ್ರತಿನಿತ್ಯ ಹೋರಾಟ ನಡೆಸುತ್ತಿದ್ದ ಎಂದರು.

ಹರ್ಷನ ಕುಟುಂಬಕ್ಕೆ ಸಹಾಯ ಮಾಡಬಹುದು. ಆದರೆ ಹರ್ಷನನ್ನು ಪುನಃ ತಂದುಕೊಡಲು ಆಗುವುದಿಲ್ಲ. ನಾನು ವಿವಾದಾತ್ಮಕ ಹೇಳಿಕೆ ನೀಡುತ್ತೇನೆ ಎನ್ನುತ್ತಾರೆ. ಗಲಭೆಗೆ ಈಶ್ವರಪ್ಪ ಕಾರಣ ಎಂದು ಕಾಂಗ್ರೆಸ್​ನವರು ಹೇಳುತ್ತಾರೆ. ಆದರೆ ಹರ್ಷನ ಮನೆಗೆ ಯಾವೊಬ್ಬ ಕಾಂಗ್ರೆಸ್ ‌ಮುಖಂಡ ಬಂದಿಲ್ಲ. ಕಾಂಗ್ರೆಸ್​ನವರು ಟಿಪ್ಪು ಜಯಂತಿ ಮಾಡುತ್ತಾರೆ. ಸಿದ್ದರಾಮಯ್ಯನವರೇ ನೀವು ಟಿಪ್ಪು ಜಯಂತಿ ಆಚರಣೆ ಮಾಡುತ್ತೀರಿ. ನೀವು ಟಿಪ್ಪು ಜಯಂತಿಯನ್ನು ಮಾಡಿದ್ದರ ಫಲ‌ ಇದು. ಇನ್ನು ಮುಂದೆ ಈ ರೀತಿ ನಡೆದರೆ ನಾವು ಸಹಿಸುವುದಿಲ್ಲ. ರಾಜಕಾರಣಕ್ಕಾಗಿ ಸದನದಲ್ಲಿ ಮಾತನಾಡುತ್ತೀರಿ ಎಂದು ಲೇವಡಿ ಮಾಡಿದರು. ಭಾರತ್ ಮಾತಾಕಿ ಜೈ ಎನ್ನುವವರಿಗೆ ಮಾತ್ರವೇ ಇಲ್ಲಿ ಜೀವಿಸಲು ಅವಕಾಶ. ಆದನ್ನು ಬಿಟ್ಟು ಪಾಕಿಸ್ತಾನ್ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳಾಗುತ್ತಾರೆ. ಅಂಥವರು ದೇಶ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.

26ರಿಂದ ಶಾಲೆ-ಕಾಲೇಜು ಆರಂಭ

ಶಿವಮೊಗ್ಗದಲ್ಲಿ ಫೆ 26ರಿಂದ ಶಾಲೆ ಮತ್ತು ಕಾಲೇಜುಗಳು ಮತ್ತೆ ಆರಂಭವಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಸೇಲ್ವಮಣಿ ಮಾಹಿತಿ ನೀಡಿದ್ದಾರೆ. ಹರ್ಷ ಸಾವಿನ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದ್ದ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ನಗರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ಮತ್ತೆ ಆರಂಭಿಸಲು ಜಿಲ್ಲಾಧಿಕಾರಿ ಕ್ರಮ ತೆಗೆದುಕೊಂಡಿದ್ದಾರೆ.

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ