AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬೆಳೆಯಲು ಸಂಘ ಪರಿವಾರ, ಬಿಎಸ್ ಯಡಿಯೂರಪ್ಪ ಕಾರಣ; ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ

ವೈ ರಾಘವೇಂದ್ರ ಮಾತನಾಡಿ, ಶಿವಮೊಗ್ಗದಲ್ಲಿ ಬಿಎಸ್​ವೈ ಮತ್ತು ಈಶ್ವರಪ್ಪ ಯಾವುದೇ ಬಣವಿಲ್ಲ. ಬಿಜೆಪಿ ಪಕ್ಷದಲ್ಲಿ ಸಂಘಟನೆ ಮಾತ್ರ ಆದ್ಯತೆ ನೀಡಲಾಗುತ್ತದೆ. ಕಾರ್ಯಕರ್ತರನ್ನು ಗುರುತಿಸಿ ಉನ್ನತ ಸ್ಥಾನ ಬಿಜೆಪಿ ಪಕ್ಷದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಾನು ಬೆಳೆಯಲು ಸಂಘ ಪರಿವಾರ, ಬಿಎಸ್ ಯಡಿಯೂರಪ್ಪ ಕಾರಣ; ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ
ಸಚಿವ ಕೆಎಸ್​ ಈಶ್ವರಪ್ಪ
TV9 Web
| Edited By: sandhya thejappa|

Updated on: Jan 23, 2022 | 3:56 PM

Share

ಶಿವಮೊಗ್ಗ: ನಾನು ಬೆಳೆಯಲು ಸಂಘ ಪರಿವಾರ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಕಾರಣ ಅಂತ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ (KS Eshwarappa) ಹೇಳಿಕೆ ನೀಡಿದ್ದಾರೆ. ಬಿಎಸ್​ವೈ ವಿರುದ್ಧ ಗುಂಪು ಕಟ್ಟಿದ್ರೆ ದ್ರೋಹ ಮಾಡಿದಂತೆ. ನನ್ನ ತಂದೆ, ತಾಯಿಗೆ ನಾನು ದ್ರೋಹ ಮಾಡಿದಂತೆ. ಬಿಎಸ್​ವೈ, ಈಶ್ವರಪ್ಪ ಎನ್ನುವ ಯಾವುದೇ ಗುಂಪು ಇಲ್ಲ ಅಂತ ಯಡಿಯೂರಪ್ಪ ಬಗ್ಗೆ ಈಶ್ವರಪ್ಪ ಭಾವುಕರಾಗಿ ಮಾತನಾಡಿದರು. ಇನ್ನು ನೂತನ ಸೂಡಾ ಅಧ್ಯಕ್ಷ ನಾಗರಾಜ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿ, ಶಿವಮೊಗ್ಗದಲ್ಲಿ ಬಿಎಸ್​ವೈ ಮತ್ತು ಈಶ್ವರಪ್ಪ ಯಾವುದೇ ಬಣವಿಲ್ಲ. ಬಿಜೆಪಿ ಪಕ್ಷದಲ್ಲಿ ಸಂಘಟನೆ ಮಾತ್ರ ಆದ್ಯತೆ ನೀಡಲಾಗುತ್ತದೆ. ಕಾರ್ಯಕರ್ತರನ್ನು ಗುರುತಿಸಿ ಉನ್ನತ ಸ್ಥಾನ ಬಿಜೆಪಿ ಪಕ್ಷದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಿರ್ಧಾರ ಕೈಗೊಂಡಿದ್ದು ಅಪರಾಧ ಜಿಲ್ಲೆಯಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿಲ್ಲ. ನಗರದ ಯಾವ ಶಾಲೆಗೆ ರಜೆ ನೀಡಬೇಕೆಂದು ಸಂಜೆ ನಿರ್ಧಾರ ಮಾಡಲಾಗುವುದು. ಶಾಲೆಗಳನ್ನ ತೆರೆಯುವಂತೆ ಬಹುತೇಕರು ಮನವಿ ಮಾಡಿದ್ದಾರೆ. ಜ.26ರಂದು ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಕೆಲವು ಶಾಲೆಗಳು ಅವರೇ ನಿರ್ಧಾರಕೈಗೊಂಡು ರಜೆ ನೀಡಿವೆ. ಜಿಲ್ಲಾಧಿಕಾರಿ ಸೇರಿದಂತೆ ಯಾರ ಗಮನಕ್ಕೂ ತರದೇ ನಿರ್ಧಾರ ಕೈಗೊಂಡಿದ್ದಾರೆ. ಅವರೇ ನಿರ್ಧಾರ ಕೈಗೊಂಡಿದ್ದು ಅಪರಾಧ ಅಂತ ಈಶ್ವರಪ್ಪ ಅಭಿಪ್ರಾಯಪಟ್ಟರು.

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರಿಗೆ ಕೊರೊನಾ ಬಂತು. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಕೊರೊನಾ ಪಾಸಿಟಿವ್ ಬಂದಿದೆ. ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಬೇಡವೆಂದು ಹೇಳಿದ್ದೆವು. ರಾಜಕಾರಣ ಮಾಡಲು ಹೋಗಿ ಸೋಂಕು ಹರಡುವಂತಾಯಿತು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸೋಂಕು ಹೆಚ್ಚಳವಾಗಿಲ್ಲ. ಎಲ್ಲದಕ್ಕೂ ರಾಜಕಾರಣ ಬೆರೆಸುವುದು ಒಳ್ಳೆ ಬೆಳವಣಿಗೆಯಲ್ಲ ಅಂತ ತಿಳಿಸಿದರು.

ಇದನ್ನೂ ಓದಿ

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ 10 ಅಡಿ ಕಾಳಿಂಗ ಸರ್ಪ ಪ್ರತ್ಯಕ್ಷ! ವಿಡಿಯೋ ನೋಡಿ

Republic Day 2022: ಗಣರಾಜ್ಯೋತ್ಸವದ ಹಿನ್ನೆಲೆ, ಸಂವಿಧಾನದ ಬಗ್ಗೆ ಈ ವಿಚಾರಗಳನ್ನು ತಿಳಿದುಕೊಳ್ಳಲೇಬೇಕು

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್