AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa Birthday: ಕುಟುಂಬ ಸಮೇತ ಶಿವಮೊಗ್ಗದ ರಾಯರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು.

BS Yediyurappa Birthday: ಕುಟುಂಬ ಸಮೇತ ಶಿವಮೊಗ್ಗದ ರಾಯರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 27, 2023 | 9:42 AM

Share

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ (BS Yediyurappa) ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ (Shivamogga) ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ (Raghavendra Swamy Mutt) ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು. ಈ ವೇಳೆ ತಂದೆಗೆ ಪುತ್ರ, ಸಂಸದ ಬಿ ವೈ ರಾಘವೇಂದ್ರ (BY Raghavendra) ಕುಟುಂಬ ಸದಸ್ಯರು ಜೊತೆ ಇದ್ದರು. ಈ ವೇಳೆ ಅಭಿಮಾನಿಗಳಿಂದ ಬಿ.ಎಸ್ ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ ದೊರೆಯಿತು.

ಇದನ್ನೂ ಓದಿ: 80ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್.ಯಡಿಯೂರಪ್ಪ ಸಾಗಿ ಬಂದ ಹಾದಿ ಸುಲಭದ್ದೇನಲ್ಲ…

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದೊಂದು ವಿಶೇಷ ಸಂದರ್ಭ ನನಗೆ. ನನ್ನ ಹುಟ್ಟು ಹಬ್ಬದ ಸಂದರ್ಭದಲ್ಲೇ ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Shivamogga Airport) ಆಗಮಿಸಿ ಲೋಕಾರ್ಪಣೆಗೊಳಿಸುವುದು ವಿಶೇಷವಾದ ಘಳಿಗೆಯಾಗಿದೆ. ಮುಂದಿನ ಬಾರಿಯೂ ಮತ್ತೆ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ಪಣ ತೊಟ್ಟಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾನು ಹೇಳುವುದಿಷ್ಟೆ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು. ಇದಕ್ಕಾಗಿ ನಾವೆಲ್ಲ ಶ್ರಮಿಸಬೇಕಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಮತ್ತೊಮ್ಮೆ ರಾಜ್ಯದ ಜನರು ಬಿಜೆಪಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ