AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರದ ನೂತನ ಕೃಷಿ ವಿವಿಗೆ ಕೆಳದಿ ಶಿವಪ್ಪ ನಾಯಕ ವಿವಿ ಎಂದು ನಾಮಕರಣ: ಬಿಎಸ್​ವೈ ನಿರ್ಧಾರಕ್ಕೆ ವೀರಶೈವ ಸಮುದಾಯದ ಮೆಚ್ಚುಗೆ

ಶಿವಮೊಗ್ಗ ನಾಯಕ ವೃತ್ತದಲ್ಲಿ ವೀರಶೈವ ಸಮಾಜದ ಮುಖಂಡರು ಹರ್ಷೋದ್ಘಾರ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಶ್ರೀ ಮತ್ತು ಬಸವಕೇಂದ್ರದ ಬಸವಮರಳುಸಿದ್ದ ಸ್ವಾಮೀಜಿ ಕೂಡಾ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಸಾಗರದ ನೂತನ ಕೃಷಿ ವಿವಿಗೆ ಕೆಳದಿ ಶಿವಪ್ಪ ನಾಯಕ ವಿವಿ ಎಂದು ನಾಮಕರಣ: ಬಿಎಸ್​ವೈ ನಿರ್ಧಾರಕ್ಕೆ ವೀರಶೈವ ಸಮುದಾಯದ ಮೆಚ್ಚುಗೆ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Jul 28, 2021 | 1:14 PM

Share

ಶಿವಮೊಗ್ಗ: ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲಿ ನಿರ್ಮಾಣವಾಗುವ ನೂತನ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಎಂದು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಈ ಆದೇಶಕ್ಕೆ ವೀರಶೈವ ಸಮಾಜದ ಮುಖಂಡರು ಸಂಭ್ರಮಿಸಿದ್ದಾರೆ. ಶಿವಮೊಗ್ಗ ನಾಯಕ ವೃತ್ತದಲ್ಲಿ ವೀರಶೈವ ಸಮಾಜದ ಮುಖಂಡರು ಹರ್ಷೋದ್ಘಾರ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಶ್ರೀ ಮತ್ತು ಬಸವಕೇಂದ್ರದ ಬಸವಮರಳುಸಿದ್ದ ಸ್ವಾಮೀಜಿ ಕೂಡಾ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಯಡಿಯೂರಪ್ಪ ಒಬ್ಬ ಅತ್ಯುತ್ತಮ ಆಡಳಿತಗಾರ. ಮಲೆನಾಡಿನಲ್ಲಿ ಅತ್ಯುತ್ತಮ ಆಡಳಿತ ನೀಡಿದ ಅರಸ ಶಿವಪ್ಪ ನಾಯಕ. ಅವರು ರೈತರಿಗೆ ಅತ್ಯುತ್ತಮ ಸೌಲಭ್ಯ ಮತ್ತು ವ್ಯವಸ್ಥೆ ಕಲ್ಪಿಸಿದ್ದರು. ಯಡಿಯೂರಪ್ಪ ಹಾಗೂ ಸರ್ಕಾರ ಅವರನ್ನು ಸ್ಮರಿಸಿಕೊಂಡು ಸಾಗರ ತಾಲ್ಲೂಕಿನ ಇರುವಕ್ಕಿಯ ನೂತನ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಅವರ ಹೆಸರಿಟ್ಟಿದ್ದಾರೆ. ಇದು ಅತ್ಯಂತ ಸಮಂಜಸ ನಿರ್ಧಾರ ಎಂದು ಶ್ರೀಗಳು ತಿಳಿಸಿದ್ದಾರೆ.

ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಶಿವಪ್ಪ ನಾಯಕ ಕೃಷಿ ವಿವಿ ಎಂದು ಜುಲೈ 24ರಂದು ಯಡಿಯೂರಪ್ಪ ನಾಮಕರಣ ಮಾಡಿದ್ದಾರೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ಹೆಸರಿಸಿದ ಅವರು, 2 ವರ್ಷ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಅಭಿವೃದ್ಧಿಗೆ ಗರಿಷ್ಠ ಪ್ರಯತ್ನ ಮಾಡಿದ ತೃಪ್ತಿ ನನಗಿದೆ ಎಂದು ಹೇಳಿದ್ದರು. ಬಳಿಕ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ವರ್ಚುವಲ್ ವಿಧಾನದ ಮೂಲಕ ಭಾಗಿಯಾಗಿದ್ದರು.

ಜತೆಗೆ, ಏಪ್ರಿಲ್ ವೇಳೆಗೆ ಶಿವಮೊಗ್ಗ ಏರ್‌ಪೋರ್ಟ್‌ ಕಾರ್ಯಾರಂಭ ಆಗಲಿದೆ ಎಂದೂ ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಸುಮಾರು 1,074 ಕೋಟಿ ರೂ ವೆಚ್ಚದ ಕಾಮಗಾರಿಗಳ ಉದ್ಘಾಟನೆಯನ್ನು ಅವರು ಅಂದು ನೆರವೇರಿಸಿದ್ದು, 560ಕೋಟಿ ರೂ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದರು.

(BSY named new agricultural University in Shivamogga district as Keladi Shivappa Nayaka university)

ಇದನ್ನೂ ಓದಿ: ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಎಂದು ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ 

ಕೃಷಿ ವಿಶ್ವ ವಿದ್ಯಾಲಯದಲ್ಲಿ ಕಲಿಕೆ ಜತೆಗೆ ಗಳಿಕೆ- ಕಲ್ಯಾಣ ಕರ್ನಾಟಕ ಭಾಗದ ಅನ್ನದಾತರ ಪಾಲಿಗೆ ಜೀವಾಳ

Published On - 12:59 pm, Wed, 28 July 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!