AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಕೊಲೆ ಮಾಡಿರುವಂತಹ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಹೋಂಡಾ ಸಿಟಿ ಕಾರಿನಲ್ಲಿ ಕಾರ್ಮಿಕನ ಶವ ಪತ್ತೆ ಆಗಿದೆ. ಸದ್ಯ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?
ಕಾರಿನಲ್ಲಿ ಶವ ಪತ್ತೆImage Credit source: tv9 kannada
Basavaraj Yaraganavi
| Edited By: |

Updated on: Apr 02, 2026 | 4:34 PM

Share

ಶಿವಮೊಗ್ಗ, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್​​ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. ಸದ್ಯ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್​ನನ್ನು ವಶಕ್ಕೆ ಪಡೆದಿದ್ದಾರೆ.

ನಡೆದಿದ್ದೇನು?

ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಬಿಹಾರ ಮೂಲದ ಟಿಂಕು ಶರ್ಮಾ ಕೆಲಸ ಮಾಡುತ್ತಿದ್ದ. ಹಣಕಾಸಿನ ವಿಚಾರಕ್ಕೆ ಮಾಲೀಕ ಇಮ್ರಾನ್ ಮತ್ತು ಟಿಂಕು ನಡುವೆ ಗಲಾಟೆ ಉಂಟಾಗಿದೆ.

ಇದನ್ನೂ ಓದಿ: ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಗುರುವಾರ ಬೆಳಗ್ಗೆ ಕೂಡ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಹಲ್ಲೆ ನಡೆಸಿ ಟಿಂಕು ಶರ್ಮಾನನ್ನು ಇಮ್ರಾನ್ ಕೊಲೆಗೈದಿದ್ದಾರೆ. ಹೋಂಡಾ ಸಿಟಿ ಕಾರಿನಲ್ಲಿ ಶವ ಪತ್ತೆಯಾಗಿದೆ. ಇಮ್ರಾನ್ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಶಿವಮೊಗ್ಗ ಎಸ್​​ಪಿ ನಿಖಿಲ್ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ತಡರಾತ್ರಿ ಮಲಗಿದ್ದ ವೇಳೆ ಕಾಲಿಗೆ ಹಾವು ಕಡಿದು ಮಹಿಳೆ ಸಾವು

ತಡರಾತ್ರಿ ಮಲಗಿದ್ದ ವೇಳೆ ಕಾಲಿಗೆ ಹಾವು ಕಡಿದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 9ನೇ ಮೈಲಿಕಲ್ ಗ್ರಾಮದಲ್ಲಿ ನಡೆದಿದೆ. ಛತ್ತೀಷ್​ಘಡ ಮೂಲದ ಜಾಲ್​ ಬಾಯಿ ಸಿಧಾರ್(42) ಮೃತ ಕಾರ್ಮಿಕ ಮಹಿಳೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ

ಕಳೆದ ಕೆಲ ದಿನಗಳಿಂದ ಎಕೆಸಿ ಸಿಮೆಂಟ್​ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜಾಲ್​ ಬಾಯಿ ಕುಟುಂಬ ಕೆಲಸಕ್ಕಿತ್ತು. ಮಲಗಿದ್ದ ವೇಳೆ ತಡರಾತ್ರಿ ಜಾಲ್​ ಬಾಯಿಗೆ ಹಾವು ಕಡಿದಿದೆ. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?