AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗುಂಬೆ: ಆಕಸ್ಮಿಕ ಬೆಂಕಿಯಿಂದ ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿತು ಭಾರೀ ಅವಗಢ

ಕಾರ್ಕಳದಲ್ಲಿ ನಿಸಾನ್ ಎಸ್​ಯುವಿಕೆ ವಾಹನವನ್ನು ಖರೀದಿಸಿ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಬ್ಯಾನೆಟ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ತಪಾಸಣೆ ಮಾಡುವಾಗ ಬೆಂಕಿ ನಿಧಾನವಾಗಿ ವಾಹನವನ್ನು ಆವರಿಸಿಕೊಂಡಿದೆ.

ಆಗುಂಬೆ: ಆಕಸ್ಮಿಕ ಬೆಂಕಿಯಿಂದ ರಸ್ತೆಯಲ್ಲೇ ಧಗಧಗಿಸಿದ ಕಾರು; ತಪ್ಪಿತು ಭಾರೀ ಅವಗಢ
ಬೆಂಕಿಗಾಹುತಿಯಾದ ಕಾರು
TV9 Web
| Edited By: |

Updated on:Sep 20, 2021 | 3:45 PM

Share

ಶಿವಮೊಗ್ಗ: ಜಿಲ್ಲೆಯ ಆಗುಂಬೆ ಗಾಟಿಯ ಮೊದಲನೇ ತಿರುವಿನಲ್ಲಿ ನಿನ್ನೆ( ಸೆಪ್ಟೆಂಬರ್​, 19) ಚಲಿಸುತ್ತಿದ್ದ ಎಸ್​ಯುವಿಕೆ ಕಾರಿನಲ್ಲಿ ದಿಡೀರನೆ ಬೆಂಕಿಯೊಂದು ಕಾಣಿಸಿಕೊಂಡಿದ್ದು, ಇಡೀ ಕಾರು ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.

ಕಾರ್ಕಳದಲ್ಲಿ ನಿಸಾನ್ ಎಸ್​ಯುವಿಕೆ ವಾಹನವನ್ನು ಖರೀದಿಸಿ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಬ್ಯಾನೆಟ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ತಪಾಸಣೆ ಮಾಡುವಾಗ ಬೆಂಕಿ ನಿಧಾನವಾಗಿ ವಾಹನವನ್ನು ಆವರಿಸಿಕೊಂಡಿದೆ.

ಶಿವಮೊಗ್ಗದ ಅರವಿಂದ್ ಈ ವಾಹನ ಖರೀದಿಸಿ ವಾಪಾಸಾಗುವಾಗ ಆಗುಂಬೆ ಮೊದಲನೇ ತಿರುವಿನ ಬಳಿ (14ನೇ ಸುತ್ತು) ಈ ಘಟನೆ ನಡೆದಿದೆ. ಸೆಕೆಂಡ್​ ಹ್ಯಾಂಡ್​ ಕಾರ್​ ಆಗಿದ್ದು, ಕಾರಿನಲ್ಲಿ ಅರವಿಂದ್​ ಸೇರಿದಂತೆ ಇಬ್ಬರೂ ಪ್ರಯಾಣ ನಡೆಸುತ್ತಿದ್ದರು.  ಘಟನೆಯಿಂದಾಗಿ ಗಾಟಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ ಕೆಲ ಕಾಲ ಸಂಚಾರ ಬಂದ್​ ಆಗಿತ್ತು. ಬಳಿಕ ಆಗುಂಬೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿಯು ಬೆಂಕಿ ನಂದಿಸಿದ್ದಾರೆ.

ಹಾವೇರಿ: ದರ್ಗಾ ಮಾರುಕಟ್ಟೆಯಲ್ಲಿ ಬೆಂಕಿ; 200ಕ್ಕೂ ಹೆಚ್ಚು ಅಂಗಡಿ ಭಸ್ಮ ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದ ದರ್ಗಾ ಮಾರುಕಟ್ಟೆಯಲ್ಲಿ ಬೆಂಕಿ ಬಿದ್ದು 200ಕ್ಕೂ ಹೆಚ್ಚು ಅಂಗಡಿಗಳು ಭಸ್ಮಗೊಂಡಿವೆ. ಬಹುತೇಕ ತರಕಾರಿ, ಹಣ್ಣು, ದಿನಸಿ ಅಂಗಡಿಗಳಲ್ಲಿನ‌ ವಸ್ತುಗಳು ಸುಟ್ಟು ಭಸ್ಮವಾಗಿದ್ದು, ದುಷ್ಕರ್ಮಿಗಳು ಮಾರ್ಕೆಟ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ರಾಣೆಬೆನ್ನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಣೆಬೆನ್ನೂರಿನ ದರ್ಗಾ ಮಾರುಕಟ್ಟೆಯಲ್ಲಿ ಬೆಂಕಿ; 200ಕ್ಕೂ ಹೆಚ್ಚು ಅಂಗಡಿ ಭಸ್ಮ

ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ

Published On - 3:01 pm, Mon, 20 September 21

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು