AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೋಮವಾರ ಶಿವಮೊಗ್ಗದ ವಿನೋಬನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ಈ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ
ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ
Basavaraj Yaraganavi
| Edited By: |

Updated on:Aug 28, 2023 | 9:58 PM

Share

ಶಿವಮೊಗ್ಗ, ಆಗಸ್ಟ್ 28: ನನ್ನ ಫೇಸ್​ಬುಕ್ ಅಕೌಂಟ್​ನಿಂದ ಸಂದೇಶ ಹೋಗಿದೆ ಎಂದು ಎಫ್ಐಆರ್ ಹಾಕಿದ್ದಾರೆ. ನನ್ನ ಸೋಶಿಯಲ್ ಮೀಡಿಯಾ ಅಕೌಂಟ್​ ಅನ್ನು ನಮ್ಮ ಹುಡುಗರು ನೋಡಿಕೊಳ್ಳುತ್ತಾರೆ. ಈ ವಿಷಯದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ. ಇಂತಹ ಸಣ್ಣ ವಿಷಯಗಳಿಗೂ ಪೊಲೀಸರು ಹೇಗೆ ಎಫ್​ಐಆರ್​ ದಾಖಲಿಸಿದರು ಎಂಬುದನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುತ್ತೇನೆ ಎಂದು ಪ್ರಖ್ಯಾತ ವಾಗ್ಮಿ  ಚಕ್ರವರ್ತಿ ಸೂಲಿಬೆಲೆ (Chakravarti Sulibele) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಅನೇಕ ಸಂಗತಿಗಳು ಈ ಹಿಂದೆ ಕೂಡ ನಡೆದಿದ್ದು, ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ ಎಂದಿದ್ದಾರೆ.

ಈ ಸಂಗತಿಯನ್ನು ಡೆಫಿನೆಟ್ಲಿ ಕೋರ್ಟ್​ನಲ್ಲಿ ಪ್ರಶ್ನೆ ಮಾಡುತ್ತೇನೆ. ಈ ಕಾರ್ಯಕ್ರಮಕ್ಕೆ ಪ್ರತಿಭಟನೆಯ ಸಾಧ್ಯತೆ ಹಿನ್ನೆಲೆ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ. ಇದಕ್ಕಾಗಿ ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸುತ್ತೇನೆ.

ಇದನ್ನೂ ಓದಿ: ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬ್ರಿಗೇಡ್ ಹೆಚ್ಚಿನ ಕೆಲಸ ಮಾಡಲಿದೆ. ಜಿಲ್ಲಾ ಮಟ್ಟದ ಸಭೆಯನ್ನು ಖುದ್ದಾಗಿ ನಾನೇ ನಡೆಸಿದ್ದೇನೆ. ತಾಲೂಕು ಮಟ್ಟದಲ್ಲೂ ಕೂಡ ನಿಮ್ಮ ಬ್ರಿಗೇಡ್​ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. ಲೋಕಸಭಾ ಚುನಾವಣೆಗೆ 5 ತಿಂಗಳ ಮುನ್ನ ನಮ್ಮ ಕಾರ್ಯ ಶುರು ಆಗಲಿದೆ. ಚುನಾವಣೆಯ ಕೊನೆಯ ಎರಡು ತಿಂಗಳಲ್ಲಿ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ನಮ್ಮ ಬ್ರಿಗೇಡ್ 2.0 ಪ್ರಚಾರ ನಡೆಸಲಿದೆ ಎಂದರು.

ಇದನ್ನೂ ಓದಿ: ಕೆಪಿಸಿಸಿ ಐಟಿ ಸೆಲ್ ಉಪಾಧ್ಯಕ್ಷೆ ಸೌಗಂಧಿಕಾ ಕುರಿತು ಚಕ್ರವರ್ತಿ ಸೂಲಿಬೆಲೆ ಅವಹೇಳಕಾರಿ ಪೋಸ್ಟ್, ಚಿಂತಕನ ವಿರುದ್ಧ ಎಫ್​​ಐಅರ್!

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿಲ್ಲ. ಮೋದಿಯವರ ಕಾರ್ಯ ಸಾಧನೆಗಳನ್ನು ಜನತೆಯ ಮುಂದಿಡುತ್ತೇವೆ. ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ ಹಾಗೂ ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡಲು ಈ ಉಪನ್ಯಾಸ ಕಾರ್ಯಕ್ರಮ ಮಾಡಲಾಗಿತ್ತಿದೆ. ದೇಶದ ಹಿತದೃಷ್ಟಿಯಿಂದ ಇಂತಹ ಉಪನ್ಯಾಸ ಕಾರ್ಯಕ್ರಮಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:56 pm, Mon, 28 August 23

ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ