AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೋಮವಾರ ಶಿವಮೊಗ್ಗದ ವಿನೋಬನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ಈ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ
ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ
Basavaraj Yaraganavi
| Edited By: |

Updated on:Aug 28, 2023 | 9:58 PM

Share

ಶಿವಮೊಗ್ಗ, ಆಗಸ್ಟ್ 28: ನನ್ನ ಫೇಸ್​ಬುಕ್ ಅಕೌಂಟ್​ನಿಂದ ಸಂದೇಶ ಹೋಗಿದೆ ಎಂದು ಎಫ್ಐಆರ್ ಹಾಕಿದ್ದಾರೆ. ನನ್ನ ಸೋಶಿಯಲ್ ಮೀಡಿಯಾ ಅಕೌಂಟ್​ ಅನ್ನು ನಮ್ಮ ಹುಡುಗರು ನೋಡಿಕೊಳ್ಳುತ್ತಾರೆ. ಈ ವಿಷಯದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ. ಇಂತಹ ಸಣ್ಣ ವಿಷಯಗಳಿಗೂ ಪೊಲೀಸರು ಹೇಗೆ ಎಫ್​ಐಆರ್​ ದಾಖಲಿಸಿದರು ಎಂಬುದನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುತ್ತೇನೆ ಎಂದು ಪ್ರಖ್ಯಾತ ವಾಗ್ಮಿ  ಚಕ್ರವರ್ತಿ ಸೂಲಿಬೆಲೆ (Chakravarti Sulibele) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಅನೇಕ ಸಂಗತಿಗಳು ಈ ಹಿಂದೆ ಕೂಡ ನಡೆದಿದ್ದು, ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ ಎಂದಿದ್ದಾರೆ.

ಈ ಸಂಗತಿಯನ್ನು ಡೆಫಿನೆಟ್ಲಿ ಕೋರ್ಟ್​ನಲ್ಲಿ ಪ್ರಶ್ನೆ ಮಾಡುತ್ತೇನೆ. ಈ ಕಾರ್ಯಕ್ರಮಕ್ಕೆ ಪ್ರತಿಭಟನೆಯ ಸಾಧ್ಯತೆ ಹಿನ್ನೆಲೆ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ. ಇದಕ್ಕಾಗಿ ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸುತ್ತೇನೆ.

ಇದನ್ನೂ ಓದಿ: ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬ್ರಿಗೇಡ್ ಹೆಚ್ಚಿನ ಕೆಲಸ ಮಾಡಲಿದೆ. ಜಿಲ್ಲಾ ಮಟ್ಟದ ಸಭೆಯನ್ನು ಖುದ್ದಾಗಿ ನಾನೇ ನಡೆಸಿದ್ದೇನೆ. ತಾಲೂಕು ಮಟ್ಟದಲ್ಲೂ ಕೂಡ ನಿಮ್ಮ ಬ್ರಿಗೇಡ್​ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. ಲೋಕಸಭಾ ಚುನಾವಣೆಗೆ 5 ತಿಂಗಳ ಮುನ್ನ ನಮ್ಮ ಕಾರ್ಯ ಶುರು ಆಗಲಿದೆ. ಚುನಾವಣೆಯ ಕೊನೆಯ ಎರಡು ತಿಂಗಳಲ್ಲಿ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ನಮ್ಮ ಬ್ರಿಗೇಡ್ 2.0 ಪ್ರಚಾರ ನಡೆಸಲಿದೆ ಎಂದರು.

ಇದನ್ನೂ ಓದಿ: ಕೆಪಿಸಿಸಿ ಐಟಿ ಸೆಲ್ ಉಪಾಧ್ಯಕ್ಷೆ ಸೌಗಂಧಿಕಾ ಕುರಿತು ಚಕ್ರವರ್ತಿ ಸೂಲಿಬೆಲೆ ಅವಹೇಳಕಾರಿ ಪೋಸ್ಟ್, ಚಿಂತಕನ ವಿರುದ್ಧ ಎಫ್​​ಐಅರ್!

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿಲ್ಲ. ಮೋದಿಯವರ ಕಾರ್ಯ ಸಾಧನೆಗಳನ್ನು ಜನತೆಯ ಮುಂದಿಡುತ್ತೇವೆ. ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ ಹಾಗೂ ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡಲು ಈ ಉಪನ್ಯಾಸ ಕಾರ್ಯಕ್ರಮ ಮಾಡಲಾಗಿತ್ತಿದೆ. ದೇಶದ ಹಿತದೃಷ್ಟಿಯಿಂದ ಇಂತಹ ಉಪನ್ಯಾಸ ಕಾರ್ಯಕ್ರಮಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:56 pm, Mon, 28 August 23

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್