AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೋಮವಾರ ಶಿವಮೊಗ್ಗದ ವಿನೋಬನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ಈ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ
ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 28, 2023 | 9:58 PM

Share

ಶಿವಮೊಗ್ಗ, ಆಗಸ್ಟ್ 28: ನನ್ನ ಫೇಸ್​ಬುಕ್ ಅಕೌಂಟ್​ನಿಂದ ಸಂದೇಶ ಹೋಗಿದೆ ಎಂದು ಎಫ್ಐಆರ್ ಹಾಕಿದ್ದಾರೆ. ನನ್ನ ಸೋಶಿಯಲ್ ಮೀಡಿಯಾ ಅಕೌಂಟ್​ ಅನ್ನು ನಮ್ಮ ಹುಡುಗರು ನೋಡಿಕೊಳ್ಳುತ್ತಾರೆ. ಈ ವಿಷಯದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ. ಇಂತಹ ಸಣ್ಣ ವಿಷಯಗಳಿಗೂ ಪೊಲೀಸರು ಹೇಗೆ ಎಫ್​ಐಆರ್​ ದಾಖಲಿಸಿದರು ಎಂಬುದನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುತ್ತೇನೆ ಎಂದು ಪ್ರಖ್ಯಾತ ವಾಗ್ಮಿ  ಚಕ್ರವರ್ತಿ ಸೂಲಿಬೆಲೆ (Chakravarti Sulibele) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಅನೇಕ ಸಂಗತಿಗಳು ಈ ಹಿಂದೆ ಕೂಡ ನಡೆದಿದ್ದು, ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ ಎಂದಿದ್ದಾರೆ.

ಈ ಸಂಗತಿಯನ್ನು ಡೆಫಿನೆಟ್ಲಿ ಕೋರ್ಟ್​ನಲ್ಲಿ ಪ್ರಶ್ನೆ ಮಾಡುತ್ತೇನೆ. ಈ ಕಾರ್ಯಕ್ರಮಕ್ಕೆ ಪ್ರತಿಭಟನೆಯ ಸಾಧ್ಯತೆ ಹಿನ್ನೆಲೆ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ. ಇದಕ್ಕಾಗಿ ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸುತ್ತೇನೆ.

ಇದನ್ನೂ ಓದಿ: ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬ್ರಿಗೇಡ್ ಹೆಚ್ಚಿನ ಕೆಲಸ ಮಾಡಲಿದೆ. ಜಿಲ್ಲಾ ಮಟ್ಟದ ಸಭೆಯನ್ನು ಖುದ್ದಾಗಿ ನಾನೇ ನಡೆಸಿದ್ದೇನೆ. ತಾಲೂಕು ಮಟ್ಟದಲ್ಲೂ ಕೂಡ ನಿಮ್ಮ ಬ್ರಿಗೇಡ್​ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. ಲೋಕಸಭಾ ಚುನಾವಣೆಗೆ 5 ತಿಂಗಳ ಮುನ್ನ ನಮ್ಮ ಕಾರ್ಯ ಶುರು ಆಗಲಿದೆ. ಚುನಾವಣೆಯ ಕೊನೆಯ ಎರಡು ತಿಂಗಳಲ್ಲಿ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ನಮ್ಮ ಬ್ರಿಗೇಡ್ 2.0 ಪ್ರಚಾರ ನಡೆಸಲಿದೆ ಎಂದರು.

ಇದನ್ನೂ ಓದಿ: ಕೆಪಿಸಿಸಿ ಐಟಿ ಸೆಲ್ ಉಪಾಧ್ಯಕ್ಷೆ ಸೌಗಂಧಿಕಾ ಕುರಿತು ಚಕ್ರವರ್ತಿ ಸೂಲಿಬೆಲೆ ಅವಹೇಳಕಾರಿ ಪೋಸ್ಟ್, ಚಿಂತಕನ ವಿರುದ್ಧ ಎಫ್​​ಐಅರ್!

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿಲ್ಲ. ಮೋದಿಯವರ ಕಾರ್ಯ ಸಾಧನೆಗಳನ್ನು ಜನತೆಯ ಮುಂದಿಡುತ್ತೇವೆ. ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ ಹಾಗೂ ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡಲು ಈ ಉಪನ್ಯಾಸ ಕಾರ್ಯಕ್ರಮ ಮಾಡಲಾಗಿತ್ತಿದೆ. ದೇಶದ ಹಿತದೃಷ್ಟಿಯಿಂದ ಇಂತಹ ಉಪನ್ಯಾಸ ಕಾರ್ಯಕ್ರಮಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:56 pm, Mon, 28 August 23

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ