ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 28, 2023 | 9:58 PM

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೋಮವಾರ ಶಿವಮೊಗ್ಗದ ವಿನೋಬನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಚಕ್ರವರ್ತಿ ಸೂಲಿಬೆಲೆ, ಈ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಎಫ್ಐಆರ್ ದಾಖಲಿಸಿದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ ಎಂದ ಚಕ್ರವರ್ತಿ ಸೂಲಿಬೆಲೆ
ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ
Follow us on

ಶಿವಮೊಗ್ಗ, ಆಗಸ್ಟ್ 28: ನನ್ನ ಫೇಸ್​ಬುಕ್ ಅಕೌಂಟ್​ನಿಂದ ಸಂದೇಶ ಹೋಗಿದೆ ಎಂದು ಎಫ್ಐಆರ್ ಹಾಕಿದ್ದಾರೆ. ನನ್ನ ಸೋಶಿಯಲ್ ಮೀಡಿಯಾ ಅಕೌಂಟ್​ ಅನ್ನು ನಮ್ಮ ಹುಡುಗರು ನೋಡಿಕೊಳ್ಳುತ್ತಾರೆ. ಈ ವಿಷಯದ ಬಗ್ಗೆ ನ್ಯಾಯಾಲಯದಲ್ಲಿ ಉತ್ತರ ನೀಡುತ್ತೇನೆ. ಇಂತಹ ಸಣ್ಣ ವಿಷಯಗಳಿಗೂ ಪೊಲೀಸರು ಹೇಗೆ ಎಫ್​ಐಆರ್​ ದಾಖಲಿಸಿದರು ಎಂಬುದನ್ನು ನ್ಯಾಯಾಲಯದಲ್ಲೇ ಪ್ರಶ್ನಿಸುತ್ತೇನೆ ಎಂದು ಪ್ರಖ್ಯಾತ ವಾಗ್ಮಿ  ಚಕ್ರವರ್ತಿ ಸೂಲಿಬೆಲೆ (Chakravarti Sulibele) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಅನೇಕ ಸಂಗತಿಗಳು ಈ ಹಿಂದೆ ಕೂಡ ನಡೆದಿದ್ದು, ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ ಎಂದಿದ್ದಾರೆ.

ಈ ಸಂಗತಿಯನ್ನು ಡೆಫಿನೆಟ್ಲಿ ಕೋರ್ಟ್​ನಲ್ಲಿ ಪ್ರಶ್ನೆ ಮಾಡುತ್ತೇನೆ. ಈ ಕಾರ್ಯಕ್ರಮಕ್ಕೆ ಪ್ರತಿಭಟನೆಯ ಸಾಧ್ಯತೆ ಹಿನ್ನೆಲೆ ಪೊಲೀಸರು ಹೆಚ್ಚಿನ ಭದ್ರತೆ ನೀಡಿದ್ದಾರೆ. ಇದಕ್ಕಾಗಿ ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸುತ್ತೇನೆ.

ಇದನ್ನೂ ಓದಿ: ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಬ್ರಿಗೇಡ್ ಹೆಚ್ಚಿನ ಕೆಲಸ ಮಾಡಲಿದೆ. ಜಿಲ್ಲಾ ಮಟ್ಟದ ಸಭೆಯನ್ನು ಖುದ್ದಾಗಿ ನಾನೇ ನಡೆಸಿದ್ದೇನೆ. ತಾಲೂಕು ಮಟ್ಟದಲ್ಲೂ ಕೂಡ ನಿಮ್ಮ ಬ್ರಿಗೇಡ್​ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. ಲೋಕಸಭಾ ಚುನಾವಣೆಗೆ 5 ತಿಂಗಳ ಮುನ್ನ ನಮ್ಮ ಕಾರ್ಯ ಶುರು ಆಗಲಿದೆ. ಚುನಾವಣೆಯ ಕೊನೆಯ ಎರಡು ತಿಂಗಳಲ್ಲಿ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ನಮ್ಮ ಬ್ರಿಗೇಡ್ 2.0 ಪ್ರಚಾರ ನಡೆಸಲಿದೆ ಎಂದರು.

ಇದನ್ನೂ ಓದಿ: ಕೆಪಿಸಿಸಿ ಐಟಿ ಸೆಲ್ ಉಪಾಧ್ಯಕ್ಷೆ ಸೌಗಂಧಿಕಾ ಕುರಿತು ಚಕ್ರವರ್ತಿ ಸೂಲಿಬೆಲೆ ಅವಹೇಳಕಾರಿ ಪೋಸ್ಟ್, ಚಿಂತಕನ ವಿರುದ್ಧ ಎಫ್​​ಐಅರ್!

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಕಡಿಮೆಯಾಗಿಲ್ಲ. ಮೋದಿಯವರ ಕಾರ್ಯ ಸಾಧನೆಗಳನ್ನು ಜನತೆಯ ಮುಂದಿಡುತ್ತೇವೆ. ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ ಹಾಗೂ ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡಲು ಈ ಉಪನ್ಯಾಸ ಕಾರ್ಯಕ್ರಮ ಮಾಡಲಾಗಿತ್ತಿದೆ. ದೇಶದ ಹಿತದೃಷ್ಟಿಯಿಂದ ಇಂತಹ ಉಪನ್ಯಾಸ ಕಾರ್ಯಕ್ರಮಗಳು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:56 pm, Mon, 28 August 23