AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Shivamogga Flight: ಶಿವಮೊಗ್ಗ ಚೆನ್ನೈ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್, ಇಲ್ಲಿದೆ ವಿವರ

ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಚೆನ್ನೈಗೂ ವಿಮಾನ ಸಂಚಾರ ಆರಂಭವಾಗಲಿದೆ. ಈ ಬಗ್ಗೆ ಮತ್ತು ವಿಮಾನ ನಿಲ್ದಾಣವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ವಿಚಾರವಾಗಿ ಸಂಸದ ಬಿವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಚೆನ್ನೈಗೆ ವಿಮಾನ ಸಂಚಾರ ಯಾವಾಗಿನಿಂದ ಆರಂಭವಾಗಲಿದೆ? ಇತರ ಯಾವ ನಗರಗಳಿಗೆಲ್ಲ ವಿಮಾನ ಸೇವೆ ದೊರೆಯಲಿದೆ ಎಂಬ ಮಾಹಿತಿ ಇಲ್ಲಿದೆ.

Chennai Shivamogga Flight: ಶಿವಮೊಗ್ಗ ಚೆನ್ನೈ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್, ಇಲ್ಲಿದೆ ವಿವರ
ಶಿವಮೊಗ್ಗ ಚೆನ್ನೈ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್, ಇಲ್ಲಿದೆ ವಿವರ
ಗಣಪತಿ ಶರ್ಮಾ
|

Updated on: Jul 15, 2024 | 8:59 AM

Share

ಶಿವಮೊಗ್ಗ, ಜುಲೈ 15: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್​​ಲೈನ್ಸ್ ವಾರಕ್ಕೊಮ್ಮೆ ವಿಮಾನಯಾನ ಸೇವೆ ಒದಗಲಿಸಲಿದೆ. ಶಿವಮೊಗ್ಗ ಚೆನ್ನೈ ವಿಮಾನ ಸೇವೆ ಬಗ್ಗೆ ಸಂಸದ ರಾಘವೇಂದ್ರ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಚೆನ್ನೈ ವಿಮಾನ ಸೇವೆಯು ಮಲೆನಾಡು ಪ್ರದೇಶದಲ್ಲಿ ಉದ್ಯಮ ಮತ್ತು ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳನ್ನು ಉತ್ತೇಜಿಸುವ ನಿರೀಕ್ಷೆಯಿದೆ ಎಂದು ಸಂಸದರು ಅಭಿಪ್ರಾಯಪಟ್ಟಿದ್ದಾರೆ.

ಸಂಸದ ಬಿವೈ ರಾಘವೇಂದ್ರ ಎಕ್ಸ್​ ಸಂದೇಶ

ಶಿವಮೊಗ್ಗದಿಂದ ಚೆನ್ನೈಗೆ ಆಗಸ್ಟ್ 15ರಿಂದ ವಿಮಾನಯಾನ ಸೇವೆ ಪ್ರಾರಂಭವಾಗಲಿದೆ. ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೂ ಸ್ಟೈಸ್ ಜೆಟ್ ವಿಮಾನ ಹಾರಾಟ ನಡೆಸಲಿದೆ. ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ತ್ವರಿತವಾಗಿ ಮಾಡುವಂತೆ ವಿಮಾನ ನಿಲ್ದಾಣದ ನಿರ್ವಹಣಾ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಹೊಸದಿಲ್ಲಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ. ಶೀಘ್ರದಲ್ಲೇ ಸಮಸ್ಯೆ ನಿವಾರಣೆಯಾಗಲಿದೆ. ಇದು ಮಲೆನಾಡಿನ ಉದ್ಯಮ, ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆ ಮೂಡಿಸಿದೆ ಎಂದು ರಾಘವೇಂದ್ರ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮುಡಾ ವಿವಾದ ಬೆನ್ನಲ್ಲೇ ಶಿವಮೊಗ್ಗದಲ್ಲಿ 158 ನಿವೇಶನ ರದ್ದು: ಏನಿದು ಸೂಡಾ ಹಂಚಿಕೆ ಕೇಸ್?

ಕುವೆಂಪು ವಿಮಾನ ನಿಲ್ದಾಣ ಎಂದೂ ಕರೆಯಲ್ಪಡುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಸ್ತುತ ನಾಲ್ಕು ಸ್ಥಳಗಳಿಗೆ ವಿಮಾನ ಸೇವೆ ಲಭ್ಯವಿದೆ. ಶಿವಮೊಗ್ಗದಿಂದ ಬೆಂಗಳೂರು (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ), ಹೈದರಾಬಾದ್ (ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ಗೋವಾ (ಮೋಪಾ ವಿಮಾನ ನಿಲ್ದಾಣ) ಮತ್ತು ತಿರುಪತಿಗೆ ವಿಮಾನ ಸೇವೆ ಲಭ್ಯವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ