AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ರಂಗಕರ್ಮಿ, ರಂಗಾಯಣ ಮಾಜಿ ನಿರ್ದೇಶಕ ಚಿದಂಬರರಾವ್ ಜಂಬೆ ನಿಧನ

ಕನ್ನಡ ರಂಗಭೂಮಿಯ ಹಿರಿಯ ನಿರ್ದೇಶಕ, ಶಿಕ್ಷಕ ಚಿದಂಬರರಾವ್ ಜಂಬೆ (75) ನಿಧನರಾಗಿದ್ದಾರೆ. ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ಕೊನೆಯುಸಿರೆಳೆದ ಅವರು, ರಾಷ್ಟ್ರೀಯ ನಾಟಕ ಶಾಲೆ ಮತ್ತು ನೀನಾಸಂನಲ್ಲಿ ಕಲಿಸಿದ್ದವರು. ರಂಗಾಯಣ ನಿರ್ದೇಶಕರಾಗಿ, ನೂರಾರು ನಾಟಕಗಳನ್ನು ನಿರ್ದೇಶಿಸಿ, ಕನ್ನಡ ರಂಗಭೂಮಿಗೆ ಅಪಾರ ಕೊಡುಗೆ ನೀಡಿದ್ದರು. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರ ನಿಧನಕ್ಕೆ ಸಾಂಸ್ಕೃತಿಕ ಲೋಕ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಖ್ಯಾತ ರಂಗಕರ್ಮಿ, ರಂಗಾಯಣ ಮಾಜಿ ನಿರ್ದೇಶಕ ಚಿದಂಬರರಾವ್ ಜಂಬೆ ನಿಧನ
ಚಿದಂಬರರಾವ್ ಜಂಬೆ
Basavaraj Yaraganavi
| Edited By: |

Updated on:Sep 12, 2026 | 10:29 PM

Share

ಶಿವಮೊಗ್ಗ, ಸೆ.12: ಕನ್ನಡ ರಂಗಭೂಮಿಯ ಹಿರಿಯ ರಂಗ ನಿರ್ದೇಶಕ, ಪ್ರಖ್ಯಾತ ರಂಗ ಶಿಕ್ಷಕ ಹಾಗೂ ಚಿಂತಕರಾದ ಚಿದಂಬರರಾವ್ ಜಂಬೆ (75) ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಗ್ರಾಮದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕನ್ನಡ ರಂಗಭೂಮಿ, ಸಾಂಸ್ಕೃತಿಕ ಲೋಕ ಹಾಗೂ ಅಪಾರ ಸಂಖ್ಯೆಯ ರಂಗಪ್ರೇಮಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಕನ್ನಡ ರಂಗಭೂಮಿಯನ್ನು ತಮ್ಮ ಅಭೂತಪೂರ್ವ ರಂಗ ಪ್ರಯೋಗಗಳ ಮೂಲಕ ಶ್ರೀಮಂತಗೊಳಿಸಿದ ಚಿದಂಬರರಾವ್ ಜಂಬೆ ಅವರ ಸಾಂಸ್ಕೃತಿಕ ಸಾಧನೆ ಅಪಾರ, ನವದೆಹಲಿಯ ಪ್ರತಿಷ್ಠಿತ ರಾಷ್ಟ್ರೀಯ ನಾಟಕ ಶಾಲೆಯಿಂದ ರಂಗಶಿಕ್ಷಣ ಪದವಿ ಪಡೆದಿದ್ದ ಇವರು, ನಂತರ ಅಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಸೈ ಎನಿಸಿಕೊಂಡಿದ್ದರು. ಹೆಗ್ಗೋಡಿನ ‘ನೀನಾಸಂ’ ರಂಗ ಶಿಕ್ಷಣ ಕೇಂದ್ರ ಹಾಗೂ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ನೂರಾರು ಕಲಾ ಪ್ರತಿಭೆಗಳನ್ನು ರೂಪಿಸಿದರು.

ಮೈಸೂರಿನ ರಂಗಾಯಣ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ಹಲವು ಅರ್ಥಪೂರ್ಣ ನಾಟಕಗಳ ಪ್ರದರ್ಶನಕ್ಕೆ ಕಾರಣರಾಗಿದ್ದರು. ದೇಶದಾದ್ಯಂತ ಪ್ರಖ್ಯಾತ ರಂಗತಂಡಗಳಿಗೆ ನಾಟಕ ನಿರ್ದೇಶಿಸಿದ್ದ ಇವರು ‘ಕತ್ತಲೆಗೆ ಹತ್ತು ತಲೆ’, ‘ಲೋಕ ಶಾಕುಂತಲ’, ‘ತ್ರಿವಳಿ ಸಹೋದರಿಯರು’, ‘ಆಮನಿ’, ‘ಶರ್ಮಿಷ್ಟೆ’ ಸೇರಿದಂತೆ ನೂರಾರು ಪ್ರಸಿದ್ಧ ನಾಟಕಗಳಿಗೆ ನಿರ್ದೇಶನ ನೀಡಿದ್ದರು.

ಇದನ್ನೂ ಓದಿ: ತಜ್ಞ ವೈದ್ಯರ ಕೊರತೆಗೆ ಬ್ರೇಕ್: ತಾಲೂಕಾಸ್ಪತ್ರೆ, ಸಿಎಚ್‌ಸಿ, ಪಿಎಚ್‌ಸಿಯನ್ನ ಮೆಡಿಕಲ್ ಕಾಲೇಜುಗಳಿಗೆ ದತ್ತು ನೀಡಲು ಮುಂದಾದ ಸರ್ಕಾರ

ಪ್ರಶಸ್ತಿ ಮತ್ತು ಪುರಸ್ಕಾರಗಳು:

ರಂಗಭೂಮಿಗೆ ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಗೌರವ ಪುರಸ್ಕಾರಗಳು ಒಲಿದು ಬಂದಿದ್ದವು.ಮೃತರ ಅಂತಿಮ ಸಂಸ್ಕಾರವು ಭಾನುವಾರ (ಸೆಪ್ಟೆಂಬರ್ 13) ಬೆಳಿಗ್ಗೆ 11 ಗಂಟೆಗೆ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಕಂಬನಿ

ಕನ್ನಡ ರಂಗಭೂಮಿಗೆ ಅನುಪಮ ಕೊಡುಗೆ ನೀಡಿದ್ದ ಹಿರಿಯ ರಂಗ ನಿರ್ದೇಶಕ, ರಂಗ ಶಿಕ್ಷಕ ಹಾಗೂ ಚಿಂತಕ ಚಿದಂಬರರಾವ್ ಜಂಬೆ (75) ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅವರ ನಿಧನದ ಸುದ್ದಿ ತಿಳಿದ ತಕ್ಷಣವೇ ತಮ್ಮ ಅಧಿಕೃತ ‘ಎಕ್ಸ್’ (X) ಖಾತೆಯಲ್ಲಿ ಸಂತಾಪ ಸೂಚಿಸಿರುವ ಸಿಎಂ, ಜಂಬೆ ಅವರೊಂದಿಗಿನ ರಂಗಭೂಮಿಯ ನಂಟನ್ನು ಹಾಗೂ ಅವರ ಸಾಂಸ್ಕೃತಿಕ ಕೊಡುಗೆಯನ್ನು ಸ್ಮರಿಸಿದ್ದಾರೆ. “ಹಿರಿಯ ರಂಗ ನಿರ್ದೇಶಕ ಹಾಗೂ ಚಿಂತಕ ಚಿದಂಬರರಾವ್ ಜಂಬೆ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ತಮ್ಮ ಅಪಾರ ಪ್ರಯೋಗಶೀಲತೆ ಮತ್ತು ಅರ್ಥಪೂರ್ಣ ರಂಗಚಿಂತನೆಗಳ ಮೂಲಕ ಅವರು ಕನ್ನಡ ರಂಗಭೂಮಿಗೆ ಗಮನಾರ್ಹ ಕೊಡುಗೆ ನೀಡಿದ್ದರು,” ಎಂದು ಸಿಎಂ ಬರೆದುಕೊಂಡಿದ್ದಾರೆ.ಅಲ್ಲದೆ, “ಪ್ರಾಧ್ಯಾಪಕರಾಗಿ, ರಂಗ ಶಿಕ್ಷಕರಾಗಿ ಹಾಗೂ ಮೈಸೂರು ರಂಗಾಯಣದ ನಿರ್ದೇಶಕರಾಗಿ ಸೇವೆ ಸಲ್ಲಿಸುವ ಮೂಲಕ ನಾಡಿನ ಅನೇಕ ಯುವ ಪ್ರತಿಭೆಗಳಿಗೆ ಅವರು ಮಾರ್ಗದರ್ಶನ ಮಾಡಿದ್ದರು. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರವು ಒಬ್ಬ ಅನುಭವಿ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ,” ಎಂದು ಪ್ರಾರ್ಥಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 pm, Sat, 12 September 26

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್