AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಎಂದು ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ

ರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದು ಬಿಎಸ್​ವೈ ಹೇಳಿದ್ದಾರೆ.

ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಎಂದು ಹೆಸರು ಘೋಷಿಸಿದ ಬಿಎಸ್ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ (ಚಿತ್ರ: ಅಂತರ್ಜಾಲ)
TV9 Web
| Edited By: |

Updated on: Jul 24, 2021 | 4:56 PM

Share

ಶಿವಮೊಗ್ಗ: ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯಕ್ಕೆ ಶಿವಪ್ಪ ನಾಯಕ ಕೃಷಿ ವಿವಿ ಎಂದು ನಾಮಕರಣ ಮಾಡಲಾಗಿದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯ ಎಂದು ಇಂದು (ಜುಲೈ 24) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬಳಿಕ, ಶಿವಮೊಗ್ಗ ಜಿಲ್ಲೆಯ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ವರ್ಚುವಲ್ ವಿಧಾನದ ಮೂಲಕ ಭಾಗಿಯಾಗಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪಾಲ್ಗೊಂಡಿದ್ದಾರೆ. ಈ ವೇಳೆ, ಸಾಗರ ತಾಲೂಕಿನ ಇರುವಕ್ಕಿ ಗ್ರಾಮದಲ್ಲಿರುವ ಕೃಷಿ ವಿವಿಗೆ ಹೆಸರು ಘೋಷಣೆ ಮಾಡಿದ್ದಾರೆ. 2 ವರ್ಷ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಅಭಿವೃದ್ಧಿಗೆ ಗರಿಷ್ಠ ಪ್ರಯತ್ನ ಮಾಡಿದ ತೃಪ್ತಿ ನನಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಏಪ್ರಿಲ್ ವೇಳೆಗೆ ಶಿವಮೊಗ್ಗ ಏರ್‌ಪೋರ್ಟ್‌ ಕಾರ್ಯಾರಂಭ ಆಗಲಿದೆ ಎಂದೂ ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಒಟ್ಟು ಸುಮಾರು 1,074 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆಯನ್ನು ಅವರು ಇಂದು ನೆರವೇರಿಸಿದ್ದಾರೆ. 560ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.

ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ನೀರುಣಿಸುವ ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಯುದ್ದೋಪಾಧಿಯಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದು ಬಿಎಸ್​ವೈ ಹೇಳಿದ್ದಾರೆ.

ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ ಏರ್‌ಬಸ್ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ಮುಂದಿನ ಎಪ್ರಿಲ್ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ವಿಮಾನ ನಿಲ್ದಾಣ ಆರಂಭದಿಂದ ಶಿವಮೊಗ್ಗ ಮಾತ್ರವಲ್ಲ ಸುತ್ತಲಿನ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗುವ ನಿರೀಕ್ಷೆಯಿದೆ ಎಂದು ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಯಡಿಯೂರಪ್ಪ; 1800 ಕೋಟಿ ರೂ. ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ

ಶಿವಮೊಗ್ಗದ ಸಣ್ಣ ಅಂಗಡಿಗಳಲ್ಲಿ ಸಿಗೋ ಮೀನು ನಂಗೆ ಬಲು ಇಷ್ಟ; ತಮಿಳು ನಟ ವಿಜಯ್ ಸೇತುಪತಿ

(CM BS Yediyurappa names Shivamogga Agricultural University as Keladi Shivappa Nayaka Krushi VV)

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!