AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಸಾವು

ಮಳೆಗಾಲ ಬಂತೆದರೆ ಅನಾರೋಗ್ಯದ ಸಮಸ್ಯೆಗಳು ತುಸು ಹೆಚ್ಚಾಗುತ್ತದೆ. ಅದರಲ್ಲೂ ಸೊಳ್ಳೆಗಳ ಉತ್ಪತ್ತಿಯಿಂದ ಜ್ವರದ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತದೆ. ಈ ಕುರಿತು ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೇ, ಇದೀಗ ಇಲಿ ಜ್ವರಕ್ಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದ ಯುವತಿ ಬಲಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಸಾವು
ಶಿವಮೊಗ್ಗದಲ್ಲಿ ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿ ಸಾವು
Basavaraj Yaraganavi
| Edited By: |

Updated on: Jul 26, 2024 | 2:47 PM

Share

ಶಿವಮೊಗ್ಗ, ಜು.26: ಇಲಿ ಜ್ವರ(Rat fever)ದಿಂದ ಬಳಲುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದ ಯುವತಿ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪಲ್ಲವಿ(21) ಮೃತ ರ್ದುದೈವಿ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಪಲ್ಲವಿ ಅವರಿಗೆ ಜುಲೈ 9ರಂದು ಜ್ವರ ಕಾಣಿಸಿಕೊಂಡಿತ್ತು. ಕೂಡಲೇ ಹತ್ತಿರದ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪಲ್ಲವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು

ಹೌದು, ಜ್ವರದ ತೀವ್ರತೆ ಹೆಚ್ಚಾದ ಹಿನ್ನಲೆ ಮೆಗ್ಗಾನ್​ ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಪಲ್ಲವಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿಯೇ ಜುಲೈ 23 ರಂದು ಯುವತಿ ಮೃತಪಟ್ಟಿದ್ದಾರೆ. ಇತ್ತ ಮನೆ ಮಗಳನ್ನು ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಇನ್ನು ಇದು ಶಿವಮೊಗ್ಗ ಜಿಲ್ಲೆಯ ಪ್ರಕರಣವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಯಾವುದೇ ಇಲಿ ಜ್ವರ ಪ್ರಕರಣಗಳು ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಡೆಂಗ್ಯೂ, ಚಿಕುನ್ ಗುನ್ಯಾ ಜತೆ ಬೆಂಗಳೂರನ್ನು ಕಾಡುತ್ತಿದೆ ಇಲಿ ಜ್ವರದ ಆತಂಕ: ವೈದ್ಯರು ನೀಡಿದ ಮುನ್ನೆಚ್ಚರಿಕೆ ಸಲಹೆಗಳು ಇಲ್ಲಿವೆ

ಇಲಿ ಜ್ವರ

ಇಲಿ-ಕಚ್ಚಿದ ಜ್ವರ (RBF) ಒಂದು ಝೂನೋಟಿಕ್ ಕಾಯಿಲೆಯಾಗಿದೆ. ಇದು ನೇರವಾಗಿ ಇಲಿಗಳು, ಜರ್ಬಿಲ್‌ಗಳು ಕಚ್ಚುವಿಕೆ ಅಥವಾ ಗೀರುಗಳಿಂದ ಮನುಷ್ಯರಿಗೆ ಹರಡಬಹುದು. ಇನ್ನು ಈ RBF ಗೆ ಕಾರಣವಾಗುವ ಬ್ಯಾಕ್ಟೀರಿಯಾಗಳು ಅಳಿಲುಗಳು, ಫೆರೆಟ್‌ಗಳು, ನಾಯಿಗಳು ಮತ್ತು ಹಂದಿಗಳಲ್ಲಿಯೂ ಕಂಡುಬಂದಿದೆ. ಹೀಗಾಗಿ ಆದಷ್ಟು ಎಚ್ಚರದಿಂದ ಇರುವುದು ಉಳಿತು. ಅದರಲ್ಲೂ ಮಳೆಗಾಲದಲ್ಲಿ ತುಸು ಹೆಚ್ಚು ಜಾಗರೂಕರಾಗಿರಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ